ಮದುವೆಗಾಗಿ ಫಯಾಜ್ ನಮಗೆ ಪೀಡಿಸುತ್ತಿದ್ದ, ಮಗಳಿಗೆ ಜೀವ ಬೆದರಿಕೆ ಹಾಕಿದ್ದ: ನೇಹಾ ತಂದೆ​

ಗುರುವಾರ ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಕೊಲೆಯಾಗಿತ್ತು. ಈ ಕೊಲೆ ಪ್ರೀತಿ ವಿಚಾರಕ್ಕೆ ಆಗಿದೆ ಅಂತ ಒಂದು ವರ್ಗದ ವಾದವಾದರೇ, ಲವ್​ ಜಿಹಾದ್​ಗೆ ವಿರೋಧಿಸಿದಕ್ಕೆ ಕೊಲೆ ನಡೆದಿದೆ ಎಂಬುವುದು ಮತ್ತೊಂದು ವರ್ಗದ ವಾದ. ಈ ನಡುವೆ ನೇಹಾ ಪೋಷಕರು ನೀಡಿದ ದೂರು ಕುತೂಹಲಕ್ಕೆ ಕಾರಣವಾಗಿದೆ.

ಮದುವೆಗಾಗಿ ಫಯಾಜ್ ನಮಗೆ ಪೀಡಿಸುತ್ತಿದ್ದ, ಮಗಳಿಗೆ ಜೀವ ಬೆದರಿಕೆ ಹಾಕಿದ್ದ: ನೇಹಾ ತಂದೆ​
ನೇಹಾ ಹಿರೇಮಠ, ತಂದೆ ನಿರಂಜನ ಹಿರೇಮಠ, ಆರೋಪಿ ಫಯಾಜ್​
Follow us
| Updated By: ವಿವೇಕ ಬಿರಾದಾರ

Updated on:Apr 20, 2024 | 2:55 PM

ಹುಬ್ಬಳ್ಳಿ, ಏಪ್ರಿಲ್​ 20: ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ (Neha Hiremath Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್​ ವಿರುದ್ಧ ನೇಹಾ ತಂದೆ ನಿರಂಜನ ಹಿರೇಮಠ ದೂರು ದಾಖಸಿದ್ದಾರೆ. ದೂರಿನಲ್ಲಿ “ಆರೋಪಿ ಫಯಾಜ್ (Fayaz)​ ಮತ್ತು ನೇಹಾ ಸಹಪಾಠಿಗಳು. ಬಿಸಿಎ ಅಂತಿಮ ವರ್ಷದಲ್ಲಿ ಓದುತ್ತಿರುವಾಗ ಫಯಾಜ್​ ನೇಹಾಳಿಗೆ ಪ್ರಪೋಸ್​ ಮಾಡಿದ್ದನು. ಅಲ್ಲದೆ ನಿಮ್ಮ ಮಗಳನ್ನು ನನಗೆ ಮದುವೆ ಮಾಡಿಕೊಡಿ ಅಂತ ಪದೇ ಪದೇ ಕರೆ ಮಾಡಿ ಪೀಡಿಸುತ್ತಿದ್ದನು. ಆಗ ನಮ್ಮ ಮಗಳು ನಿನ್ನನ್ನು ಇಷ್ಟಪಡುತ್ತಿಲ್ಲ, ಅವಳಿಗೆ ಹೆಚ್ಚಿನ ವ್ಯಾಸಂಗ ಮಾಡುವ ಇಚ್ಛೆ ಇದೆ ಎಂದು ಫಯಾಜ್​ಗೆ ಹೇಳಿದ್ವಿ. ಇದರಿಂದ ಕೋಪಗೊಂಡ ಫಯಾಜ್​ ಗುರುವಾರ (ಏ.18) ರಂದು ಸಾಯಂಕಾಲ 4:30ಕ್ಕೆ ನೇಹಾ ಹಿರೇಮಠ ಅವರ ಕತ್ತು, ಹೊಟ್ಟೆ ಮತ್ತು ಕಾಲಿಗೆ 7-8 ಬಾರಿ ಇರಿದು ಕೊಲೆ ಮಾಡಿದ್ದಾನೆ” ಎಂದು ದೂರಿನಲ್ಲಿ ನೇಹಾ ತಂದೆ ನಿರಂಜನ ಹಿರೇಮಠ ದಾಖಲಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ನೇಹಾ ಪೋಷಕರು ಟವಿ9 ಜೊತೆ ಮಾತನಾಡಿ “ನೇಹಾಳನ್ನು ಪ್ರೀತಿ ಮಾಡುತ್ತಿದ್ದೇನೆ, ಮದುವೆ ಮಾಡಿಕೊಡಿ ಅಂತ ಫಯಾಜ್​ 4-5 ತಿಂಗಳಿಂದ ಬೆನ್ನು ಬಿದ್ದಿದ್ದನು. ಹೆಚ್ಚಿನ ವ್ಯಾಸಂಗ ಮಾಡುವುದಿದೆ ಅಂತ ಫಯಾಜ್​ನ ತಂದೆ, ತಾಯಿಗೆ ದೂರವಾಣಿ ಕರೆ ಮಾಡಿ ಹೇಳಿದ್ದೇವು. ಇಷ್ಟಾದರೂ ನಮ್ಮ ಮಗಳ ಬೆನ್ನು ಬಿಟ್ಟಿರಲಿಲ್ಲ. ಮದುವೆಯಾಗದಿದ್ದರೆ ನಿನ್ನನ್ನು ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದನು. ಈ ಬಗ್ಗೆ ನೇಹಾ ನಮಗೆ ಹೇಳಿದ್ದಳು” ನೇಹಾ ಪೋಷಕರು ಹೇಳಿದರು.

ಇದನ್ನೂ ಓದಿ: ನನ್ನ ಮಗನಿಗೆ ನೇಹಾ ಪ್ರಪೋಸ್​ ಮಾಡಿದ್ದಳು: ಆರೋಪಿ ಫಯಾಜ್ ತಾಯಿ, ವಿಡಿಯೋ ನೋಡಿ

ನ್ಯಾಯ ಕೊಡಿಸುವ ಪ್ರಯತ್ನ ಮಾಡುತ್ತೇನೆ: ಹೆಬ್ಬಾಳ್ಕರ್​

ನೇಹಾ ಮನೆಗೆ ಇಂದು (ಏ.20) ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಭೇಟಿ ನೀಡಿ ನೇಹಾ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೇಹಾ ತಂದೆ, ತಾಯಿ ತಮ್ಮ ದುಃಖವನ್ನು ತೋಡಿಕೊಂಡಿದ್ದಾರೆ. ಸೂಕ್ತ ತನಿಖೆ ಮಾಡಿ ನ್ಯಾಯ ಕೊಡಿಸುವ ಪ್ರಯತ್ನ ಮಾಡುತ್ತೇನೆ. ನಿಷ್ಪಕ್ಷಪಾತವಾಗಿ ತನಿಖೆ ಆಗಲು ನಾನು ಸಹಾಯ ಮಾಡುತ್ತೇನೆ. ಇಂತಹ ಕೃತ್ಯವೆಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು. ನಿಷ್ಪಕ್ಷಪಾತವಾಗಿ ತನಿಖೆ ಆಗುತ್ತೆ ಎಂದು ಭರವಸೆ ಕೊಟ್ಟಿದ್ದೇನೆ. ನಾನು ಬೇರೆ ವಿಚಾರ ಬಗ್ಗೆ ಮಾತನಾಡಿದರೆ ತನಿಖೆ ಬೇರೆ ಆಗುತ್ತೆ. ನಿರಂಜನ ಹಿರೇಮಠ ಕುಟಂಬ ಜತೆ ನಮ್ಮ ಪಕ್ಷದವರು ನಿಲ್ಲುತ್ತೇವೆ ಎಂದು ಹೇಳಿದರು.

ತಕ್ಕ ಶಿಕ್ಷೆ ಆಗಬೇಕು: ಫಕೀರ ಸಿದ್ದೇಶ್ವರ ಸ್ವಾಮೀಜಿ

ಯಾರು ತಪ್ಪು ಮಾಡಿದ್ದಾರೆ ಅವರಿಗೆ ತಕ್ಕ ಶಿಕ್ಷೆ ಆಗಬೇಕು. ಕಾಲಕ್ಕೆ ತಕ್ಕಂತೆ ಕಾನುನು ಬದಲಾಗಬೇಕು. ದುರಾಸೆ ಬಹಳ ಬೆಳೆದಿದೆ, ಆಚಾರ ವಿಚಾರ ಕಡಿಮೆ ಆಗಿದೆ. ಮಕ್ಕಳು ಮಾತು ಕೇಳದೆ ಇರುವುದರಿಂದ ಈ ರೀತಿ ಆಗುತ್ತಿದೆ ಎಂದು ಶಿರಹಟ್ಟಿ ಫಕೀರ ಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:57 am, Sat, 20 April 24

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!