ಅನರ್ಹರು BJPಗೆ ಬಂದಿದ್ದಕ್ಕೆ ಟಿಕೆಟ್ ನೀಡಿ ನ್ಯಾಯ ಕೊಟ್ಟಿದ್ದೇವೆ -ಕಟೀಲ್

ಹುಬ್ಬಳ್ಳಿ: ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನು ಆಪರೇಷನ್ ಕಮಲ ಮಾಡುವುದಿಲ್ಲ. ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಕ್ಕೆ ಬಿಜೆಪಿ ಸರ್ಕಾರ ಬಂದಿಲ್ಲ. ಅನರ್ಹರು ಬಿಜೆಪಿಗೆ ಬಂದಿದ್ದಕ್ಕೆ ಅವರಿಗೆ ಟಿಕೆಟ್ ನೀಡಿ, ಒಂದು ಹಂತದ ನ್ಯಾಯ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಬೇಸರದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರನ್ನ ದಿನೇಶ್ ಗುಂಡೂರಾವ್ ಹಿಡಿದಿಟ್ಟುಕೊಳ್ಳಲಿ. ಕಾಂಗ್ರೆಸ್​ ಶಾಸಕರು ಬಿಜೆಪಿಗೆ ಬರುವುದಾದ್ರೆ ಆ ಬಗ್ಗೆ ಚರ್ಚೆ […]

ಅನರ್ಹರು BJPಗೆ ಬಂದಿದ್ದಕ್ಕೆ ಟಿಕೆಟ್ ನೀಡಿ ನ್ಯಾಯ ಕೊಟ್ಟಿದ್ದೇವೆ -ಕಟೀಲ್
ಸಾಧು ಶ್ರೀನಾಥ್​

Updated on: Dec 08, 2019 | 12:34 PM

ಹುಬ್ಬಳ್ಳಿ: ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನು ಆಪರೇಷನ್ ಕಮಲ ಮಾಡುವುದಿಲ್ಲ. ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಕ್ಕೆ ಬಿಜೆಪಿ ಸರ್ಕಾರ ಬಂದಿಲ್ಲ. ಅನರ್ಹರು ಬಿಜೆಪಿಗೆ ಬಂದಿದ್ದಕ್ಕೆ ಅವರಿಗೆ ಟಿಕೆಟ್ ನೀಡಿ, ಒಂದು ಹಂತದ ನ್ಯಾಯ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಬೇಸರದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರನ್ನ ದಿನೇಶ್ ಗುಂಡೂರಾವ್ ಹಿಡಿದಿಟ್ಟುಕೊಳ್ಳಲಿ. ಕಾಂಗ್ರೆಸ್​ ಶಾಸಕರು ಬಿಜೆಪಿಗೆ ಬರುವುದಾದ್ರೆ ಆ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ರಾಜಕೀಯ ಪಕ್ಷ, ಯಾರೆ ಬಂದ್ರು ತೆಗೆದುಕೊಳ್ಳುತ್ತೇವೆ ಎಂದು ಟೀಕೆ ಮಾಡಿದ್ದಾರೆ.

Published On - 12:27 pm, Sun, 8 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us