AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad News: ಪ್ರೇಮವಿವಾಹಕ್ಕೆ ವಿರೋಧ: ಯುವಕನನ್ನು ಮನೆಗೆ ಕರೆಯಿಸಿ ಥಳಿಸಿದ ಯುವತಿ ಪೋಷಕರು

ಮೇ.31ರಂದು ಜಿಲ್ಲೆಯ ಕಲಘಟಗಿ ತಾಲೂಕಿನ ಲಿಂಗನಕೊಪ್ಪ ಗ್ರಾಮದ ಶಿವನಗೌಡ ಪಾಟೀಲ್​ ಮತ್ತು ಅಕ್ಕಮ್ಮ ಎಂಬ ಪ್ರೇಮಿಗಳು ರಿಜಿಸ್ಟ್ರರ್ ಮದುವೆಯಾಗಿದ್ದು, ಇದಾದ ಬಳಿಕ ಹುಡುಗಿ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಆತನನ್ನ ಮನೆಗೆ ಕರೆಯಿಸಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

Dharwad News: ಪ್ರೇಮವಿವಾಹಕ್ಕೆ ವಿರೋಧ: ಯುವಕನನ್ನು ಮನೆಗೆ ಕರೆಯಿಸಿ ಥಳಿಸಿದ ಯುವತಿ ಪೋಷಕರು
ಪ್ರೇಮಿಗಳು
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 15, 2023 | 2:40 PM

ಧಾರವಾಡ: ಮೇ.31ರಂದು ಜಿಲ್ಲೆಯ ಕಲಘಟಗಿ(Kalaghatgi) ತಾಲೂಕಿನ ಲಿಂಗನಕೊಪ್ಪ ಗ್ರಾಮದ ಶಿವನಗೌಡ ಪಾಟೀಲ್​ ಮತ್ತು ಅಕ್ಕಮ್ಮ ಎಂಬ ಪ್ರೇಮಿಗಳು ರಿಜಿಸ್ಟ್ರರ್ ಮದುವೆ(Marriage)ಯಾಗಿದ್ದರು. ಇದಾದ ಬಳಿಕ ಹುಡುಗಿ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಆತನನ್ನ ಮನೆಗೆ ಕರೆಯಿಸಿ ಥಳಿಸಿದ್ದಾರೆ. ನಂತರ ಹುಡುಗಿ ಮನೆಯವರ ಹಲ್ಲೆಯಿಂದ ಪ್ರೇಮಿ ಶಿವನಗೌಡ ಪಾಟೀಲ್​ ಧಾರವಾಡ ಜಿಲ್ಲಾಸ್ಪತ್ರೆ ಸೇರಿಸಿದ್ದಾರೆ. ಇನ್ನು ಕಲಘಟಗಿ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಮದುವೆ ಮಾಡಿಕೊಂಡಿದ್ದ ಈ ಜೋಡಿ. ಬಳಿಕ ಅಕ್ಕಮ್ಮ ತನ್ನ ಮನೆಗೆ ಹೋಗಿದ್ದಳು. ಮನೆಗೆ ಹೋದ ಮೇಲೆ ಅಕ್ಕಮ್ಮನ ಮೇಲೂ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನು ತಿಳಿದ ಶಿವನಗೌಡ ಪಾಟೀಲ್​ ಆಕೆಯನ್ನ ಕರೆದುಕೊಂಡು ಬರಲು ಹೋಗಿದ್ದೆ, ಈ ವೇಳೆ ಕಣ್ಣಿಗೆ ಕಾರದ ಪುಡಿ ಎರಚಿ ಕಬ್ಬಿಣದ ರಾಡ್‌ನಿಂದ ಹೊಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಈ ಕುರಿತು ದೂರು ನೀಡಲು ಹೋದರೂ, ಹುಡುಗಿ ಮನೆಯಲ್ಲಿ ಪೊಲೀಸ್ ಇಲಾಖೆ ಮತ್ತು ಸೈನ್ಯದಲ್ಲಿದ್ದವರು ಇದ್ದು, ಹೀಗಾಗಿ ಕಲಘಟಗಿ ಠಾಣೆಯಲ್ಲಿ ನನ್ನ ದೂರು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ ಪ್ರೇಮಿ ಶಿವನಗೌಡ ಪಾಟೀಲ್​, ಈಗ ನ್ಯಾಯಕ್ಕಾಗಿ ಎಸ್ಪಿ ಬಳಿ ಹೋಗುವೆ ಎನ್ನುತ್ತಿದ್ದಾರೆ.

ಇದನ್ನೂ ಓದಿ:ಫೇಸ್‌ಬುಕ್‌ ಲವ್​​​ ಸ್ಟೋರಿ ವಿವಾಹಿತ ಮಹಿಳೆಯ ಮತಾಂತರ; ವ್ಯಕ್ತಿಯ ಬಂಧನ

ಓಡಿ ಹೋಗಿದ್ದ ಪ್ರೇಮಿಗಳನ್ನ ಕರೆತರುತ್ತಿದ್ದ ಪೊಲೀಸ್ ಜೀಪ್​ಗೆ ಅಡ್ಡಗಟ್ಟಿ ಹುಡುಗಿಯನ್ನು ಕರೆದೊಯ್ದ ಪೋಷಕರು

ಕೋಲಾರ: ಪ್ರೀತಿ(Love) ಎಂದರೆ ಎರಡು ಜೀವಗಳ ನಡುವಿನ ನಂಬಿಕೆ ಎಂದರೆ ತಪ್ಪಾಗಲಾರದು. ಪ್ರತಿಯೊಬ್ಬರ ಜೀವನದಲ್ಲೂ ಇದು ಮಹತ್ವದ ಘಟ್ಟ. ತಾವು ಪ್ರೀತಿಸಿದವರನ್ನ ಕೊನೆಯವರೆಗೆ ಕಾಪಾಡಿಕೊಂಡು ಮದುವೆಯಾಗಿ ಜೊತೆಯಲ್ಲಿ ಬದುಕಬೇಕೆಂಬ ಅದೆಷ್ಟೋ ಪ್ರೀತಿಗಳು ಮರೆಯಾಗಿ ಹೋಗಿವೆ. ಬೆರಳಣಿಕೆಯಷ್ಟು ಪ್ರೀತಿಗಳು ಮದುವೆಯಾಗಿ ಸುಂದರ ಜೀವನ ನಡೆಸುತ್ತಿದ್ದಾರೆ. ಅದರಂತೆ ಇಲ್ಲೊಂದು ಪ್ರೇಮಿಗಳಾದ ಜಿಲ್ಲೆಯ ಮುಡುವಾರಪಲ್ಲಿ ಪೋಜಿತ ಹಾಗೂ ಗುಡಿಸವಾರಪಲ್ಲಿ ನರೇಶ್ ಇಬ್ಬರು ಪ್ರೀತಿಸಿ ಮನೆ ಬಿಟ್ಟು ಹೋಗಿದ್ದರು.

ಬಳಿಕ ಹುಡುಗಿಯ ಪೋಷಕರು ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಇದರನ್ವಯ ಪ್ರೇಮಿಗಳನ್ನು ಹುಡುಕಿ ಖಾಸಗಿ ಕಾರೊಂದರಲ್ಲಿ ಕರೆ ತರುವ ವೇಳೆ, ಪೋಷಕರು ಅಡ್ಡಗಟ್ಟಿ ಕಾರು ಗ್ಲಾಸ್ ಒಡೆದು ಹುಡುಗಿಯನ್ನು ಕರೆದೊಯ್ದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಯುವಕನ ಮೇಲೆ ಕೂಡ ಹಲ್ಲೆ ಮಾಡಿದ್ದರು. ಬಳಿಕ ಮತ್ತೆ ಪೊಲೀಸ್ ಠಾಣೆಗೆ ಕರೆತಂದು ಹುಡುಗಿಯನ್ನು ಬಿಟ್ಟು ಹೋಗಿದ್ದರು. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಪ್ರಕರಣದ ದಾಖಲಿಸಿಕೊಂಡಿರುವ ರಾಯಲ್ಪಾಡು ಪೊಲೀಸರಿಂದ ಐದು ಜನರನ್ನ ವಶಕ್ಕೆ ಪಡೆದಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ