AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad News: ಪ್ರೇಮವಿವಾಹಕ್ಕೆ ವಿರೋಧ: ಯುವಕನನ್ನು ಮನೆಗೆ ಕರೆಯಿಸಿ ಥಳಿಸಿದ ಯುವತಿ ಪೋಷಕರು

ಮೇ.31ರಂದು ಜಿಲ್ಲೆಯ ಕಲಘಟಗಿ ತಾಲೂಕಿನ ಲಿಂಗನಕೊಪ್ಪ ಗ್ರಾಮದ ಶಿವನಗೌಡ ಪಾಟೀಲ್​ ಮತ್ತು ಅಕ್ಕಮ್ಮ ಎಂಬ ಪ್ರೇಮಿಗಳು ರಿಜಿಸ್ಟ್ರರ್ ಮದುವೆಯಾಗಿದ್ದು, ಇದಾದ ಬಳಿಕ ಹುಡುಗಿ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಆತನನ್ನ ಮನೆಗೆ ಕರೆಯಿಸಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

Dharwad News: ಪ್ರೇಮವಿವಾಹಕ್ಕೆ ವಿರೋಧ: ಯುವಕನನ್ನು ಮನೆಗೆ ಕರೆಯಿಸಿ ಥಳಿಸಿದ ಯುವತಿ ಪೋಷಕರು
ಪ್ರೇಮಿಗಳು
ಕಿರಣ್ ಹನುಮಂತ್​ ಮಾದಾರ್
|

Updated on: Jun 15, 2023 | 2:40 PM

Share

ಧಾರವಾಡ: ಮೇ.31ರಂದು ಜಿಲ್ಲೆಯ ಕಲಘಟಗಿ(Kalaghatgi) ತಾಲೂಕಿನ ಲಿಂಗನಕೊಪ್ಪ ಗ್ರಾಮದ ಶಿವನಗೌಡ ಪಾಟೀಲ್​ ಮತ್ತು ಅಕ್ಕಮ್ಮ ಎಂಬ ಪ್ರೇಮಿಗಳು ರಿಜಿಸ್ಟ್ರರ್ ಮದುವೆ(Marriage)ಯಾಗಿದ್ದರು. ಇದಾದ ಬಳಿಕ ಹುಡುಗಿ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಆತನನ್ನ ಮನೆಗೆ ಕರೆಯಿಸಿ ಥಳಿಸಿದ್ದಾರೆ. ನಂತರ ಹುಡುಗಿ ಮನೆಯವರ ಹಲ್ಲೆಯಿಂದ ಪ್ರೇಮಿ ಶಿವನಗೌಡ ಪಾಟೀಲ್​ ಧಾರವಾಡ ಜಿಲ್ಲಾಸ್ಪತ್ರೆ ಸೇರಿಸಿದ್ದಾರೆ. ಇನ್ನು ಕಲಘಟಗಿ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಮದುವೆ ಮಾಡಿಕೊಂಡಿದ್ದ ಈ ಜೋಡಿ. ಬಳಿಕ ಅಕ್ಕಮ್ಮ ತನ್ನ ಮನೆಗೆ ಹೋಗಿದ್ದಳು. ಮನೆಗೆ ಹೋದ ಮೇಲೆ ಅಕ್ಕಮ್ಮನ ಮೇಲೂ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನು ತಿಳಿದ ಶಿವನಗೌಡ ಪಾಟೀಲ್​ ಆಕೆಯನ್ನ ಕರೆದುಕೊಂಡು ಬರಲು ಹೋಗಿದ್ದೆ, ಈ ವೇಳೆ ಕಣ್ಣಿಗೆ ಕಾರದ ಪುಡಿ ಎರಚಿ ಕಬ್ಬಿಣದ ರಾಡ್‌ನಿಂದ ಹೊಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಈ ಕುರಿತು ದೂರು ನೀಡಲು ಹೋದರೂ, ಹುಡುಗಿ ಮನೆಯಲ್ಲಿ ಪೊಲೀಸ್ ಇಲಾಖೆ ಮತ್ತು ಸೈನ್ಯದಲ್ಲಿದ್ದವರು ಇದ್ದು, ಹೀಗಾಗಿ ಕಲಘಟಗಿ ಠಾಣೆಯಲ್ಲಿ ನನ್ನ ದೂರು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ ಪ್ರೇಮಿ ಶಿವನಗೌಡ ಪಾಟೀಲ್​, ಈಗ ನ್ಯಾಯಕ್ಕಾಗಿ ಎಸ್ಪಿ ಬಳಿ ಹೋಗುವೆ ಎನ್ನುತ್ತಿದ್ದಾರೆ.

ಇದನ್ನೂ ಓದಿ:ಫೇಸ್‌ಬುಕ್‌ ಲವ್​​​ ಸ್ಟೋರಿ ವಿವಾಹಿತ ಮಹಿಳೆಯ ಮತಾಂತರ; ವ್ಯಕ್ತಿಯ ಬಂಧನ

ಓಡಿ ಹೋಗಿದ್ದ ಪ್ರೇಮಿಗಳನ್ನ ಕರೆತರುತ್ತಿದ್ದ ಪೊಲೀಸ್ ಜೀಪ್​ಗೆ ಅಡ್ಡಗಟ್ಟಿ ಹುಡುಗಿಯನ್ನು ಕರೆದೊಯ್ದ ಪೋಷಕರು

ಕೋಲಾರ: ಪ್ರೀತಿ(Love) ಎಂದರೆ ಎರಡು ಜೀವಗಳ ನಡುವಿನ ನಂಬಿಕೆ ಎಂದರೆ ತಪ್ಪಾಗಲಾರದು. ಪ್ರತಿಯೊಬ್ಬರ ಜೀವನದಲ್ಲೂ ಇದು ಮಹತ್ವದ ಘಟ್ಟ. ತಾವು ಪ್ರೀತಿಸಿದವರನ್ನ ಕೊನೆಯವರೆಗೆ ಕಾಪಾಡಿಕೊಂಡು ಮದುವೆಯಾಗಿ ಜೊತೆಯಲ್ಲಿ ಬದುಕಬೇಕೆಂಬ ಅದೆಷ್ಟೋ ಪ್ರೀತಿಗಳು ಮರೆಯಾಗಿ ಹೋಗಿವೆ. ಬೆರಳಣಿಕೆಯಷ್ಟು ಪ್ರೀತಿಗಳು ಮದುವೆಯಾಗಿ ಸುಂದರ ಜೀವನ ನಡೆಸುತ್ತಿದ್ದಾರೆ. ಅದರಂತೆ ಇಲ್ಲೊಂದು ಪ್ರೇಮಿಗಳಾದ ಜಿಲ್ಲೆಯ ಮುಡುವಾರಪಲ್ಲಿ ಪೋಜಿತ ಹಾಗೂ ಗುಡಿಸವಾರಪಲ್ಲಿ ನರೇಶ್ ಇಬ್ಬರು ಪ್ರೀತಿಸಿ ಮನೆ ಬಿಟ್ಟು ಹೋಗಿದ್ದರು.

ಬಳಿಕ ಹುಡುಗಿಯ ಪೋಷಕರು ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಇದರನ್ವಯ ಪ್ರೇಮಿಗಳನ್ನು ಹುಡುಕಿ ಖಾಸಗಿ ಕಾರೊಂದರಲ್ಲಿ ಕರೆ ತರುವ ವೇಳೆ, ಪೋಷಕರು ಅಡ್ಡಗಟ್ಟಿ ಕಾರು ಗ್ಲಾಸ್ ಒಡೆದು ಹುಡುಗಿಯನ್ನು ಕರೆದೊಯ್ದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಯುವಕನ ಮೇಲೆ ಕೂಡ ಹಲ್ಲೆ ಮಾಡಿದ್ದರು. ಬಳಿಕ ಮತ್ತೆ ಪೊಲೀಸ್ ಠಾಣೆಗೆ ಕರೆತಂದು ಹುಡುಗಿಯನ್ನು ಬಿಟ್ಟು ಹೋಗಿದ್ದರು. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಪ್ರಕರಣದ ದಾಖಲಿಸಿಕೊಂಡಿರುವ ರಾಯಲ್ಪಾಡು ಪೊಲೀಸರಿಂದ ಐದು ಜನರನ್ನ ವಶಕ್ಕೆ ಪಡೆದಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು