ನೇಹಾ ಕೊಲೆ ಪ್ರಕರಣ: ಅವಳು ನನ್ನ ಜೊತೆ ಮಾತಾಡಲ್ಲ ಅಂದಳು, ಅದಕ್ಕೆ ಚಾಕು ಹಾಕಿದೆ; ಆರೋಪಿ ಫಯಾಜ್​

Neha Hiremath Murder Case: ಗುರುವಾರ (ಏ.18) ರಂದು ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಕೊಲೆಯಾಗಿದೆ. ಕೊಲೆ ಮಾಡಿದ ಆರೋಪಿ ಫಯಾಜ್​ನನ್ನು ಧಾರವಾಡ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ. ಆರೋಪಿ ಫಯಾಜ್​ ಕಾರಾಗೃಹ ಸಿಬ್ಬಂದಿ ಎದುರು ಕೊಲೆ ಕಾರಣವನ್ನು ಬಾಯಿಬಿಟ್ಟಿದ್ದಾನೆ.

ನೇಹಾ ಕೊಲೆ ಪ್ರಕರಣ: ಅವಳು ನನ್ನ ಜೊತೆ ಮಾತಾಡಲ್ಲ ಅಂದಳು, ಅದಕ್ಕೆ ಚಾಕು ಹಾಕಿದೆ; ಆರೋಪಿ ಫಯಾಜ್​
ನೇಹಾ ಹಿರೇಮಠ, ಆರೋಪಿ ಫಯಾಜ್​
Follow us
| Updated By: ವಿವೇಕ ಬಿರಾದಾರ

Updated on:Apr 21, 2024 | 12:57 PM

ಹುಬ್ಬಳ್ಳಿ, ಏಪ್ರಿಲ್​ 21: ಗುರುವಾರ (ಏ.18) ರಂದು ಹುಬ್ಬಳ್ಳಿಯ (Hubballi) ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಕೊಲೆಯಾಗಿದೆ. ಕೊಲೆ ಆರೋಪಿ ಫಯಾಜ್​ನನ್ನು ಪೊಲೀಸರು ಬಂಧಿಸಿ, ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ. ಕಾರಾಗೃಹದಲ್ಲಿ ಆರೋಪಿ ಫಯಾಜ್ (Fayaz) ಸಿಬ್ಬಂದಿ ಎದುರು ಕೊಲೆ ಕಾರಣವನ್ನು ಬಾಯಿಟ್ಟಿದ್ದು, ಈ ಮಾಹಿತಿ ಟಿವಿ9ಗೆ ಲಭ್ಯವಾಗಿದೆ. “ಅವಳು (ನೇಹಾ) ನನ್ನ ಜೊತೆ ಮಾತನಾಡಲ್ಲ ಅಂದಳು, ಅದಕ್ಕೆ ನಾನು ಚಾಕು ಹಾಕಿದೆ” ಎಂದು ಫಯಾಜ್​ ಕಾರಾಗೃಹ ಸಿಬ್ಬಂದಿ ಎದುರು ಹೇಳಿದ್ದಾನೆ. ಅಲ್ಲದೆ ಅವತ್ತು ಏನೆಲ್ಲ ಘಟನೆ ನಡೆಯಿತು ಎಂಬುವುದನ್ನು ವಿವರಿಸಿದ್ದಾನೆ.

ಘಟನೆ ನಡೆಯುವುದಕ್ಕೂ ಮುಂಚೆಯೇ ಕಾಲೇಜು ಬಿಟ್ಟಿದ್ದೆ. ಒಂದು ವಾರದ ಹಿಂದೆ ಕಾಲೇಜ್​ಗೆ ಹೋಗಿ ನೇಹಾಳನ್ನು ಮಾತನಾಡಿಸಲು ಯತ್ನಿಸಿದೆ. ಆದರೆ ಅವಳು (ನೇಹಾ) ನಿನ್ನ ಜೊತೆ ಮಾತನಾಡಲು ಇಷ್ಟ ಇಲ್ಲ ಅಂತ ಅವೈಡ್ ಮಾಡಿ, ಹೊರಟು ಹೋದಳು”.

“ಏಪ್ರಿಲ್​ 18 ರಂದು ಅವಳು ಪರೀಕ್ಷೆ ಬರೆಯಲು ಬಿವಿಬಿ ಕಾಲೇಜಿಗೆ ಬಂದಿದ್ದಳು. ನಾನು (ಫಯಾಜ್​) ಮತ್ತೆ ಅಂದು ಕಾಲೇಜಿಗೆ ಹೋದೆ. ಪರೀಕ್ಷೆ ಮುಗಿಯುವವರೆಗೂ ಕಾಯ್ದೆ. ಪರೀಕ್ಷೆ ಮುಗಿದ ಬಳಿಕ ಹೊರಗೆ ಬಂದ ಅವಳನ್ನು ಮಾತನಾಡಿಸಲು ಯತ್ನಿಸಿದೆ. ಆದರೆ ಅವಳು ಮಾತಾಡಲ್ಲ ಅಂದಳು. ಹೀಗಾಗಿ ಅವಳಿಗೆ ಚಾಕುವಿನಿಂದ ಹತ್ತು ಬಾರಿ ಚುಚ್ಚಿದೆ. ಅವಳಿಗೆ ಚಾಕು ಹಾಕುವ ವೇಳೆ ನನ್ನ ಎರಡು ಕೈ ಬೆರಳುಗಳಿಗೆ, ಕಾಲಿಗೂ ಗಾಯವಾಗಿದೆ. ಏನಾಗಿದೆ ಅನ್ನೋದು ಗೊತ್ತಿಲ್ಲ, ಅವಳು ಮಾತಾಡಲ್ಲ ಅಂದಳು ನಾನು ಚಾಕು ಹಾಕಿದ್ದೇನೆ” ಎಂದು ಕಾರಾಗೃಹ ಸಿಬ್ಬಂದಿ ಎದುರು ಫಯಾಜ್​ ಹೇಳಿದ್ದಾನೆ.

ಇದನ್ನೂ ಓದಿ: ನೇಹಾ ಕೊಲೆ ಪ್ರಕರಣ: ಫಯಾಜ್​ನೇಹಾ ಹೆಸರಿನಲ್ಲಿ ಇನ್​ಸ್ಟಾಗ್ರಾಮ್​ ಅಕೌಂಟ್​​ ತೆರೆದು ಫೋಟೋ ಹರಿಬಿಟ್ಟ ಕಿಡಿಗೇಡಿಗಳು

ಲವ್ ಆ ತರಹ ಏನೂ ಇರಲಿಲ್ಲ, ಒಳ್ಳೆ ಹುಡಗಿ

ನೇಹಾಳ ಕುರಿತು ನೇಹಾ ಮನೆಯ ಮುಂಭಾಗದಲ್ಲಿರುವ ಮುಸ್ಲಿಂ ಕುಟುಂಬ ಮಾತನಾಡಿ, ಹಿಂದೂ ಮುಸ್ಲಿಂ ಬೇಧ ಬಾವ ಇಲ್ಲದೆ ನಾವಿದ್ದೇವೆ. ನೇಹಾ ತಾಯಿ ನಮ್ಮ ಜೊತೆ ವಾಕಿಂಗ್ ಬರುತ್ತಾ ಇದ್ದರು. ನೇಹಾ ನಮ್ಮ ಜೊತೆ ಬಹಳ ಚೆನ್ನಾಗಿ‌ ಮಾತಾಡತಿದ್ದರು. ಅವರ ಮನೆಯಲ್ಲಿ ಹಬ್ಬ ಇದ್ದರೆ ನಾವು ಹೋಗತಿದ್ವಿ. ನಮ್ಮ ಮನೆಯಲ್ಲಿ ಹಬ್ಬ ಇದ್ದರೆ ಅವರು ಬರುತ್ತಿದ್ದರು. ಎಲ್ಲರೊಂದಿಗೆ ನೇಹಾ ಚೆನ್ನಾಗಿದ್ದಳು ಎಂದು ಹೇಳಿದರು.

ಲವ್ ಆ ತರಹ ಏನೂ ಇರಲಿಲ್ಲ, ಒಳ್ಳೆ ಹುಡಗಿ. ನೇಹಾ ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:51 pm, Sun, 21 April 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು