AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಐಡಿ ಕಸ್ಟಡಿ ಅಂತ್ಯ, ನೇಹಾ ಕೊಲೆಗಡುಕನಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಏ.18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ನೇಹಾ ಎಂಬ ವಿಧ್ಯಾರ್ಥಿಯನ್ನು ಫಯಾಜ್ ಎಂಬಾತ ಮಾರಾಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ಸಿಐಡಿ ಕಸ್ಟಡಿ ಅಂತ್ಯವಾಗಿದ್ದು,​ ಇಂದು(ಏ.30) ಮರಳಿ‌ ನ್ಯಾಯಾಲಯಕ್ಕೆ ಹಾಜರು ಪಡಿಸಿ ಧಾರವಾಡ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ.

ಸಿಐಡಿ ಕಸ್ಟಡಿ ಅಂತ್ಯ, ನೇಹಾ ಕೊಲೆಗಡುಕನಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ನೇಹಾ ಕೊಲೆ ಪ್ರಕರಣ
ಶಿವಕುಮಾರ್ ಪತ್ತಾರ್
| Edited By: |

Updated on:Apr 30, 2024 | 5:27 PM

Share

ಹುಬ್ಬಳ್ಳಿ, ಏ.30: ಹುಬ್ಬಳ್ಳಿಯ(Hubli) ಕೆಎಎಲ್​ಇ ವಿವಿ ಆವರಣದಲ್ಲಿ ನಡೆದಿದ್ದ ನೇಹಾ ಕೊಲೆ ಪ್ರಕರಣಕ್ಕೆ (Neha Hiremath murder case) ಸಂಬಂಧಿಸಿದಂತೆ ಆರೋಪಿ ಫಯಾಜ್ ಸಿಐಡಿ ಕಸ್ಟಡಿ ಅಂತ್ಯವಾಗಿದ್ದು,​ ಈ ಹಿನ್ನಲೆ ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರು ದಿನಗಳ ಕಾಲ ವಿಚಾರಣೆಗೆ ಪಡೆದಿದ್ದ ಸಿಐಡಿ ಅಧಿಕಾರಿಗಳು, ಇಂದು(ಏ.30) ಮರಳಿ‌ ನ್ಯಾಯಾಲಯಕ್ಕೆ ಹಾಜರು ಪಡಿಸಿ ಧಾರವಾಡ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ.

ಘಟನೆ ವಿವರ

ಏ.18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ನೇಹಾ ಎಂಬ ವಿಧ್ಯಾರ್ಥಿಯನ್ನು ಫಯಾಜ್ ಎಂಬಾತ ಮಾರಾಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಿದ್ದ. ಇದಾದ ಬಳಿಕ ಒಂದು ಗಂಟೆಯಲ್ಲಿಯೇ ಆತನನ್ನ ಬಂಧಿಸಲಾಗಿತ್ತು. ನಂತರ ಹುಬ್ಬಳ್ಳಿಯ ಒಂದನೇ JMFC ಕೋರ್ಟ್, ಫಯಾಜ್​ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಮಾಡಿತ್ತು. ಈ ಮದ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆಯಾದ ಹಿನ್ನಲೆ ಫಯಾಜ್​​ನನ್ನ ಆರು ದಿನಗಳ ಕಾಲ ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದು, ವಿವಿಧ ಆಯಾಮಗಳಲ್ಲಿ ಫಯಾಜ್ ವಿಚಾರಣೆ ನಡೆಸಲಾಗಿದೆ.

ಇದನ್ನೂ ಓದಿ:ನೇಹಾ ಕೊಲೆ ಪ್ರಕರಣ; ಫಯಾಜ್ ವಿರುದ್ದ ವಕಾಲತ್ತು ವಹಿಸಬಾರದೆಂದು ವಕೀಲರ ಸಂಘಕ್ಕೆ ಮನವಿ

ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಆರೋಪಿ ಫಯಾಜ್​​ ಜೊತೆಗೆ ಕ್ರೈಂ ನಡೆದ ಸ್ಥಳದಲ್ಲಿ ಮಹಜರು ಮಾಡುವ ಮೂಲಕ ಫೀಲ್ಡಿಗಿಳಿದಿದ್ದರು. ಬಳಿಕ ಆರೋಪಿ ಫಯಾಜ್​​ನ ಮತ್ತಷ್ಟು ಆತಂಕಕಾರಿ ವಿಷಯಗಳು ಬೆಳಕಿಗೆ ಬಂದಿತ್ತು. ಕೊಲೆ ಮಾಡುವ ಕೆಲವು ದಿನಗಳ ಮುನ್ನ ಆರೋಪಿ ಫಯಾಜ್​​ ನೇಹಾ ಹಿರೇಮಠ ಮನೆ ಬಳಿಯೇ ಓಡಾಡಿದ್ದಾನೆ. ಆ ಮೂಲಕ ನೇಹಾ ಚಲನವಲನವನ್ನು ಗಮನಿಸಿದ್ದ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:58 pm, Tue, 30 April 24

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!