AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿತ ಉಗ್ರನಿಗಿದೆ ಧಾರವಾಡದ ನಂಟು, ದೆಹಲಿ ಪೊಲೀಸರ ಮಾಹಿತಿಯಿಂದ ಜನರಲ್ಲಿ ಆತಂಕ

ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಐಸಿಸ್‌ ಜಾಲವನ್ನು ಹತ್ತಿಕ್ಕುವ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಮೂವರು ಶಂಕಿತ ಉಗ್ರರ ಪೈಕಿ ಓರ್ವನಿಗೆ ಧಾರವಾಡದ ನಂಟು ಹೊಂದಿದ್ದು, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಮಾಹಿತಿ ತಿಳಿದುಬಂದಿದೆ. ಸದ್ಯ ದೆಹಲಿ ಪೊಲೀಸರ ಮಾಹಿತಿಯಿಂದ ಈ ಭಾಗದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ಬಂಧಿತ ಉಗ್ರನಿಗಿದೆ ಧಾರವಾಡದ ನಂಟು, ದೆಹಲಿ ಪೊಲೀಸರ ಮಾಹಿತಿಯಿಂದ ಜನರಲ್ಲಿ ಆತಂಕ
ದೆಹಲಿಯಲ್ಲಿ ಬಂಧಿತರಾಗಿರುವ ಮೂವರು ಐಸಿಸ್ ಉಗ್ರರ ಪೈಕಿ ಒಬ್ಬನಿಗೆ ಧಾರವಾಡದ ನಂಟುImage Credit source: PTI
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: Rakesh Nayak Manchi|

Updated on:Oct 03, 2023 | 11:57 AM

Share

ಧಾರವಾಡ, ಅ.3: ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಐಸಿಸ್‌ ಜಾಲವನ್ನು ಹತ್ತಿಕ್ಕುವ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಮೂವರು ಶಂಕಿತ ಉಗ್ರರ ಪೈಕಿ ಓರ್ವನಿಗೆ ಧಾರವಾಡದ (Dharwad) ನಂಟು ಹೊಂದಿದ್ದು, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಮಾಹಿತಿ ತಿಳಿದುಬಂದಿದೆ. ಸದ್ಯ ದೆಹಲಿ ಪೊಲೀಸರ ಮಾಹಿತಿಯಿಂದ ಈ ಭಾಗದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ದೆಹಲಿಯಲ್ಲಿ ನಿನ್ನೆ ಮೂವರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದ್ದು, ಆ ಪೈಕಿ ಪ್ರಮುಖ ಶಹನವಾಜ್‌ಗೆ ಧಾರವಾಡದ ನಂಟು ಹೊಂದಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಬಗ್ಗೆ ದೆಹಲಿ ಪೊಲೀಸ್ ವಿಶೇಷ ದಳದಿಂದಲೇ ಮಾಹಿತಿ ಲಭ್ಯವಾಗಿದೆ. ಆದರೆ ಈ ಬಗ್ಗೆ ಹು-ಧಾ ಪೊಲೀಸರಿಗೆ ಅಧಿಕೃತ ಮಾಹಿತಿ ಬಂದಿಲ್ಲ.

ಇದನ್ನೂ ಓದಿ: ಮೂವರು ಶಂಕಿತ ಉಗ್ರರ ಬಂಧನ; ಇವರಲ್ಲಿಬ್ಬರು ಎಂಜಿನಿಯರ್, ಒಬ್ಬ ಪಿಎಚ್‌ಡಿ: ಪೊಲೀಸ್

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಮತ್ತು ಎಸ್​ಪಿಗೆ ಈ ಬಗ್ಗೆ ಮಾಹಿತಿ ಇದುವರೆಗೆ ತಿಳಿದಬಂದಿಲ್ಲ. ಹತ್ತು ವರ್ಷದ ಹಿಂದೆಯೂ ಶಂಕಿತ ಉಗ್ರರ ತರಬೇತಿ ತಾಣವಾಗಿದ್ದು, ಸಿಮಿ ಸಂಘಟನೆಯ ಶಂಕಿತ ಉಗ್ರರರಿಗೆ ಧಾರವಾಡ ಹೊರವಲಯದ ಅರಣ್ಯದಲ್ಲಿ ತರಬೇತಿ ನೀಡಲಾಗಿತ್ತು. ಇದೀಗ ಶಂಕಿತ ಐಸಿಸ್ ಉಗ್ರರಿಂದಲೂ ಇಲ್ಲೇ ತರಬೇತಿ ನೀಡಲಾಗಿದೆ.

ಆ ಮೂಲಕ ಹುಬ್ಬಳ್ಳಿ ಧಾರವಾಡ ಉಗ್ರ ಚಟುವಟಿಕೆಗಳ ತರಬೇತಿ ತಾಣವಾಗುತ್ತಿದೆಯಾ ಎಂಬ ಆತಂಕ ಸೃಷ್ಟಿಯಾಗಿದೆ. ಸದ್ಯ ದೆಹಲಿ ಪೊಲೀಸರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಭಾಗದ ಜನರಲ್ಲಿ ಆತಂಕದ ಆರಂಭವಾಗಿದೆ.

ದೆಹಲಿ ಪೊಲೀಸರ ಜೊತೆ ಸಂಪರ್ಕದಲ್ಲಿ ಹು-ಧಾ ಪೊಲೀಸರು

ನಾವು ದೆಹಲಿ ಪೊಲೀಸರ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಹುಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಹೇಳಿದ್ದಾರೆ. ನಾವು ನಿನ್ನೆ ನ್ಯೂಸ್ ಅಲ್ಲಿ ನೋಡಿದ ಮೇಲೆ ನಾವು ದೆಹಲಿ ಪೊಲೀಸರ ಜೊತೆ ಸಂಪರ್ಕದಲ್ಲಿದ್ದೇವೆ. ನ್ಯೂಸ್​ನಲ್ಲಿ ಯಾವದೂ ನಿಖರವಾಗಿ ಸ್ಥಳದ ಮಾಹಿತಿ ನೀಡಿಲ್ಲ. ಆದರೆ ಅಧಿಕೃತವಾಗಿ‌ ಇಲ್ಲಿ ತರಬೇತಿ ಅಥವಾ ಅವರು ಇಲ್ಲಿಯವರು ಅನ್ನೋ ಮಾಹಿತಿ ಇಲ್ಲ. ನಮ್ಮ ಜೊತೆ ಪೊಲೀಸರು ಯಾವದೂ ಮಾಹಿತಿ ಹಂಚಿಕೊಂಡಿಲ್ಲ ಎಂದಿದ್ದಾರೆ.

ಹಳೇ ಹುಬ್ಬಳ್ಳಿ ಗಲಾಟೆ ಪ್ರಕರಣದ ಕುರಿತು ಸರ್ಕಾರ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು, ಅದನ್ನು ನಾವು ಮಾತಾಡಲು ಆಗಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Tue, 3 October 23

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್