AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕಾಲದಲ್ಲಿ ಭಾರತವನ್ನ ಜಗತ್ತು ಅಪಹಾಸ್ಯ ಮಾಡುತ್ತಿತ್ತು. ಇಂದು ನಮ್ಮ ಯೋಗವನ್ನು ಜಗತ್ತು ಸ್ವೀಕಾರ ಮಾಡಿದೆ; ಪ್ರಲ್ಹಾದ್ ಜೋಶಿ

ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆ ದೇಶಾದ್ಯಂತ ಯೋಗ ಮಾಡುವ ಮೂಲಕ ಭಾರತದ ಶಕ್ತಿಯನ್ನ ಜಗತ್ತಿಗೆ ತೋರಿಸಲಾಗುತ್ತಿದೆ. ಅದರಂತೆ ನಗರದ ಜಿಮ್ ಖಾನಾ ಮೈದಾನದಲ್ಲಿ ಕ್ಷಮತಾ ಸೇವಾ ಸಂಸ್ಥೆ, ಧನ್ಯಸ್ಮಿ ಯೋಗ ಕೇಂದ್ರ ಸಹಯೋಗದಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಶಾಸಕ ಮಹೇಶ್ ಟೆಂಗಿನಕಾಯಿ ಭಾಗವಹಿಸಿದ್ದರು.

ಕಿರಣ್ ಹನುಮಂತ್​ ಮಾದಾರ್
|

Updated on:Jun 21, 2023 | 10:13 AM

Share

ಹುಬ್ಬಳ್ಳಿ: ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆ ದೇಶಾದ್ಯಂತ ಯೋಗ ಮಾಡುವ ಮೂಲಕ ಭಾರತದ ಶಕ್ತಿಯನ್ನ ಜಗತ್ತಿಗೆ ತೋರಿಸಲಾಗುತ್ತಿದೆ. ಅದರಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶ್ವ ಯೋಗ ದಿನ(International Yoga Day)ವನ್ನ ಆಚರಿಸಲಾಗುತ್ತಿದೆ. ಅದರಂತೆ ನಗರದ ಜಿಮ್ ಖಾನಾ ಮೈದಾನದಲ್ಲಿ ಕ್ಷಮತಾ ಸೇವಾ ಸಂಸ್ಥೆ, ಧನ್ಯಸ್ಮಿ ಯೋಗ ಕೇಂದ್ರ ಸಹಯೋಗದಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನಲೆ ನೂರಾರು ಯೋಗ ಪಟುಗಳು ಭಾಗಿಯಾಗಿದ್ದು, ಯೋಗಗುರು ವಿನಾಯಕ ತಲಗೇರಿ ಅವರ ನೇತೃತ್ವದಲ್ಲಿ ಯೋಗ ದಿನಾಚರಣೆಯನ್ನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi) ಹಾಗೂ ಶಾಸಕ ಮಹೇಶ್ ಟೆಂಗಿನಕಾಯಿ(Mahesh Tenginakayi) ಯೋಗ ದಿನಾಚರಣೆಯಲ್ಲಿ ಯೋಗ ಮಾಡುವುದರ ಮೂಲಕ ಯೋಗದ ಮಹತ್ವವನ್ನ ಸಾರಿದರು.

ಇನ್ನು ಯೋಗ ದಿನಾಚರಣೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ‘ಒಂದು ಕಾಲದಲ್ಲಿ ಭಾರತ ಅಂದ್ರೆ, ಜಗತ್ತು ಅಪಹಾಸ್ಯ ಮಾಡುತ್ತಿತ್ತು. ಇಂದು ನಮ್ಮ ಯೋಗವನ್ನು ಜಗತ್ತು ಸ್ವೀಕಾರ ಮಾಡಿದೆ. ನಾನು ಬ್ರೇಜಿಲ್​ನಿಂದ ನಿನ್ನೆ ಬಂದಿದ್ದೇನೆ. ನಾನು 16 ಸಾವಿರ ಕಿಲೋಮೀಟರ್ ದೂರದ ಬ್ರೇಜಿಲ್​ಗೆ ಹೋಗಿದ್ದೆ. ಅಲ್ಲಿನ ಯೋಗ ಕೆಂದ್ರಕ್ಕೆ ಭೇಟಿ ಕೊಟ್ಟಿದ್ದೇನೆ. ನಾನು ಅಲ್ಲಿಗೆ ಹೋದಾಗ ಅಲ್ಲಿನ ಜನ ಯೋಗ ಮಾಡುತ್ತಿದ್ದರು. ಈ ಮೂಲಕ ಇಡೀ ಜಗತ್ತು ಯೋಗವನ್ನು ಸ್ವೀಕಾರ ಮಾಡಿದೆ ಎಂದರು.

ಇದನ್ನೂಓದಿ:International Yoga Day 2023: ಯೋಗ ಜಾಗತಿಕ ಆಂದೋಲನವಾಗಿದೆ, ವಿಶ್ವ ಯೋಗ ದಿನಾಚರಣೆಗೆ ಅಮೆರಿಕದಿಂದ ಪ್ರಧಾನಿ ಮೋದಿ ವಿಡಿಯೋ ಸಂದೇಶ

ಯೋಗ ಶ್ವಾಸಕೋಶದ ಸಂಪೂರ್ಣ ವ್ಯವಸ್ಥೆಯನ್ನು ನಿಯಂತ್ರಣದಲ್ಲಿಡುತ್ತೆ. ಇದನ್ನು ಅನೇಕ ಸಂಶೋಧಕರು ಕೂಡ ಹೇಳಿದ್ದಾರೆ. ಇವತ್ತು ಅನೇಕ ದೇಶಗಳಲ್ಲಿ ಯೋಗ ಸ್ವೀಕಾರ ಆಗಿದೆ. ಕಳೆದ ಬಾರಿ ಜಗತ್ತು ಗೋಲ್ಡನ್ ರಿಂಗ್ ಎಂದು ಕರೆದಿತ್ತು. ಇಂದು ಭಾರತದ ಕುಟುಂಬ ಪದ್ದತಿಯನ್ನು ಅಧ್ಯಯನ ಮಾಡಲು ಇಡೀ ಜಗತ್ತು ಭಾರತಕ್ಕೆ ಬರುತ್ತಿದೆ. ಭಾರತದ ದೇಶದ ಪರಂಪರೆ ಪದ್ದತಿ ಪುರಾತನವಾದದ್ದು, ಇದನ್ನು ಜಗತ್ತಿಗೆ ಪರಿಚಯಿಸುವುದಕ್ಕೆ ಯಾರೂ ಧೈರ್ಯ ಮಾಡಿರಲಿಲ್ಲ. ಮೋದಿ ಯೋಗದ ಬಗ್ಗೆ ತಿಳುವಳಿಕೆ ಕೊಟ್ಟಿದ್ದಾರೆ ಎಂದರು.

ಇಂದು ಭಾರತ 177 ದೇಶದ ಯೋಗಕ್ಕೆ ಬೆಂಬಲ ಕೊಟ್ಟಿದೆ. ನಮ್ಮನ್ನು ಅಸಡ್ಡೆ ಮಾಡಿದ ದೇಶಗಳು ಇದೀಗ ನಮ್ಮ ಸ್ನೇಹಕ್ಕೆ ತುದಿಗಾಲಲ್ಲೆ ನಿಂತಿವೆ. ನಾವು ಯಾವತ್ತೂ ನಮ್ಮತನ‌ ಬಿಡಬಾರದು, ಯೋಗ ಮಾಡುವವರು ಹಿಂಸೆ ಮೇಲೆ ನಂಬಿಕೆ ಇಟ್ಟಿರುವುದಿಲ್ಲ. ಅವರ ವಿಚಾರ ಶುದ್ದವಾಗಿರತ್ತೆ, ವಿಶ್ವಾಸ ಇಲ್ಲವೆಂದರೆ ಯೋಗ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ‌ ಹೇಳಿದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:40 am, Wed, 21 June 23

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು