AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ವೀಕ್ಷಣೆಗೆ ಹುಬ್ಬಳ್ಳಿಯಿಂದ NWKRTC ವಿಶೇಷ ಬಸ್​

ಶರಾವತಿ ನದಿ ಮೈದುಂಬಿ ಹರಿಯುತ್ತಿರುವುದರಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್​ ಬಳಿ ಇರುವ ಜೋಗ ಜಲಾಪತ ಭೋರ್ಗರೆಯುತ್ತ ಧುಮ್ಮುಕ್ಕುತ್ತಿದೆ. ಜಲಾಪಾತವನ್ನು ಕಣ್ತುಂಬಿಕೊಳ್ಳಲು ಪ್ರವಾಸಗರ ದಂಡೇ ಹರಿದು ಬರುತ್ತಿದೆ. ಪ್ರವಾಸಿಗರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ್​ ಬಸ್​ಗಳನ್ನು ಬಿಟ್ಟಿದೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Aug 04, 2024 | 3:06 PM

Share

ಹುಬ್ಬಳ್ಳಿ, ಆಗಸ್ಟ್​​ 04: ಕರ್ನಾಟಕದ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಲಿಂಗನಮಕ್ಕೆ ಜಲಾಶಯ (Linganmakki Dam) ತಂಬಿದ್ದು, ಭಾರಿ ಪ್ರಮಾಣದಲ್ಲಿ ನೀರನ್ನು ಶರಾವತಿ ನದಿಗೆ (Sharavati River) ಬಿಡಲಾಗುತ್ತಿದೆ. ಶರಾವತಿ ನದಿ ಮೈದುಂಬಿ ಹರಿಯುತ್ತಿರುವುದರಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್​ ಬಳಿ ಇರುವ ಜೋಗ ಜಲಾಪತ (Jog Falls) ಭೋರ್ಗರೆಯುತ್ತ ಧುಮ್ಮುಕ್ಕುತ್ತಿದೆ. ಹಾಲಿನಂತೆ ಧುಮ್ಮುಕ್ಕುವ ರಾಜಾ, ರಾಣಿ, ರೋರಲ್​​ ಹಾಗೂ ರಾಜೇಟ್​ ಜಲಾಪಾತಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಗರ ದಂಡೇ ಹರಿದು ಬರುತ್ತಿದೆ. ಪ್ರವಾಸಿಗರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವಿಶೇಷ್​ ಬಸ್​ಗಳನ್ನು ಬಿಟ್ಟಿದೆ.

ಎನ್​​ಡಬ್ಲೂಕೆಆರ್​ಟಿಸಿಯ ಹುಬ್ಬಳ್ಳಿ ಗ್ರಾಮಾಂತರ, ಹಾವೇರಿ, ಗದಗ ವಿಭಾಗದಿಂದ ವಿಶೇಷಗಳನ್ನು ಬಿಡಲಾಗಿದೆ. ಈ ಬಸ್​ಗಳು ಪ್ರತಿ ಎರಡನೇ ಮತ್ತು ನಾಲ್ಕನೇ ಶನಿವಾರ, ಭಾನುವಾರ ಹಾಗೂ ರಜೆ ದಿನಗಳಂದು ಸಂಚರಿಸಲಿವೆ.

ಬಸ್​ ವೇಳಾಪಟ್ಟಿ

ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಐರಾವತ ಮಲ್ಟಿಅಕ್ಸೆಲ್​ ವೋಲ್ವೋ ಬಸ್​ ಹುಬ್ಬಳ್ಳಿಯಿಂದ ಬೆಳಗ್ಗೆ 8 ಗಂಟೆಗೆ ಹೊರಡುತ್ತದೆ. ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 600 ರೂ. ದರ ನಿಗದಿ ಮಾಡಲಾಗಿದೆ. ಇದೇ ವಿಭಾಗದಿಂದ ಬೆಳಗ್ಗೆ 7:30 ರಾಜಹಂಸ ಹೊರಡುತ್ತದೆ. ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 430 ರೂ. ದರ ನಿಗದಿ ಮಾಡಲಾಗಿದೆ. ಇದೇ ವಿಭಾಗದಿಂದ ಬೆಳಗ್ಗೆ 8:10ಕ್ಕೆ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ ಹೊರಡುತ್ತದೆ. ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 350 ರೂ. ದರ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: KSRTC Package Tour: ಜೋಗ ಜಲಪಾತ ವೀಕ್ಷಣೆಗೆ ಕೆಎಸ್​ಆರ್​ಟಿಸಿಯಿಂದ ಊಟ ಸಹಿತ ಟೂರ್​ ಪ್ಯಾಕೇಜ್​, ಇಲ್ಲಿದೆ ಸಮಯ, ದರ ವಿವರ

ಹಾವೇರಿ ವಿಭಾಗದ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ ಬೆಳಗ್ಗೆ 8 ಗಂಟೆಗೆ ಹಾವೇರಿ ಬಸ್​ ನಿಲ್ದಾಣದಿಂದ ಹೊರಡುತ್ತದೆ. ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 340 ರೂ. ದರ ನಿಗದಿ ಮಾಡಲಾಗಿದೆ. ಇದೇ ವಿಭಾಗದ ರಾಣೇಬೆನ್ನೂರು ಬಸ್​ ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಡುವ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 320 ರೂ. ದರ ನಿಗದಿ ಮಾಡಲಾಗಿದೆ. ರಾಣೇಬೆನ್ನೂರಿನಿಂದ ಹೋಗುವ ರಾಜಹಂಸ ಬಸ್ ಬೆಳಗ್ಗೆ​ 8:30ಕ್ಕೆ ಹೊರಡಲಿದೆ. ​​ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 425 ರೂ. ದರ ನಿಗದಿ ಮಾಡಲಾಗಿದೆ.

ಗದಗ ವಿಭಾಗದ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ ಬೆಳಗ್ಗೆ 7 ಗಂಟೆಗೆ ಗದಗ ಬಸ್​ ನಿಲ್ದಾಣದಿಂದ ಹೊರಡುತ್ತದೆ. ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 500 ರೂ. ದರ ನಿಗದಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ