ನೇಹಾ ಕೊಲೆ ಖಂಡನೀಯ, ಏ.21 ರಂದು ಅರ್ಧ ದಿನ ಧಾರವಾಡ ಬಂದ್​ಗೆ ಮುಸ್ಲಿಂ ಸಂಘಟನೆ ಕರೆ

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆಯನ್ನು ಅಂಜುಮನ್​ ಸಂಸ್ಥೆ ಖಂಡಿಸಿದೆ. ಅಂಜುಮನ್​ ಸಂಸ್ಥೆ ಮುಖಂಡರು ಇಂದು (ಏ.21) ನೇಹಾ ಮನೆಗೆ ಭೇಟಿ ನೀಡಿ, ಆಕೆಯ ತಂದೆ ನಿರಂಜನ್​ ಹಿರೇಮಠ ಮತ್ತು ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಅಲ್ಲದೆ ನಾಳೆ (ಏ.22) ರಂದು ಅರ್ಧ ದಿನ ಧಾರವಾಡ ಬಂದ್​ಗೆ ಕರೆ ಕೊಟ್ಟಿದ್ದಾರೆ.

ನೇಹಾ ಕೊಲೆ ಖಂಡನೀಯ, ಏ.21 ರಂದು ಅರ್ಧ ದಿನ ಧಾರವಾಡ ಬಂದ್​ಗೆ ಮುಸ್ಲಿಂ ಸಂಘಟನೆ ಕರೆ
ನೇಹಾ ಹಿರೇಮಠ, ನಿರಂಜನ್​ ಹಿರೇಮಠ (ಎಡಚಿತ್ರ) ಆರೋಪಿ ಫಯಾಜ್​ (ಬಲಚಿತ್ರ)
Follow us
| Updated By: ವಿವೇಕ ಬಿರಾದಾರ

Updated on: Apr 21, 2024 | 1:40 PM

ಹುಬ್ಬಳ್ಳಿ, ಏಪ್ರಿಲ್​ 21: ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಕೊಲೆಯಾಗಿರುವುದು ದುರ್ದೈವದ ಸಂಗತಿ. ನಮ್ಮ ಮಹಾನಗರದಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಘಟನೆಯನ್ನು ಖಂಡಿಸುತ್ತೇವೆ. ನಮ್ಮ ಸಮುದಾಯದಿಂದ ನಾಳೆ (ಏ.22) ಅರ್ಧ ದಿನ ಸ್ವಯಂ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುತ್ತೇವೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಅಂಗಡಿ ಧಾರವಾಡ ಬಂದ್ (Dharwad Bandh) ಇರಲಿದೆ. ಅಂಗಡಿಗಳ ಮೇಲೆ ಜಸ್ಟೀಸ್ ಫಾರ್ ನೇಹಾ ಅಂತ ಸ್ಟಿಕ್ಕರ್ ಹಚ್ಚುತ್ತೇವೆ ಎಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್​  ಹೇಳಿದರು.

ಅಂಜುಮನ್ ಸಂಸ್ಥೆ ‌ಮುಖಂಡರು‌ ಇಂದು (ಏ.21) ನೇಹಾ ಮನೆಗೆ ತೆರಳಿ, ನೇಹಾ ತಂದೆ ನಿರಂಜನ ಹಿರೇಮಠ ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಇಸ್ಮಾಯಿಲ್​, ಫಯಾಜ್ ಮಾಡಿರುವುದು ಹೀನ ಕೆಲಸ. ಅವಳು ನಿರಂಜನ ಮಗಳಲ್ಲ, ನಮ್ಮ ಮಗಳು. ಕೊಲೆ ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ಆಗಬೇಕು. ಈಗಾಗಲೇ ಪೊಲೀಸ್ ಆಯುಕ್ತರಿಗೆ ಮನವಿ ಕೊಟ್ಟಿದ್ದೇವೆ. ಇದು ವಿಶೇಷ ಪ್ರಕರಣ ಎಂದು ತಿಳಿದು 90 ದಿನದಲ್ಲಿ ಪ್ರಕರಣ ಬಗೆಹರಿಸಬೇಕು. ಸಮಾಜ ಯಾವುದೇ ಇರಲಿ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.

ನಿನ್ನೆ (ಏ.20) ರಂದು ನಡೆದ ನಮ್ಮ ಸಭೆಯಲ್ಲಿ ಘಟನೆಯನ್ನು ಖಂಡಿಸಿದ್ದೇವೆ. ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದೇವೆ. ಅಂಜುಮನ್ ಆವರಣದಿಂದ ಮೌನ ಮೆರವಣಿಗೆ ಮಾಡಲ್ಲಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ಕಾಲೇಜಿನ ಒಂದು ಕೊಠಡಿಗೆ ನೇಹಾ ಹೆಸರನ್ನು ಇಡುತ್ತೇವೆ. ಯಾರೂ ಮುಸ್ಲಿಂ ವಕೀಲರು ವಕಾಲತ್ತು ವಹಿಸಬಾರದು. ನಾವು ವಕೀಲರಿಗೆ ಹೇಳಿದ್ದೇವೆ. ಅವರು ಒಪ್ಪಿದ್ದಾರೆ.

ಇದನ್ನೂ ಓದಿ: ಅವಳು ನನ್ನ ಜೊತೆ ಮಾತಾಡಲ್ಲ ಅಂದಳು, ಅದಕ್ಕೆ ಚಾಕು ಹಾಕಿದೆ; ಆರೋಪಿ ಫಯಾಜ್​

ಪ್ರಕರಣ ಮುಗಿಯವರೆಗೂ ನಮ್ಮ ಸಮಾಜ ಅವರ ಜೊತೆ ಇರತ್ತೆ. ನಿರಂಜನ ಮತ್ತು ನಾವು ಬಹಳ ವರ್ಷದಿಂದ ಸಂಪರ್ಕದಲ್ಲಿ ಇದ್ದೇವೆ. ಯಾರು ನೋಡದಂತಹ ಶಿಕ್ಷೆಯನ್ನು ದೇವರು ಫಯಾಜ್​ಗೆ ಕೊಡಲಿ ಪ್ರಾರ್ಥನೆ ಮಾಡುತ್ತೇವೆ. ಪೊಲೀಸರು ಪ್ರಾಮಾಣಿಕವಾಗಿ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳಲಿ.

ಫಯಾಜ್‌ನ ತಂದೆ-ತಾಯಿ ಕೊಲೆಗೆ ಕೈ ಜೋಡಿಸಿದ್ದರೆ, ಅವರಿಗೂ ಶಿಕ್ಷೆ ನೀಡಲಿ. ಇಂತಹ ಕೆಲಸ ಯಾರೂ ಮಾಡಬೇಡಿ, ನಿಮ್ಮ ಭವಿಷ್ಯಕ್ಕಾಗಿ ಚೆನ್ನಾಗಿ ಓದಿ ಅಂತ ಎಲ್ಲ ಧರ್ಮದ ಮಕ್ಕಳಿಗೆ ನಾನು ಹೇಳುತ್ತೇನೆ. ಯಾರೂ ಲವ್ ಜಿಹಾದ್ ಪದ ಬಳಕೆ ಮಾಡಬಾರದು. ಲವ್ ಜಿಹಾದ್ ಕುರಿತು ನಾನು ಮಾತಾಡಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು