AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad Dairy Farming – ಕಾಡಿನಲ್ಲೂ ಮೇವಿಲ್ಲ, ಹೈನುಗಾರಿಕೆಯನ್ನೇ ಅವಲಂಬಿಸಿರುವ 18 ಗೌಳಿ ಗ್ರಾಮಗಳ ನೂರಾರು ಕುಟುಂಬಗಳು ಸಂಕಷ್ಟದಲ್ಲಿ

ಹೆಚ್ಚಿನ ಸಂಖ್ಯೆಯಲ್ಲಿ ಗೌಳಿ ಜನಾಂಗದವರು ರಸ್ತೆ ಬದಿಯ ಮೇವು, ಅರಣ್ಯದಂಚಿನಲ್ಲಿನ ಮೇವನ್ನು ಅವಲಂಬಿಸಿರುತ್ತಾರೆ. ಆದರೆ ಅರಣ್ಯದಲ್ಲೂ ಮಳೆ ಇಲ್ಲದೆ ಮೇವು ಬೆಳೆಯದೇ ಇರುವುದರಿಂದ ಕುಟುಂಬಗಳು ಸಂಕಷ್ಟಕ್ಕೆ ಸಿಕ್ಕಿವೆ. ಜಿಲ್ಲಾಡಳಿತ ಕೂಡಲೇ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ, ಕ್ರಮ ತೆಗೆದುಕೊಳ್ಳಬೇಕಾಗಿದೆ. ಆ ಮೂಲಕ ಈ ಜನಾಂಗದವರ ಹಿತ ಕಾಪಾಡಬೇಕಿದೆ.

Dharwad Dairy Farming - ಕಾಡಿನಲ್ಲೂ ಮೇವಿಲ್ಲ, ಹೈನುಗಾರಿಕೆಯನ್ನೇ ಅವಲಂಬಿಸಿರುವ 18 ಗೌಳಿ ಗ್ರಾಮಗಳ ನೂರಾರು ಕುಟುಂಬಗಳು ಸಂಕಷ್ಟದಲ್ಲಿ
ಹೈನುಗಾರಿಕೆಯನ್ನೇ ಅವಲಂಬಿಸಿರುವ 18 ಗೌಳಿ ಗ್ರಾಮಗಳ ನೂರಾರು ಕುಟುಂಬಗಳು ಸಂಕಷ್ಟದಲ್ಲಿ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಸಾಧು ಶ್ರೀನಾಥ್​

Updated on:Feb 19, 2024 | 12:14 PM

ರಾಜ್ಯದಲ್ಲಿ ಈ ಬಾರಿ ಮಳೆ ಆಗದೇ ಜನರು ಕಂಗಾಲಾಗಿ ಹೋಗಿದ್ದಾರೆ. ಅದರಲ್ಲೂ ರೈತ ಸಮುದಾಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಇದೇ ವೇಳೆ ಧಾರವಾಡ ಜಿಲ್ಲೆಯಲ್ಲಿ ಒಂದು ಸಮುದಾಯವಂತೂ ಈ ಬಾರಿ ಬೇಸಿಗೆಯನ್ನು ಹೇಗೆ ಎದುರಿಸೋದು ಅನ್ನೋದು ಗೊತ್ತಾಗದೇ ಸಮಸ್ಯೆಗೆ ಸಿಲುಕಿದೆ. ಹೈನುಗಾರಿಕೆ (Dairy Farming) ಮೇಲೆಯೇ ಅವಲಂಬಿತವಾಗಿರೋ ಆ ಕುಟುಂಬಗಳು ತಮ್ಮ ಜಾನುವಾರುಗಳಿಗೆ ಮೇವು (Fodder) ಸಿಗದೆ ಇದೀಗ ಸಂಕಷ್ಟಕ್ಕೆ ಸಿಲುಕಿವೆ. ಧಾರವಾಡ ಅರೆಮಲೆನಾಡು ಜಿಲ್ಲೆ (Dharwad forests). ಪಶ್ಚಿಮಘಟ್ಟವು ಇಲ್ಲಿಂದಲೇ ಶುರುವಾಗುತ್ತೆ. ಅರ್ಧ ಜಿಲ್ಲೆಯಲ್ಲಿ ಒಣಬೇಸಾಯ ಇದ್ದರೆ ಮತ್ತೆ ಅರ್ಧ ಜಿಲ್ಲೆ ಮಲೆನಾಡಿನ ಸೆರಗಿನಲ್ಲಿದೆ. ಹೀಗೆ ಕಾಡಿನ ಮಧ್ಯೆ ಇರೋ ಅನೇಕ ಗ್ರಾಮಗಳಲ್ಲಿ ಜಾನುವಾರು ಸಾಕಣೆ ಹಾಗೂ ಹೈನುಗಾರಿಕೆ ಪ್ರಮುಖ ಆದಾಯದ ಮೂಲವಾಗಿದೆ. ಇನ್ನು ಜಿಲ್ಲೆಯಲ್ಲಿ ಹೈನುಗಾರಿಕೆ ಮೇಲೆಯೇ ಅವಲಂಬಿತವಾಗಿರೋ ಗೌಳಿ ಸಮುದಾಯಗಳಿವೆ. ಜಿಲ್ಲೆಯಲ್ಲಿ ಒಟ್ಟು 18 ಗೌಳಿ ಗ್ರಾಮಗಳಿವೆ (Gauli villages). ಈ ಗೌಳಿ ಸಮುದಾಯದವರು ಹೈನುಗಾರಿಕೆ ಬಿಟ್ಟರೆ ಬೇರೆ ಯಾವುದೇ ಕೆಲಸಗಳನ್ನು ಮಾಡೋದೇ ಇಲ್ಲ. ಆದರೆ ಇದೀಗ ಮಳೆಯ ಕೊರತೆಯಿಂದಾಗಿ ಈ ಸಮುದಾಯದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮುದಾಯದವರು ಹಗಲು ಹೊತ್ತಿನಲ್ಲಿ ತಮ್ಮ ಜಾನುವಾರುಗಳನ್ನು ಕಾಡಿನಂಚಿನಲ್ಲಿ ಮೇಯಲು ಬಿಡುತ್ತಾರೆ. ಹೀಗಾಗಿ ಹೆಚ್ಚಿನ ಖರ್ಚು ಇಲ್ಲದೇ ತಮ್ಮ ಜಾನುವಾರುಗಳನ್ನು ರಕ್ಷಿಸಿಕೊಳ್ಳಲು ಅವರಿಗೆ ಅನುಕೂಲವಾಗುತ್ತಿತ್ತು. ಆದರೆ ಈ ಬಾರಿ ಮಳೆಯ ಕೊರತೆಯಿಂದಾಗಿ ಕಾಡಿನಲ್ಲಿಯೂ ಮೇವಿಲ್ಲದೇ ಪರದಾಡುವಂತಾಗಿದೆ.

ಈಗಾಗಾಗಲೇ ಅನೇಕ ಕಡೆಗಳಲ್ಲಿ ಈ ಸಮುದಾಯದವರು ಜಾನುವಾರುಗಳನ್ನು ಮಾರುತ್ತಿದ್ದಾರೆ. ಮತ್ತೆ ಅನೇಕ ಕಡೆಗಳಲ್ಲಿ ಮಾರಾಟ ಮಾಡಲು ನಿರ್ಧಾರ ಮಾಡಿದ್ದಾರೆ. ಒಂದು ವೇಳೆ ಈ ಜನಾಂಗದವರು ಜಾನುವಾರುಗಳನ್ನು ಮಾರಾಟ ಮಾಡಿದರೆ ಮುಂದಿನ ದಿನಗಳಲ್ಲಿ ಅವರಿಗೆ ತೀವ್ರ ಸಂಕಷ್ಟ ಎದುರಾಗಲಿದೆ. ಏಕೆಂದರೆ ಈ ಉದ್ಯೋಗ ಬಿಟ್ಟರೆ ಅವರಿಗೆ ಬೇರೆ ಯಾವುದೇ ಉದ್ಯೋಗ ಗೊತ್ತಿಲ್ಲ.

Also Read: ಒಂಟಿ ಕಾಡಾನೆ ದಾಂಧಲೆ – ಆಶಾ ಕಾರ್ಯಕರ್ತೆ ಸೇರಿದಂತೆ ಇಬ್ಬರು ಮಹಿಳೆಯರು, ಮೂರು ಹಸು ದಾರುಣ ಸಾವು

ಜಾನುವಾರುಗಳನ್ನೇ ಮಾರಾಟ ಮಾಡಿಬಿಟ್ಟರೆ ಮುಂದೆ ಏನು, ಹೇಗೆ ಅನ್ನೋದು ಅವರಿಗೆ ಗೊತ್ತಾಗೋದೇ ಇಲ್ಲ. ಇದೇ ಕಾರಣಕ್ಕೆ ತಮ್ಮ ಜಾನುವಾರುಗಳನ್ನು ಉಳಿಸಿಕೊಳ್ಳಬೇಕೆಂದರೆ ಅವರಿಗೆ ಮೇವಿನ ಅವಶ್ಯಕತೆ ಇದೆ. ಸರಕಾರ ಕೂಡಲೇ ಮೇವು ಬ್ಯಾಂಕ್ ಆರಂಭಿಸಬೇಕಿದೆ. ಇನ್ನು ಈ ಬಗ್ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಅವರನ್ನು ಕೇಳಿದರೆ, ಇನ್ನೂ ಕೆಲ ವಾರಗಳ ಕಾಲ ಮೇವಿನ ಸಮಸ್ಯೆ ಇಲ್ಲ. ಆದರೂ ಈ ಬಗ್ಗೆ ಮತ್ತೊಮ್ಮೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳೋದಾಗಿ ಹೇಳುತ್ತಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಈ ಜನಾಂಗದವರು ರಸ್ತೆ ಬದಿಯ ಮೇವು, ಅರಣ್ಯದಂಚಿನಲ್ಲಿನ ಮೇವಿನ ಮೇಲೆಯೇ ಅವಲಂಬಿತರಿದ್ದಾರೆ. ಹೀಗಾಗಿ ಅಲ್ಲಿಯೇ ಮಳೆ ಇಲ್ಲದೇ ಮೇವು ಬೆಳೆಯದೇ ಇದ್ದಿದ್ದರಿಂದಾಗಿ ಸಾಕಷ್ಟು ಸಮಸ್ಯೆಯಾಗಿದೆ. ಒಟ್ಟಿನಲ್ಲಿ ಜಿಲ್ಲಾಡಳಿತ ಕೂಡಲೇ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ, ಕ್ರಮ ತೆಗೆದುಕೊಳ್ಳಬೇಕಾಗಿದೆ. ಆ ಮೂಲಕ ಈ ಜನಾಂಗದವರ ಹಿತ ಕಾಪಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:11 pm, Mon, 19 February 24

ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್
ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ