AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

60 ಸಾವಿರದ ಕ್ಯಾಮರಾ ಆರ್ಡರ್​​ ಮಾಡಿದ್ದ ಉದ್ಯಮಿಗೆ ಶಾಕ್​​: ಬಾಕ್ಸ್​​ನಲ್ಲಿ ಬಂದಿದ್ದು ವಾಷಿಂಗ್​ ಪೌಡರ್​!

ಹುಬ್ಬಳ್ಳಿ ಮೂಲದ ಉದ್ಯಮಿಯೊಬ್ಬರು ಅಮೆಜಾನ್‌ನಲ್ಲಿ 60,990 ರೂ. ಬೆಲೆಯ ಕ್ಯಾಮರಾ ಆರ್ಡರ್ ಮಾಡಿದ್ದರು. ಆದರೆ ಡೆಲಿವರಿ ಆಗಿದ್ದು ಮಾತ್ರ ವಾಷಿಂಗ್ ಪೌಡರ್ ಪ್ಯಾಕೇಟ್‌ಗಳು. ಆನ್‌ಲೈನ್ ವಂಚನೆಯಿಂದ ಶಾಕ್ ಆಗಿರುವ ಉದ್ಯಮಿ ಈ ಬಗ್ಗೆ ಅಮೆಜಾನ್‌ಗೆ ದೂರು ನೀಡಿದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.

60 ಸಾವಿರದ ಕ್ಯಾಮರಾ ಆರ್ಡರ್​​ ಮಾಡಿದ್ದ ಉದ್ಯಮಿಗೆ ಶಾಕ್​​: ಬಾಕ್ಸ್​​ನಲ್ಲಿ ಬಂದಿದ್ದು ವಾಷಿಂಗ್​ ಪೌಡರ್​!
ಕ್ಯಾಮರಾ ಬದಲು ಬಂದ ವಾಷಿಂಗ್​​ ಪೌಡರ್​​ ತೋರಿಸುತ್ತಿರುವ ಉದ್ಯಮಿ
ಸಂಜಯ್ಯಾ ಚಿಕ್ಕಮಠ
| Edited By: |

Updated on:Feb 22, 2026 | 7:43 AM

Share

ಹುಬ್ಬಳ್ಳಿ, ಫೆಬ್ರವರಿ 22: ಏನೇ ವಸ್ತುಗಳನ್ನ ಖರೀದಿಸಬೇಕು ಅಂದ್ರೂ ಜನ ಅಂಗಡಿಗಳಿಗೆ ಹೋಗುವ ಬದಲು ಮೊಬೈಲ್​​ನಲ್ಲಿಯೇ ವಿವಿಧ ಶಾಪಿಂಗ್​​ ಆ್ಯಪ್​​ಗಳ ಮೂಲಕ ಅವನ್ನು ಆರ್ಡರ್​ ಮಾಡೋದು ಇತ್ತೀಚೆಗೆ ಟ್ರೆಂಡ್​​ ಆಗಿ ಮಾರ್ಪಟ್ಟಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ವಂಚಕರು ವ್ಯವಸ್ಥೆಯ ದುರುಪಯೋಗವನ್ನೂ ದೊಡ್ಡ ಪ್ರಮಾಣದಲ್ಲಿಯೇ ಮಾಡುತ್ತಿದ್ದಾರೆ. ಆರ್ಡರ್​​ ಮಾಡಿರೋದು ಒಂದು ವಸ್ತುವಾದರೆ, ಗ್ರಾಹಕರ ಕೈಗೆ ತಲುಪೋದು ಮತ್ತೊಂದು ವಸ್ತು ಆಗಿರುತ್ತೆ. ಇಂತಹ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಲೇ ಇವೆ. ಇದೇ ರೀತಿ ಆನ್​​ಲೈನ್​​ ಮೂಲಕ ಕ್ಯಾಮರಾ ಆರ್ಡರ್​​ ಮಾಡಿದ್ದ ಉದ್ಯಮಿಯೋರ್ವರು ತಮಗೆ ಕಂಪನಿ ಡೆಲಿವರಿ ಮಾಡಿರೋದು ವಾಷಿಂಗ್​ ಪೌಡರ್ ಎಂಬ ಆರೋಪ ಮಾಡಿದ್ದಾರೆ.

ಹೌದು, ಶಾರ್ಜಾದಲ್ಲಿ ನೆಲೆಸಿರುವ ಹುಬ್ಬಳ್ಳಿ ಮೂಲದ ಉದ್ಯಮಿ ಅಲ್ಫ್ರೆಡ್ ಎಂಬವರು ಆತ್ಮೀಯರೊಬ್ಬರಿಗೆ ಉಡುಗೊರೆಯಾಗಿ ನೀಡಲು ಅಮೆಜಾನ್​ನಲ್ಲಿ ಕ್ಯಾಮರಾ ಬುಕ್​​ ಮಾಡಿದ್ದರು. ಅದರಂತೆ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನ ವಿಳಾಸಕ್ಕೆ ನಿನ್ನೆ ಕೊರಿಯರ್​​ ತಲುಪಿದೆ. ಅದನ್ನು ತೆರೆದು ನೋಡಿದಾಗ ಕ್ಯಾಮರಾ ಬದಲು, 2 ಪಾಕೆಟ್ ವಾಷಿಂಗ್ ಪೌಡರ್ ಇರೋದು ಕಂಡಿದೆ. ತಾನು ಆರ್ಡರ್​​ ಮಾಡಿದ್ದು 60,990 ರೂ. ಬೆಲೆಯ ಕ್ಯಾಮರಾ. ಆದರೆ ಅವರು ಕಳುಹಿಸಿರುವ ಈ ವಾಷಿಂಗ್ ಪೌಡರ್ ಪ್ಯಾಕೇಟ್​​ ನೋಡಿ ತನಗೆ ಶಾಕ್​​ ಆಗಿದೆ. ಈ ಬಗ್ಗೆ ಅಮೆಜಾನ್​ಗೆ ದೂರು ನೀಡಿದ್ರೂ ಅವರಿಂದ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದು ಅಲ್ಫ್ರೆಡ್ ಅಲವತ್ತುಕೊಂಡಿದ್ದಾರೆ.

ಇದನ್ನೂ ಓದಿ: ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಳಿಗೆ ವಂಚನೆ; ಕೋಟ್ಯಂತರ ರೂ. ಸಹಿತ ಆರೋಪಿ ಪರಾರಿ

ಎರಡು ದಿನಗಳ ಹಿಂದೆ ತಾನು ಕ್ಯಾಮರಾ ಅರ್ಡರ್​​ ಮಾಡಿದ್ದೆ. ದುಬೈನಲ್ಲಿಯೂ ತಾನು ಅಮೆಜಾನ್​ ಮೂಲಕ ಅನೇಕ ಬಾರಿ ವಸ್ತುಗಳನ್ನು ಆರ್ಡರ್​​ ಮಾಡಿದ್ದು, ಅಲ್ಲಿ ಒಮ್ಮೆಯೂ ತನಗೆ ಈ ರೀತಿ ಮೋಸ ಆಗಿರಲಿಲ್ಲ. ಆದರೆ ಸ್ನೇಹಿತ ವೈದ್ಯನಿಗಾಗಿ ಪಾಕೆಟ್​​ ಕ್ಯಾಮರಾ ಆರ್ಡರ್​​ ಮಾಡಿದ್ದ ತಾನು ಈ ಬಾರಿ ಮೋಸ ಹೋಗಿದ್ದೇನೆ. ಕೊರಿಯರ್​​ ಬಾಕ್ಸ್​​ ಓಪನ್​​ ಮಾಡುವ ದೃಶ್ಯಗಳನ್ನೂ ತಾನು ಚಿತ್ರೀಕರಿಸಿದ್ದು, ವಂಚನೆಗೆ ಸಾಕ್ಷಿ ಸಮೇತ ಆರೋಪ ಮಾಡುತ್ತಿದ್ದೇನೆ ಎಂದು ಅಲ್ಫ್ರೆಡ್ ತಿಳಿಸಿದ್ದಾರೆ. ಬುಕ್​​ ರಿಲೀಸ್​​ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರ ಸ್ನೇಹಿತ, ಅತಿಥಿಗೆ ಉಡುಗೊರೆ ನೀಡಲೆಂದು ಅಲ್ಫ್ರೆಡ್ ಕ್ಯಾಮರಾ ಆರ್ಡರ್​​ ಮಾಡಿದ್ದರು ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:41 am, Sun, 22 February 26

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ