AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಕಾಂತ್ ಪೂಜಾರಿ ಮನೆಗೆ ವಿಪಕ್ಷ ನಾಯಕ ಭೇಟಿ: ಕುಟುಂಬಸ್ಥರಿಗೆ ಧೈರ್ಯ ತುಂಬಿದ ಆರ್​ ಅಶೋಕ್

1992ರ ಅಯೋಧ್ಯೆ ಹೋರಾಟದ ಹಿಂಸಾಚಾರ ಪ್ರಕರಣದಲ್ಲಿ 31 ವರ್ಷಗಳ ಬಳಿಕ ಹೋರಾಟಗಾರ ಶ್ರೀಕಾಂತ್ ಪೂಜಾರಿಯನ್ನ ಬಂಧಿಸಲಾಗಿದೆ. ಸದ್ಯ ಇಂದು ಹುಬ್ಬಳ್ಳಿಯ ಚನ್ನಪೇಟೆಯಲ್ಲಿರುವ ಶ್ರೀಕಾಂತ್ ಪೂಜಾರಿ ನಿವಾಸಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಭೇಟಿ ಕುಟುಂಬಸ್ಥರಿಗೆ ಧೈರ್ಯ ತುಂಬಿದಿದ್ದಾರೆ. ಜ.‌9ರೊಳಗೆ ಶಹರ ಠಾಣೆ ಇನ್ಸ್​ಪೆಕ್ಟರ್ ಅಮಾನತಾಗಬೇಕು ಎಂದು ಆಗ್ರಹಿಸಿದ್ದಾರೆ.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jan 03, 2024 | 7:02 PM

Share

ಹುಬ್ಬಳ್ಳಿ, ಜನವರಿ 03: 1992 ರಲ್ಲಿ ರಾಮಮಂದಿರ ಹೋರಾಟ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಭಾಗಿಯಾಗಿದ್ದ ಹೋರಾಟಗಾರ ಶ್ರೀಕಾಂತ್ ಪೂಜಾರಿ ಮನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಬುಧವಾರ ಭೇಟಿ ನೀಡಿದ್ದಾರೆ. ಹುಬ್ಬಳ್ಳಿಯ ಚನ್ನಪೇಟೆಯಲ್ಲಿರುವ ಶ್ರೀಕಾಂತ್ ಪೂಜಾರಿ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿದಿದ್ದಾರೆ. ಈ ವೇಳೆ ಶಾಸಕರಾದ ಅರವಿಂದ ಬೆಲ್ಲದ್, ಮಹೇಶ್ ಟೆಂಗಿನಕಾಯಿ ಉಪಸ್ಥಿತರಿದ್ದರು.

ಸರ್ಕಾರಕ್ಕೆ ಎಚ್ಚರಿಕೆ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್

ಬಳಿಕ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್​ ಜ.‌9ರೊಳಗೆ ಶಹರ ಠಾಣೆ ಇನ್ಸ್​ಪೆಕ್ಟರ್ ಅಮಾನತಾಗಬೇಕು. ಸಸ್ಪೆಂಡ್​ ಮಾಡದಿದ್ರೆ ಜ.9ಕ್ಕೆ ಮತ್ತೆ ಹುಬ್ಬಳ್ಳಿಗೆ ಬಂದು ದೊಡ್ಡ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಧ್ವಜ ಮಾದರಿ ಹೋರಾಟ ಮಾಡುತ್ತೇವೆ. ಇಡಿ ರಾಜ್ಯಕ್ಕೆ ವ್ಯಾಪಿಸುವಂತೆ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾವಣ ಸಂಸ್ಕೃತಿಯವರು

ಶ್ರೀಕಾಂತ್ ಪೂಜಾರಿ ಸಮಾಜಘಾತುಕ ಅಂತಾ ಸಿಎಂ ಸಿದ್ದರಾಮಯ್ಯ ಟ್ವೀಟ್ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾವಣ ಸಂಸ್ಕೃತಿಯವರು. ಸಮಾಜಘಾತುಕ ಪದ ಬಳಸಿದ್ದಾರೆ, ಸಿಎಂರನ್ನು ಇವತ್ತು ಒಪ್ಪಿದ್ದೇನೆ. ಹೆರಾಲ್ಡ್ ಹಗರಣದಲ್ಲಿ ಐದು ಸಾವಿರ ರೂ. ಕೋಟಿ ನುಂಗಿದ್ರಲ್ವಾ? ಜಾಮೀನಿನ ಮೇಲೆ ಇದ್ದೀರಲ್ವಾ?, ನಿಮಗೆ ರಾಮ ಕ್ಷಮಿಸುತ್ತಾನಾ? ದೇಶದ ಹಣ ಲೂಟಿ ಹೊಡೆದವರನ್ನು ಶ್ರೀರಾಮ ಕ್ಷಮಿಸುತ್ತಾನಾ? ಶ್ರೀಕಾಂತ್ ಬಡ ಆಟೋ ಡ್ರೈವರ್, ಈತನನ್ನು ರಾಮ ಕ್ಷಮಿಸಲ್ವಾ ಎಂದು ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಬರಬಾರದಿತ್ತು: ಬಿಜೆಪಿ ವಿರುದ್ಧ ಸಿಎಂ ಕಿಡಿ

ಪ್ರತಿಭಟನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಮ್ಮ ಪ್ರತಿಭಟನೆಯ ಬಗ್ಗೆ ಮಾತನಾಡುವ ನೈತಿಕತೆ ಸಿಎಂಗೆ ಇಲ್ಲ. ಸಿದ್ದರಾಮಯ್ಯರಿಂದ ನಾವು ಪಾಠ ಕಲಿಯಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಆರ್.ಅಶೋಕ್ ತಿರುಗೇಟು

ಭಾರತ ಹಿಂದೂ ದೇಶವಲ್ಲವೆಂದು ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿಚಾರವಾಗಿ ಮಾತನಾಡಿ, ಹಾಗಾದ್ರೆ ಭಾರತ ಯಾವ ದೇಶ ಆಗಬೇಕೆಂದು ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್ಸಿಗರು ದೇಶ ಒಡೆಯುವವರು, ಇವರಿಂದ ದೇಶ ಉಳಿಸಲು ಸಾಧ್ಯವಾ? ರಾಮಾಯಣವೇ ನಡೆದಿಲ್ಲ ಅಂದಿದ್ರು, ರಾಮನ ಬರ್ತ್‌ಸರ್ಟಿಫಿಕೇಟ್ ಕೇಳಿದ್ರು. ನಾವು ಅಲ್ಲಾ, ಯೇಸುವಿನ ಬರ್ತ್ ಸರ್ಟಿಫಿಕೇಟ್ ಕೇಳಿದ್ವಾ?

ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ಪರ ಕೋಮುದ್ವೇಷ ಸೃಷ್ಟಿಸುವ ಹೇಳಿಕೆ: ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಕಾಂಗ್ರೆಸ್‌ ದೂರು

ನಾವು ಎಲ್ಲರನ್ನೂ ಗೌರವಿಸುತ್ತೇವೆ, ಭಾರತ ಹಿಂದೂ ರಾಷ್ಟ್ರ. ಹಿಂದೂ ರಾಷ್ಟ್ರವಾಗಿಯೇ ಉಳಿಯುತ್ತದೆ, ಯಾರಿಂದಲೂ ತಡೆಯಲೂ ಆಗಲ್ಲ ಎಂದಿದ್ದಾರೆ.

ನನ್ನ ಪತಿಯನ್ನು ಬಿಡುಗಡೆಗೊಳಿಸುವುದಾಗಿ ಭರವಸೆ ಕೊಟ್ಟಿದ್ದಾರೆ: ಶ್ರೀಕಾಂತ್ ಪತ್ನಿ ಅಂಬಿಕಾ

ಆರ್​.ಅಶೋಕ್​ ಭೇಟಿ ಬಳಿಕ ಶ್ರೀಕಾಂತ್ ಪತ್ನಿ ಅಂಬಿಕಾ ಹೇಳಿಕೆ ನೀಡಿದ್ದು, ನನ್ನ ಪತಿಯನ್ನು ಬಿಡುಗಡೆಗೊಳಿಸುವುದಾಗಿ ಆರ್​.ಅಶೋಕ್​ ನನಗೆ ಭರವಸೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ