AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತ್ರಾ ವಿಶೇಷ: ಬದಾಮಿ, ಸವದತ್ತಿ ಯಲ್ಲಮನ ಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​​ ವ್ಯವಸ್ಥೆ

ರೇಣುಕಾ ಯಲ್ಲಮ್ಮ ದೇವಿ ಹಾಗೂ ಬನಶಂಕರಿ ದೇವಿ ಜಾತ್ರೆ ಜ.23ರಿಂದ 30ರವರೆಗೆ ಜರುಗಲಿದೆ. ಹೀಗಾಗಿ ಎನ್‌ಡಬ್ಲ್ಯುಕೆಆರ್‌ಟಿಸಿ ಹುಬ್ಬಳ್ಳಿ ವಿಭಾಗವು ಜಾತ್ರೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ವಿಶೇಷ ಬಸ್‌ಗಳನ್ನು ಬಿಟ್ಟಿದೆ. ಹುಬ್ಬಳ್ಳಿ ಮತ್ತು ನವಲಗುಂದ ಎರಡು ನಿಲ್ದಾಣಗಳಿಂದ ಯಲ್ಲಮ್ಮನ ಗುಡ್ಡ ಮತ್ತು ಬನಶಂಕರಿಗೆ ಬಸ್​ಗಳು ತೆರಳುತ್ತವೆ.

ಜಾತ್ರಾ ವಿಶೇಷ: ಬದಾಮಿ, ಸವದತ್ತಿ ಯಲ್ಲಮನ ಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​​ ವ್ಯವಸ್ಥೆ
ಕೆಎಸ್​ಆರ್​ಟಿಸಿ, ಸವದತ್ತಿ
ವಿವೇಕ ಬಿರಾದಾರ
|

Updated on:Jan 23, 2024 | 8:44 AM

Share

ಹುಬ್ಬಳ್ಳಿ, ಜನವರಿ 23: ಬದಾಮಿ ಬನಶಂಕರಿ (Badami Banshankari) ಮತ್ತು ಸವದತ್ತಿ ಯಲ್ಲಮ್ಮನ (Savadatti Yellamma) ಗುಡ್ಡದ ರೇಣಕಾಂಬೆ ದೇವಿ ದೇವಸ್ಥಾನಗಳು ಉತ್ತರ ಕರ್ನಾಟಕದ ಪ್ರಮುಖ ಆದಿಶಕ್ತಿ ದೇವಲಾಯಗಳು. ನಿತ್ಯ ರಾಜ್ಯ ಮತ್ತು ಅಂತರಾಜ್ಯಗಳಿಂದ ಅಸಂಖ್ಯ ಭಕ್ತರು ಈ ದೇವಸ್ಥಾನಗಳಿಗೆ ಬರುತ್ತಾರೆ. ವರ್ಷದ ಪ್ರತೀ ಪೂರ್ಣಿಮೆಯಂದು ಯಲ್ಲಮ್ಮನ ಗುಡ್ಡದಲ್ಲಿ ಜಾತ್ರೆ ನಡೆಯುತ್ತದೆ. ಆದರೆ, ಡಿಸೆಂಬರ್ ತಿಂಗಳಲ್ಲಿ ಬರುವ ಹೊಸ್ತಿಲು ಹುಣ್ಣಿಮೆ, ಜನವರಿ ತಿಂಗಳಲ್ಲಿ ಬರುವ ಬನದ ಹುಣ್ಣಿಮೆ ಹಾಗೂ ಫೆಬ್ರುವರಿ ತಿಂಗಳಲ್ಲಿ ಬರುವ ಭರತ ಹುಣ್ಣಿಮೆ ಸಂದರ್ಭದಲ್ಲಿ ರೇಣುಕಾ ದೇವಿಯ ದೊಡ್ಡ ಜಾತ್ರೆಗಳು ನಡೆಯುತ್ತವೆ.

ಇನ್ನು ಜನವರಿ ತಿಂಗಳಿನಲ್ಲಿ ಬರುವ ಬನದ ಹುಣ್ಣಿಮೆಯಂದ ಬದಾಮಿ ಬನಶಂಕರಿಗೆ ಮತ್ತು ಯಲ್ಲಮ್ಮನ ಗುಡ್ಡದಲ್ಲಿ ಜಾತ್ರೆ ನಡೆಯುತ್ತದೆ. ಈ ಹಿನ್ನಲೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ತೆರಳುತ್ತಾರೆ. ಈ ಬಾರಿಯ ರೇಣುಕಾ ಯಲ್ಲಮ್ಮ ದೇವಿ ಹಾಗೂ ಬನಶಂಕರಿ ದೇವಿ ಜಾತ್ರೆ ಜ.23ರಿಂದ 30ರವರೆಗೆ ಜರುಗಲಿದೆ. ಹೀಗಾಗಿ ಎನ್‌ಡಬ್ಲ್ಯುಕೆಆರ್‌ಟಿಸಿ (NWKRTC) ಹುಬ್ಬಳ್ಳಿ ವಿಭಾಗವು ಬಾದಾಮಿ ಮತ್ತು ಸವದತ್ತಿಗೆ ಜ.23 ರಿಂದ 30 ರವರೆಗೆ ಜಾತ್ರೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ವಿಶೇಷ ಬಸ್‌ಗಳನ್ನು ಬಿಟ್ಟಿದೆ.

ಇದನ್ನೂ ಓದಿ: BMTC ಬಸ್​​ನಲ್ಲಿ ಮಹಿಳಾ ಸೀಟ್​ನಲ್ಲಿ ಕೂತ್ತಿದ್ದ ಪುರುಷರಿಂದ ಕಲೆಕ್ಟ್ ಆಯ್ತು ಬರೊಬ್ಬರಿ 34 ಸಾವಿರ ರೂ. ದಂಡ​!

ಹುಬ್ಬಳ್ಳಿ ಮತ್ತು ನವಲಗುಂದ ಎರಡು ನಿಲ್ದಾಣಗಳಿಂದ ಯಲ್ಲಮ್ಮನ ಗುಡ್ಡ ಮತ್ತು ಬನಶಂಕರಿಗೆ ಬಸ್​ಗಳು ತೆರಳುತ್ತವೆ. ಹುಬ್ಬಳ್ಳಿ-ಯಲ್ಲಮ್ಮನ ಗುಡ್ಡದ ಬಸ್‌ಗಳು ಧಾರವಾಡ ಮತ್ತು ಸವದತ್ತಿ ಮಾರ್ಗವಾಗಿ ಸಂಚರಿಸಿದರೆ, ಹುಬ್ಬಳ್ಳಿ-ಬನಶಂಕರಿ ಬಸ್‌ಗಳು ನವಲಗುಂದ, ನರಗುಂದ, ಕೊಣ್ಣೂರು, ಕುಳಗೇರಿ, ಬಾದಾಮಿ ಮಾರ್ಗವಾಗಿ ಸಂಚರಿಸಲಿವೆ. ನವಲಗುಂದಿಂದ ಯಲ್ಲಮ್ಮನ ಗುಡ್ಡಕ್ಕೆ ಹೋಗುವ ಬಸ್‌ಗಳು- ಗೊಬ್ಬರಗುಂಪಿ ಕ್ರಾಸ್, ಅಳಗವಾಡಿ, ಹಂಚಿನಾಳ, ಹಿರೇಕುಂಬಿ ಮಾರ್ಗವಾಗಿ ಸಂಚರಿಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:14 am, Tue, 23 January 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!