AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿತ ಉಗ್ರನಿಗಿದೆ ಧಾರವಾಡದ ನಂಟು, ದೆಹಲಿ ಪೊಲೀಸರ ಮಾಹಿತಿಯಿಂದ ಜನರಲ್ಲಿ ಆತಂಕ

ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಐಸಿಸ್‌ ಜಾಲವನ್ನು ಹತ್ತಿಕ್ಕುವ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಮೂವರು ಶಂಕಿತ ಉಗ್ರರ ಪೈಕಿ ಓರ್ವನಿಗೆ ಧಾರವಾಡದ ನಂಟು ಹೊಂದಿದ್ದು, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಮಾಹಿತಿ ತಿಳಿದುಬಂದಿದೆ. ಸದ್ಯ ದೆಹಲಿ ಪೊಲೀಸರ ಮಾಹಿತಿಯಿಂದ ಈ ಭಾಗದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ಬಂಧಿತ ಉಗ್ರನಿಗಿದೆ ಧಾರವಾಡದ ನಂಟು, ದೆಹಲಿ ಪೊಲೀಸರ ಮಾಹಿತಿಯಿಂದ ಜನರಲ್ಲಿ ಆತಂಕ
ದೆಹಲಿಯಲ್ಲಿ ಬಂಧಿತರಾಗಿರುವ ಮೂವರು ಐಸಿಸ್ ಉಗ್ರರ ಪೈಕಿ ಒಬ್ಬನಿಗೆ ಧಾರವಾಡದ ನಂಟುImage Credit source: PTI
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Rakesh Nayak Manchi

Updated on:Oct 03, 2023 | 11:57 AM

ಧಾರವಾಡ, ಅ.3: ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಐಸಿಸ್‌ ಜಾಲವನ್ನು ಹತ್ತಿಕ್ಕುವ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಮೂವರು ಶಂಕಿತ ಉಗ್ರರ ಪೈಕಿ ಓರ್ವನಿಗೆ ಧಾರವಾಡದ (Dharwad) ನಂಟು ಹೊಂದಿದ್ದು, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಮಾಹಿತಿ ತಿಳಿದುಬಂದಿದೆ. ಸದ್ಯ ದೆಹಲಿ ಪೊಲೀಸರ ಮಾಹಿತಿಯಿಂದ ಈ ಭಾಗದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ದೆಹಲಿಯಲ್ಲಿ ನಿನ್ನೆ ಮೂವರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದ್ದು, ಆ ಪೈಕಿ ಪ್ರಮುಖ ಶಹನವಾಜ್‌ಗೆ ಧಾರವಾಡದ ನಂಟು ಹೊಂದಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಬಗ್ಗೆ ದೆಹಲಿ ಪೊಲೀಸ್ ವಿಶೇಷ ದಳದಿಂದಲೇ ಮಾಹಿತಿ ಲಭ್ಯವಾಗಿದೆ. ಆದರೆ ಈ ಬಗ್ಗೆ ಹು-ಧಾ ಪೊಲೀಸರಿಗೆ ಅಧಿಕೃತ ಮಾಹಿತಿ ಬಂದಿಲ್ಲ.

ಇದನ್ನೂ ಓದಿ: ಮೂವರು ಶಂಕಿತ ಉಗ್ರರ ಬಂಧನ; ಇವರಲ್ಲಿಬ್ಬರು ಎಂಜಿನಿಯರ್, ಒಬ್ಬ ಪಿಎಚ್‌ಡಿ: ಪೊಲೀಸ್

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಮತ್ತು ಎಸ್​ಪಿಗೆ ಈ ಬಗ್ಗೆ ಮಾಹಿತಿ ಇದುವರೆಗೆ ತಿಳಿದಬಂದಿಲ್ಲ. ಹತ್ತು ವರ್ಷದ ಹಿಂದೆಯೂ ಶಂಕಿತ ಉಗ್ರರ ತರಬೇತಿ ತಾಣವಾಗಿದ್ದು, ಸಿಮಿ ಸಂಘಟನೆಯ ಶಂಕಿತ ಉಗ್ರರರಿಗೆ ಧಾರವಾಡ ಹೊರವಲಯದ ಅರಣ್ಯದಲ್ಲಿ ತರಬೇತಿ ನೀಡಲಾಗಿತ್ತು. ಇದೀಗ ಶಂಕಿತ ಐಸಿಸ್ ಉಗ್ರರಿಂದಲೂ ಇಲ್ಲೇ ತರಬೇತಿ ನೀಡಲಾಗಿದೆ.

ಆ ಮೂಲಕ ಹುಬ್ಬಳ್ಳಿ ಧಾರವಾಡ ಉಗ್ರ ಚಟುವಟಿಕೆಗಳ ತರಬೇತಿ ತಾಣವಾಗುತ್ತಿದೆಯಾ ಎಂಬ ಆತಂಕ ಸೃಷ್ಟಿಯಾಗಿದೆ. ಸದ್ಯ ದೆಹಲಿ ಪೊಲೀಸರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಭಾಗದ ಜನರಲ್ಲಿ ಆತಂಕದ ಆರಂಭವಾಗಿದೆ.

ದೆಹಲಿ ಪೊಲೀಸರ ಜೊತೆ ಸಂಪರ್ಕದಲ್ಲಿ ಹು-ಧಾ ಪೊಲೀಸರು

ನಾವು ದೆಹಲಿ ಪೊಲೀಸರ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಹುಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಹೇಳಿದ್ದಾರೆ. ನಾವು ನಿನ್ನೆ ನ್ಯೂಸ್ ಅಲ್ಲಿ ನೋಡಿದ ಮೇಲೆ ನಾವು ದೆಹಲಿ ಪೊಲೀಸರ ಜೊತೆ ಸಂಪರ್ಕದಲ್ಲಿದ್ದೇವೆ. ನ್ಯೂಸ್​ನಲ್ಲಿ ಯಾವದೂ ನಿಖರವಾಗಿ ಸ್ಥಳದ ಮಾಹಿತಿ ನೀಡಿಲ್ಲ. ಆದರೆ ಅಧಿಕೃತವಾಗಿ‌ ಇಲ್ಲಿ ತರಬೇತಿ ಅಥವಾ ಅವರು ಇಲ್ಲಿಯವರು ಅನ್ನೋ ಮಾಹಿತಿ ಇಲ್ಲ. ನಮ್ಮ ಜೊತೆ ಪೊಲೀಸರು ಯಾವದೂ ಮಾಹಿತಿ ಹಂಚಿಕೊಂಡಿಲ್ಲ ಎಂದಿದ್ದಾರೆ.

ಹಳೇ ಹುಬ್ಬಳ್ಳಿ ಗಲಾಟೆ ಪ್ರಕರಣದ ಕುರಿತು ಸರ್ಕಾರ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು, ಅದನ್ನು ನಾವು ಮಾತಾಡಲು ಆಗಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Tue, 3 October 23

ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
Daily Devotional: ಅದೃಷ್ಟ ಒಲಿಯಲು ಏನು ಮಾಡಬೇಕು?
Daily Devotional: ಅದೃಷ್ಟ ಒಲಿಯಲು ಏನು ಮಾಡಬೇಕು?