Pralhad Joshi: ಜಗದೀಶ್ ಶೆಟ್ಟರ್ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಪಕ್ಷಕ್ಕೆ ಅವರ ಸೇವೆಯ ಅಗತ್ಯವಿದೆ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Jagdish Shettar: ಸುಮಾರು 30 ನಿಮಿಷಗಳ ಕಾಲ ಜಗದೀಶ್ ಶೆಟ್ಟರ್ ಜೊತೆ ಮಾತುಕತೆ ನಡೆಸಿದ ಪ್ರಲ್ಹಾದ್ ಜೋಶಿ ಹೈಕಮಾಂಡ್ ಟಿಕೆಟ್ ನೀಡುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ.

Pralhad Joshi: ಜಗದೀಶ್ ಶೆಟ್ಟರ್ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಪಕ್ಷಕ್ಕೆ ಅವರ ಸೇವೆಯ ಅಗತ್ಯವಿದೆ - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಜಗದೀಶ್ ಶೆಟ್ಟರ್ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Follow us
| Updated By: ಸಾಧು ಶ್ರೀನಾಥ್​

Updated on:Apr 15, 2023 | 2:36 PM

ಹಾಲಿ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್​​ ಅವರಿಗೆ ಟಿಕೆಟ್ ನೀಡುವ (Hubli-Dharwad Central Assembly constituency) ವಿಚಾರ ಕೇಂದ್ರದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ (Hubballi) ಇಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಜಗದೀಶ್ ಶೆಟ್ಟರ್ ಅವರ ಜೊತೆ ಮಾತುಕತೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೆಟ್ಟರ್ ಬಿಜೆಪಿ ಬಿಡುವ ಮಾತೇ ಇಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಬಿಜೆಪಿ ಕಟ್ಟಿ ಬೆಳೆಸುವಲ್ಲಿ ಜಗದೀಶ್ ಶೆಟ್ಟರ್ ಅವರ ಪಾತ್ರವೂ ಇದೆ. 30 ವರ್ಷಗಳಿಂದ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ. ಬಿಜೆಪಿಗೆ ಶೆಟ್ಟರ್ ಅವರ ಸೇವೆ ಮುಂದೆಯೂ ಅಗತ್ಯವಾಗಿದೆ.

ಜಗದೀಶ್ ಶೆಟ್ಟರ್ ಜೊತೆ ಟಿಕೆಟ್ ವಿಚಾರವಾಗಿ ಸುದೀರ್ಘವಾಗಿ ಚರ್ಚೆ ಮಾಡಿದ್ದೇನೆ. ಕೇಂದ್ರದ ವರಿಷ್ಠರು ಸಹ ಚರ್ಚೆ ಮಾಡುತ್ತಿದ್ದಾರೆ. ಪಕ್ಷಕ್ಕಾಗಿ ಶೆಟ್ಟರ್ ಅವರ ಸೇವೆಯ ಅಗತ್ಯತೆ ಕುರಿತು ಅವರ ಜೊತೆ ಚರ್ಚಿಸಿದ್ದೇನೆ. ಹೈಕಮಾಂಡ್ ಕೂಡ ಅವರ ಪಕ್ಷ ಸೇವೆಯನ್ನ ಪರಿಗಣಿಸುವ ವಿಶ್ವಾಸವಿದೆ. ಶೆಟ್ಟರ್ ಅವರು ಪಕ್ಷದಲ್ಲಿ ಇರಲಿದ್ದಾರೆ. ಪಕ್ಷ ಬಿಡುವ ಮಾತೇ ಇಲ್ಲ ಎಂದು ಜೋಶಿ ಹೇಳಿದರು.

ಸುಮಾರು 30 ನಿಮಿಷಗಳ ಕಾಲ ಜಗದೀಶ್ ಶೆಟ್ಟರ್ ಜೊತೆ ಮಾತುಕತೆ ನಡೆಸಿದ ಪ್ರಲ್ಹಾದ್ ಜೋಶಿ ಹೈಕಮಾಂಡ್ ಟಿಕೆಟ್ ನೀಡುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:33 pm, Sat, 15 April 23

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?