AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಪ್ರಧಾನಿ ಮಧ್ಯ ಪ್ರವೇಶ ಅಗತ್ಯವಿಲ್ಲ -ಸಚಿವ ಪ್ರಲ್ಹಾದ್ ಜೋಶಿ

Maharashtra Karnataka Border Dispute: ನಾವು-ಚೀನಾ ಪಾಕಿಸ್ತಾನ ಜೊತೆ ಬಡಿದಾಡಬೇಕು ವಿನಃ ಅದು ಬಿಟ್ಟು ಕರ್ನಾಟಕ-ಮಹಾರಾಷ್ಟ್ರ ಅಂತ ಬಡಿದಾಡುವುದು ಅತ್ಯಂತ ದೌರ್ಭಾಗ್ಯದ ಸಂಗತಿ ಎಂದು ಸಚಿವ ಪ್ರಲ್ಹಾದ್ ಜೋಶಿ ಮಾರ್ಮಿಕವಾಗಿ ಹೇಳಿದರು.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಪ್ರಧಾನಿ ಮಧ್ಯ ಪ್ರವೇಶ ಅಗತ್ಯವಿಲ್ಲ -ಸಚಿವ ಪ್ರಲ್ಹಾದ್ ಜೋಶಿ
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಪ್ರಧಾನಿ ಮಧ್ಯ ಪ್ರವೇಶ ಅಗತ್ಯವಿಲ್ಲ -ಸಚಿವ ಪ್ರಲ್ಹಾದ್ ಜೋಶಿ
TV9 Web
| Updated By: ಸಾಧು ಶ್ರೀನಾಥ್​|

Updated on: Nov 28, 2022 | 8:28 PM

Share

ಧಾರವಾಡ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ (Maharashtra Karnataka Border Dispute) ವಿಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಸೇರಿದಂತೆ ಯಾರೂ ಮಧ್ಯೆ ಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪ್ರಲ್ಹಾದ ಜೋಶಿ (Pralhad Joshi) ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, “ಯಾರ ಮಧ್ಯ ಪ್ರವೇಶದ ಅಗತ್ಯ ಇಲ್ಲ. ಏಕೆಂದರೆ ಈ ವಿವಾದ ಈಗ ಸುಪ್ರೀಂ ಕೋರ್ಟ್‌ನಲ್ಲಿದ್ದು, ಅಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ. ಆದ್ದರಿಂದ ಈ ಕುರಿತು ಅನಗತ್ಯವಾದ ಗೊಂದಲ ಬೇಡ, ಸುಪ್ರೀಂ ಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುತ್ತದೆ. ಅದರಲ್ಲಿ ಅನುಮಾನ ಬೇಡ ಎಂದ ಅವರು ಕರ್ನಾಟಕದ ಒಂದಿಂಚು ಭೂಮಿ ಮಹಾರಾಷ್ಟ್ರಕ್ಕೆ ಹೋಗುವುದಿಲ್ಲ. ಮಹಾರಾಷ್ಟ್ರದ ಒಂದಿಂಚು ಭೂಮಿ ನಮಗೆ ಬರೋದಿಲ್ಲ’’ ಎಂದು ಅವರು ತಿಳಿಸಿದರು.

ಗಡಿ ಗಲಾಟೆಯ ಹಿನ್ನೆಲೆಯಲ್ಲಿ ಭಾಷಾವಾರು ಪ್ರಾಂತ್ಯಗಳ ರಚನೆಯಾಗಿದ್ದು, ಆ ವಿಚಾರ ಈಗಾಗಲೇ ಇತ್ಯರ್ಥವಾಗಿರುವಂಥದ್ದು. ಈಗ ಅದನ್ನು ಯಾರೂ ಪ್ರಸ್ತಾಪ ಮಾಡುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ನಲ್ಲಿ ನುರಿತ ಕಾನೂನು ತಜ್ಞರಿದ್ದಾರೆ. ಗಡಿ ವಿಚಾರಗಳ ಬಗ್ಗೆ ಅವರು ಸಮರ್ಥವಾಗಿ ವಾದ ಮಾಡುತ್ತಾರೆ ಎಂದರು.

“ಈಗಾಗಲೇ ಮಹಾರಾಷ್ಟ್ರದವರು ಹೇಳಿಕೆ ಕೊಟ್ಟಿದ್ದಾರೆ ಎಂದು ನಾವೂ ಕೂಡ ಅನಗತ್ಯ ಹೇಳಿಕೆಗಳನ್ನು ಕೊಡುವುದು ಬೇಡ ಎಂದಿರುವ ಅವರು, ಆ ಕುರಿತಂತೆ ಎಲ್ಲ ಪಕ್ಷದ ನಾಯಕರಲ್ಲಿ ನಾವು ಆಗ್ರಹ ಮಾಡುತ್ತೇವೆ. ನಮ್ಮ ಭಾರತೀಯ ಜನತಾ ಪಾರ್ಟಿಯ ನಾಯಕರಿಗೂ ನಾವು ಮನವಿ ಮಾಡುತ್ತೇವೆ. ಪ್ರಚೋದನಾತ್ಮಕ ಹೇಳಿಕೆಯಿಂದ ಏನೂ ಆಗುವುದಿಲ್ಲ, ಅದು ಸರಿಯಲ್ಲ. ಈಗ ಕನ್ನಡ-ಮರಾಠಿಗಳು ನೆಮ್ಮದಿಯಿಂದ ಇದ್ದಾರೆ. ಆದ ಕಾರಣ, ನಮ್ಮ ರಾಜ್ಯದಲ್ಲಿ ಮರಾಠಿಗರಿದ್ದರೂ ನೆಮ್ಮದಿಯಿಂದ ಇದ್ದಾರೆ” ಎಂದು ಹೇಳಿದರು.

“ನಾವು-ಚೀನಾ ಪಾಕಿಸ್ತಾನ ಜೊತೆ ಬಡಿದಾಡಬೇಕು ವಿನಃ ಅದು ಬಿಟ್ಟು ಕರ್ನಾಟಕ-ಮಹಾರಾಷ್ಟ್ರ ಅಂತ ಬಡಿದಾಡುವುದು ಅತ್ಯಂತ ದೌರ್ಭಾಗ್ಯದ ಸಂಗತಿ ಎಂದು ಅವರು ಮಾರ್ಮಿಕವಾಗಿ ಹೇಳಿದರು. ವಿವಾದ ಸುಪ್ರೀಂ ಕೋರ್ಟ್‌ನಲ್ಲಿದ್ದು ಮಹಾರಾಷ್ಟ್ರ ಸುಪ್ರೀಂಕೋರ್ಟ್‌ಗೆ ಹೋಗಬಾರದಿತ್ತು” ಎಂದೂ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

Also Read:

ಮಹಾರಾಷ್ಟ್ರ ಗಡಿ ವಿವಾದ : ಸಿಎಂ ಬೊಮ್ಮಾಯಿ ನೇತೃತ್ವದ ಸಭೆ ಅಂತ್ಯ, ಸರ್ವ ಪಕ್ಷ ಸಭೆ ಬಳಿಕ ಅಂತಿಮ ನಿರ್ಧಾರ

Also Read:

ಕರ್ನಾಟಕ ನಮಗೆ ಪಾಠ ಮಾಡುವ ಅಗತ್ಯವಿಲ್ಲ: ಬೊಮ್ಮಾಯಿ ಸರ್ಕಾರದ ವಿರುದ್ಧ ಮಹಾ ಸಿಎಂ ಏಕನಾಥ್ ಶಿಂಧೆ ವಾಗ್ದಾಳಿ

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,