AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ವೀಕ್ಷಣೆಗೆ ಹುಬ್ಬಳ್ಳಿಯಿಂದ NWKRTC ವಿಶೇಷ ಬಸ್​

ಶರಾವತಿ ನದಿ ಮೈದುಂಬಿ ಹರಿಯುತ್ತಿರುವುದರಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್​ ಬಳಿ ಇರುವ ಜೋಗ ಜಲಾಪತ ಭೋರ್ಗರೆಯುತ್ತ ಧುಮ್ಮುಕ್ಕುತ್ತಿದೆ. ಜಲಾಪಾತವನ್ನು ಕಣ್ತುಂಬಿಕೊಳ್ಳಲು ಪ್ರವಾಸಗರ ದಂಡೇ ಹರಿದು ಬರುತ್ತಿದೆ. ಪ್ರವಾಸಿಗರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ್​ ಬಸ್​ಗಳನ್ನು ಬಿಟ್ಟಿದೆ.

ವಿವೇಕ ಬಿರಾದಾರ
|

Updated on: Aug 04, 2024 | 3:06 PM

Share

ಹುಬ್ಬಳ್ಳಿ, ಆಗಸ್ಟ್​​ 04: ಕರ್ನಾಟಕದ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಲಿಂಗನಮಕ್ಕೆ ಜಲಾಶಯ (Linganmakki Dam) ತಂಬಿದ್ದು, ಭಾರಿ ಪ್ರಮಾಣದಲ್ಲಿ ನೀರನ್ನು ಶರಾವತಿ ನದಿಗೆ (Sharavati River) ಬಿಡಲಾಗುತ್ತಿದೆ. ಶರಾವತಿ ನದಿ ಮೈದುಂಬಿ ಹರಿಯುತ್ತಿರುವುದರಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್​ ಬಳಿ ಇರುವ ಜೋಗ ಜಲಾಪತ (Jog Falls) ಭೋರ್ಗರೆಯುತ್ತ ಧುಮ್ಮುಕ್ಕುತ್ತಿದೆ. ಹಾಲಿನಂತೆ ಧುಮ್ಮುಕ್ಕುವ ರಾಜಾ, ರಾಣಿ, ರೋರಲ್​​ ಹಾಗೂ ರಾಜೇಟ್​ ಜಲಾಪಾತಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಗರ ದಂಡೇ ಹರಿದು ಬರುತ್ತಿದೆ. ಪ್ರವಾಸಿಗರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವಿಶೇಷ್​ ಬಸ್​ಗಳನ್ನು ಬಿಟ್ಟಿದೆ.

ಎನ್​​ಡಬ್ಲೂಕೆಆರ್​ಟಿಸಿಯ ಹುಬ್ಬಳ್ಳಿ ಗ್ರಾಮಾಂತರ, ಹಾವೇರಿ, ಗದಗ ವಿಭಾಗದಿಂದ ವಿಶೇಷಗಳನ್ನು ಬಿಡಲಾಗಿದೆ. ಈ ಬಸ್​ಗಳು ಪ್ರತಿ ಎರಡನೇ ಮತ್ತು ನಾಲ್ಕನೇ ಶನಿವಾರ, ಭಾನುವಾರ ಹಾಗೂ ರಜೆ ದಿನಗಳಂದು ಸಂಚರಿಸಲಿವೆ.

ಬಸ್​ ವೇಳಾಪಟ್ಟಿ

ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಐರಾವತ ಮಲ್ಟಿಅಕ್ಸೆಲ್​ ವೋಲ್ವೋ ಬಸ್​ ಹುಬ್ಬಳ್ಳಿಯಿಂದ ಬೆಳಗ್ಗೆ 8 ಗಂಟೆಗೆ ಹೊರಡುತ್ತದೆ. ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 600 ರೂ. ದರ ನಿಗದಿ ಮಾಡಲಾಗಿದೆ. ಇದೇ ವಿಭಾಗದಿಂದ ಬೆಳಗ್ಗೆ 7:30 ರಾಜಹಂಸ ಹೊರಡುತ್ತದೆ. ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 430 ರೂ. ದರ ನಿಗದಿ ಮಾಡಲಾಗಿದೆ. ಇದೇ ವಿಭಾಗದಿಂದ ಬೆಳಗ್ಗೆ 8:10ಕ್ಕೆ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ ಹೊರಡುತ್ತದೆ. ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 350 ರೂ. ದರ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: KSRTC Package Tour: ಜೋಗ ಜಲಪಾತ ವೀಕ್ಷಣೆಗೆ ಕೆಎಸ್​ಆರ್​ಟಿಸಿಯಿಂದ ಊಟ ಸಹಿತ ಟೂರ್​ ಪ್ಯಾಕೇಜ್​, ಇಲ್ಲಿದೆ ಸಮಯ, ದರ ವಿವರ

ಹಾವೇರಿ ವಿಭಾಗದ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ ಬೆಳಗ್ಗೆ 8 ಗಂಟೆಗೆ ಹಾವೇರಿ ಬಸ್​ ನಿಲ್ದಾಣದಿಂದ ಹೊರಡುತ್ತದೆ. ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 340 ರೂ. ದರ ನಿಗದಿ ಮಾಡಲಾಗಿದೆ. ಇದೇ ವಿಭಾಗದ ರಾಣೇಬೆನ್ನೂರು ಬಸ್​ ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಡುವ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 320 ರೂ. ದರ ನಿಗದಿ ಮಾಡಲಾಗಿದೆ. ರಾಣೇಬೆನ್ನೂರಿನಿಂದ ಹೋಗುವ ರಾಜಹಂಸ ಬಸ್ ಬೆಳಗ್ಗೆ​ 8:30ಕ್ಕೆ ಹೊರಡಲಿದೆ. ​​ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 425 ರೂ. ದರ ನಿಗದಿ ಮಾಡಲಾಗಿದೆ.

ಗದಗ ವಿಭಾಗದ ವಾಯುವ್ಯ ಕರ್ನಾಟಕ ಸಾರಿಗೆ ಬಸ್​ ಬೆಳಗ್ಗೆ 7 ಗಂಟೆಗೆ ಗದಗ ಬಸ್​ ನಿಲ್ದಾಣದಿಂದ ಹೊರಡುತ್ತದೆ. ಈ ಬಸ್​ನಲ್ಲಿ ಹೋಗಿ-ಬರಲು ಒಬ್ಬರಿಗೆ 500 ರೂ. ದರ ನಿಗದಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು