AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿತ ಉಗ್ರನಿಗಿದೆ ಧಾರವಾಡದ ನಂಟು, ದೆಹಲಿ ಪೊಲೀಸರ ಮಾಹಿತಿಯಿಂದ ಜನರಲ್ಲಿ ಆತಂಕ

ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಐಸಿಸ್‌ ಜಾಲವನ್ನು ಹತ್ತಿಕ್ಕುವ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಮೂವರು ಶಂಕಿತ ಉಗ್ರರ ಪೈಕಿ ಓರ್ವನಿಗೆ ಧಾರವಾಡದ ನಂಟು ಹೊಂದಿದ್ದು, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಮಾಹಿತಿ ತಿಳಿದುಬಂದಿದೆ. ಸದ್ಯ ದೆಹಲಿ ಪೊಲೀಸರ ಮಾಹಿತಿಯಿಂದ ಈ ಭಾಗದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ಬಂಧಿತ ಉಗ್ರನಿಗಿದೆ ಧಾರವಾಡದ ನಂಟು, ದೆಹಲಿ ಪೊಲೀಸರ ಮಾಹಿತಿಯಿಂದ ಜನರಲ್ಲಿ ಆತಂಕ
ದೆಹಲಿಯಲ್ಲಿ ಬಂಧಿತರಾಗಿರುವ ಮೂವರು ಐಸಿಸ್ ಉಗ್ರರ ಪೈಕಿ ಒಬ್ಬನಿಗೆ ಧಾರವಾಡದ ನಂಟುImage Credit source: PTI
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Oct 03, 2023 | 11:57 AM

Share

ಧಾರವಾಡ, ಅ.3: ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಐಸಿಸ್‌ ಜಾಲವನ್ನು ಹತ್ತಿಕ್ಕುವ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಮೂವರು ಶಂಕಿತ ಉಗ್ರರ ಪೈಕಿ ಓರ್ವನಿಗೆ ಧಾರವಾಡದ (Dharwad) ನಂಟು ಹೊಂದಿದ್ದು, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಮಾಹಿತಿ ತಿಳಿದುಬಂದಿದೆ. ಸದ್ಯ ದೆಹಲಿ ಪೊಲೀಸರ ಮಾಹಿತಿಯಿಂದ ಈ ಭಾಗದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ದೆಹಲಿಯಲ್ಲಿ ನಿನ್ನೆ ಮೂವರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದ್ದು, ಆ ಪೈಕಿ ಪ್ರಮುಖ ಶಹನವಾಜ್‌ಗೆ ಧಾರವಾಡದ ನಂಟು ಹೊಂದಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಬಗ್ಗೆ ದೆಹಲಿ ಪೊಲೀಸ್ ವಿಶೇಷ ದಳದಿಂದಲೇ ಮಾಹಿತಿ ಲಭ್ಯವಾಗಿದೆ. ಆದರೆ ಈ ಬಗ್ಗೆ ಹು-ಧಾ ಪೊಲೀಸರಿಗೆ ಅಧಿಕೃತ ಮಾಹಿತಿ ಬಂದಿಲ್ಲ.

ಇದನ್ನೂ ಓದಿ: ಮೂವರು ಶಂಕಿತ ಉಗ್ರರ ಬಂಧನ; ಇವರಲ್ಲಿಬ್ಬರು ಎಂಜಿನಿಯರ್, ಒಬ್ಬ ಪಿಎಚ್‌ಡಿ: ಪೊಲೀಸ್

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಮತ್ತು ಎಸ್​ಪಿಗೆ ಈ ಬಗ್ಗೆ ಮಾಹಿತಿ ಇದುವರೆಗೆ ತಿಳಿದಬಂದಿಲ್ಲ. ಹತ್ತು ವರ್ಷದ ಹಿಂದೆಯೂ ಶಂಕಿತ ಉಗ್ರರ ತರಬೇತಿ ತಾಣವಾಗಿದ್ದು, ಸಿಮಿ ಸಂಘಟನೆಯ ಶಂಕಿತ ಉಗ್ರರರಿಗೆ ಧಾರವಾಡ ಹೊರವಲಯದ ಅರಣ್ಯದಲ್ಲಿ ತರಬೇತಿ ನೀಡಲಾಗಿತ್ತು. ಇದೀಗ ಶಂಕಿತ ಐಸಿಸ್ ಉಗ್ರರಿಂದಲೂ ಇಲ್ಲೇ ತರಬೇತಿ ನೀಡಲಾಗಿದೆ.

ಆ ಮೂಲಕ ಹುಬ್ಬಳ್ಳಿ ಧಾರವಾಡ ಉಗ್ರ ಚಟುವಟಿಕೆಗಳ ತರಬೇತಿ ತಾಣವಾಗುತ್ತಿದೆಯಾ ಎಂಬ ಆತಂಕ ಸೃಷ್ಟಿಯಾಗಿದೆ. ಸದ್ಯ ದೆಹಲಿ ಪೊಲೀಸರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಭಾಗದ ಜನರಲ್ಲಿ ಆತಂಕದ ಆರಂಭವಾಗಿದೆ.

ದೆಹಲಿ ಪೊಲೀಸರ ಜೊತೆ ಸಂಪರ್ಕದಲ್ಲಿ ಹು-ಧಾ ಪೊಲೀಸರು

ನಾವು ದೆಹಲಿ ಪೊಲೀಸರ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಹುಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಹೇಳಿದ್ದಾರೆ. ನಾವು ನಿನ್ನೆ ನ್ಯೂಸ್ ಅಲ್ಲಿ ನೋಡಿದ ಮೇಲೆ ನಾವು ದೆಹಲಿ ಪೊಲೀಸರ ಜೊತೆ ಸಂಪರ್ಕದಲ್ಲಿದ್ದೇವೆ. ನ್ಯೂಸ್​ನಲ್ಲಿ ಯಾವದೂ ನಿಖರವಾಗಿ ಸ್ಥಳದ ಮಾಹಿತಿ ನೀಡಿಲ್ಲ. ಆದರೆ ಅಧಿಕೃತವಾಗಿ‌ ಇಲ್ಲಿ ತರಬೇತಿ ಅಥವಾ ಅವರು ಇಲ್ಲಿಯವರು ಅನ್ನೋ ಮಾಹಿತಿ ಇಲ್ಲ. ನಮ್ಮ ಜೊತೆ ಪೊಲೀಸರು ಯಾವದೂ ಮಾಹಿತಿ ಹಂಚಿಕೊಂಡಿಲ್ಲ ಎಂದಿದ್ದಾರೆ.

ಹಳೇ ಹುಬ್ಬಳ್ಳಿ ಗಲಾಟೆ ಪ್ರಕರಣದ ಕುರಿತು ಸರ್ಕಾರ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು, ಅದನ್ನು ನಾವು ಮಾತಾಡಲು ಆಗಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Tue, 3 October 23

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು