AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಹಾ ಕೊಲೆ ಪ್ರಕರಣ: ಅವಳು ನನ್ನ ಜೊತೆ ಮಾತಾಡಲ್ಲ ಅಂದಳು, ಅದಕ್ಕೆ ಚಾಕು ಹಾಕಿದೆ; ಆರೋಪಿ ಫಯಾಜ್​

Neha Hiremath Murder Case: ಗುರುವಾರ (ಏ.18) ರಂದು ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಕೊಲೆಯಾಗಿದೆ. ಕೊಲೆ ಮಾಡಿದ ಆರೋಪಿ ಫಯಾಜ್​ನನ್ನು ಧಾರವಾಡ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ. ಆರೋಪಿ ಫಯಾಜ್​ ಕಾರಾಗೃಹ ಸಿಬ್ಬಂದಿ ಎದುರು ಕೊಲೆ ಕಾರಣವನ್ನು ಬಾಯಿಬಿಟ್ಟಿದ್ದಾನೆ.

ನೇಹಾ ಕೊಲೆ ಪ್ರಕರಣ: ಅವಳು ನನ್ನ ಜೊತೆ ಮಾತಾಡಲ್ಲ ಅಂದಳು, ಅದಕ್ಕೆ ಚಾಕು ಹಾಕಿದೆ; ಆರೋಪಿ ಫಯಾಜ್​
ನೇಹಾ ಹಿರೇಮಠ, ಆರೋಪಿ ಫಯಾಜ್​
ಶಿವಕುಮಾರ್ ಪತ್ತಾರ್
| Edited By: |

Updated on:Apr 21, 2024 | 12:57 PM

Share

ಹುಬ್ಬಳ್ಳಿ, ಏಪ್ರಿಲ್​ 21: ಗುರುವಾರ (ಏ.18) ರಂದು ಹುಬ್ಬಳ್ಳಿಯ (Hubballi) ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಕೊಲೆಯಾಗಿದೆ. ಕೊಲೆ ಆರೋಪಿ ಫಯಾಜ್​ನನ್ನು ಪೊಲೀಸರು ಬಂಧಿಸಿ, ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ. ಕಾರಾಗೃಹದಲ್ಲಿ ಆರೋಪಿ ಫಯಾಜ್ (Fayaz) ಸಿಬ್ಬಂದಿ ಎದುರು ಕೊಲೆ ಕಾರಣವನ್ನು ಬಾಯಿಟ್ಟಿದ್ದು, ಈ ಮಾಹಿತಿ ಟಿವಿ9ಗೆ ಲಭ್ಯವಾಗಿದೆ. “ಅವಳು (ನೇಹಾ) ನನ್ನ ಜೊತೆ ಮಾತನಾಡಲ್ಲ ಅಂದಳು, ಅದಕ್ಕೆ ನಾನು ಚಾಕು ಹಾಕಿದೆ” ಎಂದು ಫಯಾಜ್​ ಕಾರಾಗೃಹ ಸಿಬ್ಬಂದಿ ಎದುರು ಹೇಳಿದ್ದಾನೆ. ಅಲ್ಲದೆ ಅವತ್ತು ಏನೆಲ್ಲ ಘಟನೆ ನಡೆಯಿತು ಎಂಬುವುದನ್ನು ವಿವರಿಸಿದ್ದಾನೆ.

ಘಟನೆ ನಡೆಯುವುದಕ್ಕೂ ಮುಂಚೆಯೇ ಕಾಲೇಜು ಬಿಟ್ಟಿದ್ದೆ. ಒಂದು ವಾರದ ಹಿಂದೆ ಕಾಲೇಜ್​ಗೆ ಹೋಗಿ ನೇಹಾಳನ್ನು ಮಾತನಾಡಿಸಲು ಯತ್ನಿಸಿದೆ. ಆದರೆ ಅವಳು (ನೇಹಾ) ನಿನ್ನ ಜೊತೆ ಮಾತನಾಡಲು ಇಷ್ಟ ಇಲ್ಲ ಅಂತ ಅವೈಡ್ ಮಾಡಿ, ಹೊರಟು ಹೋದಳು”.

“ಏಪ್ರಿಲ್​ 18 ರಂದು ಅವಳು ಪರೀಕ್ಷೆ ಬರೆಯಲು ಬಿವಿಬಿ ಕಾಲೇಜಿಗೆ ಬಂದಿದ್ದಳು. ನಾನು (ಫಯಾಜ್​) ಮತ್ತೆ ಅಂದು ಕಾಲೇಜಿಗೆ ಹೋದೆ. ಪರೀಕ್ಷೆ ಮುಗಿಯುವವರೆಗೂ ಕಾಯ್ದೆ. ಪರೀಕ್ಷೆ ಮುಗಿದ ಬಳಿಕ ಹೊರಗೆ ಬಂದ ಅವಳನ್ನು ಮಾತನಾಡಿಸಲು ಯತ್ನಿಸಿದೆ. ಆದರೆ ಅವಳು ಮಾತಾಡಲ್ಲ ಅಂದಳು. ಹೀಗಾಗಿ ಅವಳಿಗೆ ಚಾಕುವಿನಿಂದ ಹತ್ತು ಬಾರಿ ಚುಚ್ಚಿದೆ. ಅವಳಿಗೆ ಚಾಕು ಹಾಕುವ ವೇಳೆ ನನ್ನ ಎರಡು ಕೈ ಬೆರಳುಗಳಿಗೆ, ಕಾಲಿಗೂ ಗಾಯವಾಗಿದೆ. ಏನಾಗಿದೆ ಅನ್ನೋದು ಗೊತ್ತಿಲ್ಲ, ಅವಳು ಮಾತಾಡಲ್ಲ ಅಂದಳು ನಾನು ಚಾಕು ಹಾಕಿದ್ದೇನೆ” ಎಂದು ಕಾರಾಗೃಹ ಸಿಬ್ಬಂದಿ ಎದುರು ಫಯಾಜ್​ ಹೇಳಿದ್ದಾನೆ.

ಇದನ್ನೂ ಓದಿ: ನೇಹಾ ಕೊಲೆ ಪ್ರಕರಣ: ಫಯಾಜ್​ನೇಹಾ ಹೆಸರಿನಲ್ಲಿ ಇನ್​ಸ್ಟಾಗ್ರಾಮ್​ ಅಕೌಂಟ್​​ ತೆರೆದು ಫೋಟೋ ಹರಿಬಿಟ್ಟ ಕಿಡಿಗೇಡಿಗಳು

ಲವ್ ಆ ತರಹ ಏನೂ ಇರಲಿಲ್ಲ, ಒಳ್ಳೆ ಹುಡಗಿ

ನೇಹಾಳ ಕುರಿತು ನೇಹಾ ಮನೆಯ ಮುಂಭಾಗದಲ್ಲಿರುವ ಮುಸ್ಲಿಂ ಕುಟುಂಬ ಮಾತನಾಡಿ, ಹಿಂದೂ ಮುಸ್ಲಿಂ ಬೇಧ ಬಾವ ಇಲ್ಲದೆ ನಾವಿದ್ದೇವೆ. ನೇಹಾ ತಾಯಿ ನಮ್ಮ ಜೊತೆ ವಾಕಿಂಗ್ ಬರುತ್ತಾ ಇದ್ದರು. ನೇಹಾ ನಮ್ಮ ಜೊತೆ ಬಹಳ ಚೆನ್ನಾಗಿ‌ ಮಾತಾಡತಿದ್ದರು. ಅವರ ಮನೆಯಲ್ಲಿ ಹಬ್ಬ ಇದ್ದರೆ ನಾವು ಹೋಗತಿದ್ವಿ. ನಮ್ಮ ಮನೆಯಲ್ಲಿ ಹಬ್ಬ ಇದ್ದರೆ ಅವರು ಬರುತ್ತಿದ್ದರು. ಎಲ್ಲರೊಂದಿಗೆ ನೇಹಾ ಚೆನ್ನಾಗಿದ್ದಳು ಎಂದು ಹೇಳಿದರು.

ಲವ್ ಆ ತರಹ ಏನೂ ಇರಲಿಲ್ಲ, ಒಳ್ಳೆ ಹುಡಗಿ. ನೇಹಾ ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:51 pm, Sun, 21 April 24

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ