AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ನೇಹಾ ಕೊಲೆ: ಚಾರ್ಜ್​ ಶೀಟ್​ನಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ, ಮದುವೆಗೆ ನಿರಾಕರಿಸಿದ್ದಕ್ಕೆ ಹತ್ಯೆ

Neha Hiremath Murder Case: ಗುರುವಾರ (ಏ.18) ರಂದು ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಕೊಲೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಹುಬ್ಬಳ್ಳಿ ನೇಹಾ ಕೊಲೆ: ಚಾರ್ಜ್​ ಶೀಟ್​ನಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ, ಮದುವೆಗೆ ನಿರಾಕರಿಸಿದ್ದಕ್ಕೆ ಹತ್ಯೆ
ನೇಹಾ ಹಿರೇಮಠ
ಶಿವಕುಮಾರ್ ಪತ್ತಾರ್
| Edited By: |

Updated on:Jul 10, 2024 | 10:28 AM

Share

ಹುಬ್ಬಳ್ಳಿ, ಜುಲೈ 10: ಹುಬ್ಬಳ್ಳಿ-ಧಾರವಾಡ (Hubballi-Dharwad) ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ (Niranjan Hiremath) ಪುತ್ರಿ ನೇಹಾ ಹಿರೇಮಠ (Neha Hiremath) ಕೊಲೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಕೊಲೆ ಹಿಂದೆ ಲವ್​ ಜಿಹಾದ್ (Love Jihad)​ ಇದೆ ಅಂತ ನೇಹಾ ತಂದೆ ನಿರಂಜನ ಹಿರೇಮಠ, ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ರಾಜ್ಯವ್ಯಾಪಿ ಪ್ರತಿಭಟನೆ ಮಾಡಿದ್ದವು. ಪ್ರಕರಣದ ತನಿಖೆ ನಡೆಸಿದ ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ. ಮದುವೆಗೆ ನಿರಾಕರಿಸಿದಕ್ಕೆ ನೇಹಾಳನ್ನು ಫಯಾಜ್​ ಕೊಲೆ ಮಾಡಿದ್ದಾನೆ ಎಂದು ಸಿಐಡಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.​

ಕೊಲೆಯಾದ 81 ದಿನಗಳ ಬಳಿಕ ಸಿಐಡಿ ಅಧಿಕಾರಿಗಳು 483 ಪುಟಗಳ ಚಾರ್ಜ್​ ಶೀಟ್​ ಸಲ್ಲಿಸಿದ್ದಾರೆ. ಚಾರ್ಜ್​​ ಶೀಟ್​ನಲ್ಲಿ ನೇಹಾಳ ತಂದೆ, ತಾಯಿ, ಸಹೋದರ, ಸಹಪಾಠಿಗಳು, ಗೆಳತಿಯರು, ಬಿವಿಬಿ ಕಾಲೇಜಿನ ಉಪನ್ಯಾಸಕರು ಸೇರಿದಂತೆ 99 ಸಾಕ್ಷ್ಯಗಳನ್ನು ಉಲ್ಲೇಖಿಸಿದ್ದಾರೆ.

ನೇಹಾ ಹಿರೇಮಠ ಮತ್ತು ಆರೋಪಿ ಫಯಾಜ್​ ಹುಬ್ಬಳ್ಳಿಯ ಪಿಸಿ ಜಾಬಿನ್​ ಕಾಲೇಜಿನಲ್ಲಿ ಬಿಸಿಎ ಅಧ್ಯಯನ ಮಾಡುತ್ತಿದ್ದಾಗ ಸಹಪಾಠಿಗಳಾಗಿದ್ದರು. ಇಬ್ಬರೂ ಆರಂಭದಲ್ಲಿ ಸ್ನೇಹಿತರಾಗಿದ್ದರು. ನಂತರ ಪ್ರೀತಿಸಲು ಆರಂಭಿಸಿದ್ದರು. 2024ರ ಮಾರ್ಚ್​ ತಿಂಗಳಲ್ಲಿ ಇಬ್ಬರ ಮಧ್ಯೆ ಜಗಳವಾಗಿ, ಮನಸ್ತಾಪ ಉಂಟಾಯಿತು. ಬಳಿಕ ನೇಹಾ ಆರೋಪಿ ಫಯಾಜ್​ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದಳು.

ಇದನ್ನೂ ಓದಿ: ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಾಲಕನ ಮೇಲೆ ಹಲ್ಲೆ

ಇದರಿಂದ ಫಯಾಜ್ ಹತಾಶಗೊಂಡು ನೇಹಾಳನ್ನು ಕೊಲೆ ಮಾಡಬೇಕೆಂದು ನಿರ್ಧಿರಿಸಿದ್ದನು. ಹೀಗಾಗಿ, ಏಪ್ರಿಲ್​ 18 ರಂದು ಕೊಲೆ ಮಾಡುವ ಮೂರು ದಿನಗಳ ಮೊದಲು ಏಪ್ರಿಲ್​ 15 ರಂದು ಧಾರವಾಡದ ಆರ್ಯ ಸೂಪರ್​ ಬಜಾರ್​ನಲ್ಲಿ ಚಾಕು ಖರೀದಿಸಿದ್ದಾನೆ. ಫಯಾಜ್​ ಚಾಕು ಖರೀದಿಸಿದ ಸಿಸಿಟಿವಿ ದೃಶ್ಯ ಸಿಐಡಿ ಅಧಿಕಾರಿಗಳಿಗೆ ಲಭ್ಯವಾಗಿದೆ. ನಂತರ ಬಳಿಕ ನ್ಯೂ ಸಾಯಿ ಗಾರ್ಮೆಂಟ್​ನಲ್ಲಿ ಟೋಪಿ ಕೆಂಪು ಟೋಪಿ ಖರೀದಿಸಿದ್ದಾನೆ.

ಬಳಿಕ ಏಪ್ರಿಲ್​ 18 ರಂದು ಫಯಾಜ್​ ಬಿವಿಬಿ ಕಾಲೇಜಿಗೆ ಬಂದು ನೇಹಾ ಎದುರು “ಇಷ್ಟು ದಿನ ಪ್ರೀತಿ ಮಾಡಿ ಈಗ ಮೋಸ ಮಾಡುತ್ತಿದ್ದೀಯಾ? ನನ್ನನ್ನು ಮದುವೆ ಆಗುವುದಿಲ್ಲವೇ? ಈ ನಿನ್ನನ್ನು ಬಿಡುವುದಿಲ್ಲವೆಂದು ಸಂಜೆ 4:40ರ ಸುಮಾರಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿ ಕೊಲೆ ಮಾಡಿ, ಚಾಕು ಅಲ್ಲೆ ಬಿಟ್ಟು ಓಡಿ ಹೋಗಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ​

ಆರೋಪಿ ಫಯಾಜ್​ ವಿರುದ್ಧ ಕಲಂ 302 (ಮರಣದಂಡನೆ ಇಲ್ಲವೇ ಜೀವಾವಧಿ ಶಿಕ್ಷೆ) 341 (ಒಂದು ತಿಂಗಳು ಜೈಲು ಶಿಕ್ಷೆ) ಹಾಗೂ 506 (ಜೀವ ಬೆದರಿಕೆಗಾಗಿ 7 ವರ್ಷಗಳ ಜೈಲು ಶಿಕ್ಷೆ) ಅಡಿಯಲ್ಲಿ ದೋಷಾರೋಪ ಹೊರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:21 am, Wed, 10 July 24

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್