AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಸಾಹಸ ಪಟ್ಟು ಪಹಲ್ಗಾಮ್​ಗೆ ತೆರಳಿ ಕನ್ನಡಿಗರ ನೆರವಿಗೆ ನಿಂತ ಸಂತೋಷ ಲಾಡ್, ಸಿಎಂ ಮೆಚ್ಚುಗೆ

ಜಮ್ಮು ಮತ್ತು ಕಾಶ್ಮೀರ ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿ, ಅನೇಕರ ಜೀವವನ್ನು ಬಲಿ ಪಡೆದಿದ್ದಾರೆ. ಆದರೆ, ಇಂತಹದೊಂದು ಘಟನೆಯಲ್ಲಿ ಕನ್ನಡಿಗರು ಕೂಡ ಸಾವು-ನೋವಿಗೆ ತುತ್ತಾಗಿದ್ದಾರೆ. ಕನ್ನಡಿಗರ ನೆರವಿಗಾಗಿ ಸಿಎಂ ಸಿದ್ದರಾಮಯ್ಯ ಕೂಡಲೇ ಸಚಿವ ಸಂತೋಷ್ ಲಾಡ್ ರಿಗೆ ಪಹಲ್ಗಾಮ್​ ಕಳುಹಿಸಿದ್ದಾರೆ. ಸಚಿವ ಸಂತೋಷ ಲಾಡ್​ ಹುಬ್ಬಳ್ಳಿಯಿಂದ ಪಹಲ್ಗಾಮ್​ ತೆರಳಲು ಪಟ್ಟ ಕಷ್ಟ ಅಷ್ಟಿಷ್ಟಲ್ಲ.

ಹರಸಾಹಸ ಪಟ್ಟು ಪಹಲ್ಗಾಮ್​ಗೆ ತೆರಳಿ ಕನ್ನಡಿಗರ ನೆರವಿಗೆ ನಿಂತ ಸಂತೋಷ ಲಾಡ್, ಸಿಎಂ ಮೆಚ್ಚುಗೆ
ಸಚಿವ ಸಂತೋಷ ಲಾಡ್​
ಸಂಜಯ್ಯಾ ಚಿಕ್ಕಮಠ
| Edited By: ವಿವೇಕ ಬಿರಾದಾರ|

Updated on: Apr 23, 2025 | 4:55 PM

Share

ಹುಬ್ಬಳ್ಳಿ, ಏಪ್ರಿಲ್​ 23: ಜಮ್ಮು-ಕಾಶ್ಮೀರದ (Jammu-Kashmir) ಪಹಲ್ಗಾಮ್​ನಲ್ಲಿ ಬುಧವಾರ ಸಂಜೆ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ (Pahalgam Terror Attack) ನಡೆಸಿದ್ದಾರೆ. ಉಗ್ರರ ಗುಂಡಿಗೆ ಇಬ್ಬರು ಕನ್ನಡಿಗರು ಸೇರಿದಂತೆ 27 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಧಿಕಾರಿಗಳು ಮತ್ತು ಕಾರ್ಮಿಕ ಸಚಿವ ಸಂತೋಷ ಲಾಡ್ (Santosh Lad)​ ಅವರನ್ನು ಪಹಲ್ಗಾಮ್​ಗೆ ಕಳುಹಿಸಿದ್ದಾರೆ. ಆದರೆ, ಹುಬ್ಬಳ್ಳಿಯಿಂದ ಶ್ರೀನಗರಕ್ಕೆ ತೆರಳಲು ಸಚಿವ ಸಂತೋಷ ಲಾಡ್​ ಸಾಕಷ್ಟು ಪರದಾಡಿದರು.

ಕಳೆದ ರಾತ್ರಿ 9:30 ರ ಸುಮಾರಿಗೆ ಸಚಿವ ಸಂತೋಷ ಲಾಡ್​ ಅವರಿಗೆ ಕರೆ ಮಾಡಿದ್ದ ಸಿಎಂ, ಕೂಡಲೇ ಪಹಲ್ಗಾಮ್​ಗೆ ತೆರಳಿ ಕನ್ನಡಿಗರಿಗೆ ಬೇಕಾದ ನೆರವನ್ನು ಕಲ್ಪಿಸುವಂತೆ ಹೇಳಿದ್ದರು. ಧಾರವಾಡ ಪ್ರವಾಸದಲ್ಲಿದ್ದ ಸಂತೋಷ್ ಲಾಡ್, ಎಲ್ಲ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ, 10 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆದರೆ, ಅಲ್ಲಿ ವಾಸ್ತವ ಬೇರೆಯಾಗಿತ್ತು.

ಇದನ್ನೂ ಓದಿ
Image
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ
Image
ಪಾಕ್ ಸೇನೆಗೆ ನಡುಕ ಶುರು: ಉಪಗ್ರಹ ಚಿತ್ರಗಳಿಂದ ಬಹಿರಂಗವಾಯ್ತು ರಹಸ್ಯ
Image
ಮೆಹಂದಿ ಮಾಸುವ ಮುನ್ನವೇ ನವವಿವಾಹಿತೆಯ ಕುಂಕುಮ ಅಳಿಸಿದ ಉಗ್ರರು
Image
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ

ಶ್ರೀನಗರಕ್ಕೆ ಹೋಗಲು ಬೇಕಾದ ವಿಶೇಷ ವಿಮಾನಕ್ಕಾಗಿ ಸಚಿವ ಸಂತೋಷ ಲಾಡ್ ಸಾಕಷ್ಟು ಪರದಾಟ ನಡೆಸಿದರು. ದೇಶದ ಅನೇಕ ಕಡೆ ಕರೆ ಮಾಡಿದ ಸಂತೋಷ ಲಾಡ್ ಅವರಿಗೆ ವಿಶೇಷ ವಿಮಾನ ಕಳುಹಿಸಲು ಅನೇಕ ಕಂಪನಿಗಳು ಹಿಂದೇಟು ಹಾಕಿದವು. ಇನ್ನು. ಹಲವಡೆ ವಿಶೇಷ ವಿಮಾನಗಳು ಸಿದ್ದವಿದ್ದರೂ, ಪೈಲಟ್​ಗಳು ಇರಲಿಲ್ಲ. ಹೀಗಾಗಿ, ಸರಿಸುಮಾರು ಎರಡುವರೆ ಗಂಟೆಗಳ ಕಾಲ ವಿಶೇಷ ವಿಮಾನ ಅರೆಂಜ್ ಮಾಡಲು ಸಂತೋಷ ಲಾಡ್ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪರದಾಡಿದರು.

ನಂತರ ಮಧ್ಯರಾತ್ರಿ 12:30ಕ್ಕೆ ಮುಂಬೈ ಮೂಲದ ಕಂಪನಿಯೊಂದರ ವಿಶೇಷ ವಿಮಾನ ಬುಕ್ ಮಾಡಿದ ರು. ಮುಂಬೈನಿಂದ ಹೊರಟ ವಿಶೇಷ ವಿಮಾನ, ತಡರಾತ್ರಿ 2:30ರ ಸುಮಾರಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂತು. ನಸುಕಿನ ಜಾವ 3 ಗಂಟೆ ಸುಮಾರಿಗೆ ಹುಬ್ಬಳ್ಳಿಯಿಂದ ಶ್ರೀನಗಕ್ಕೆ ಸಂತೋಷ್ ಲಾಡ್ ಪ್ರಯಾಣ ಬೆಳಸಿದರು.

ಲಾಡ್​ಗೂ ತಟ್ಟಿದ ವಿಮಾನ ಟಿಕೆಟ್​ ದರ ಏರಿಕೆ ಬಿಸಿ

ಸಚಿವ ಸಂತೋಷ್ ಲಾಡ್ ಅವರಿಗೂ ಕೂಡಾ ವಿಮಾನ ದರ ಏರಿಕೆ ಬಿಸಿ ತಾಗಿತು. ಹೌದು, ಘಟನೆ ನಡೆಯುತ್ತಿದ್ದಂತೆ, ಶ್ರೀನಗರಕ್ಕೆ ಹೋಗುವ ಮತ್ತು ಬರುವ ವಿಮಾನಗಳ ಟಿಕೆಟ್​ ದರವನ್ನು ವಿಮಾನಯಾನ ಕಂಪನಿಗಳು ದಿಢೀರನೆ ಹೆಚ್ಚಳ ಮಾಡಿದ್ದವು. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೇ ರೀತಿ ವಿಶೇಷ ವಿಮಾನದ ಬಾಡಿಗೆ ಬೆಲೆ ಕೂಡ ಸುಮಾರು ಹತ್ತು ಪಟ್ಟು ಹೆಚ್ಚಿಸಿದ್ದವು.

ಹುಬ್ಬಳ್ಳಿಯಿಂದ ಶ್ರೀನಗರಕ್ಕೆ ವಿಶೇಷ ವಿಮಾನದ ಮೂಲಕ ಹೋಗಲು ಹೆಚ್ಚಂದರೆ 5-6 ಲಕ್ಷ ರೂ. ತಗಲುತ್ತದೆ. ಆದರೆ, ಸಂತೋಷ್ ಲಾಡ್ ಅವರು ಸರಿಸಮಾರು 56 ಲಕ್ಷ ರೂಪಾಯಿ ನೀಡಿ ವಿಶೇಷ ವಿಮಾನದ ಮೂಲಕ ಶ್ರೀನಗರಕ್ಕೆ ತೆರೆಳಿದ್ದಾರೆ.

ಸ್ಥಳಕ್ಕೆ ಬೇಗನೆ ಹೋಗಿ, ಕನ್ನಡಿಗರಿಗೆ ಸಹಾಯ ಮಾಡಲೇಬೇಕಾಗಿದ್ದರಿಂದ ಸಂತೋಷ್ ಲಾಡ್ 56 ಲಕ್ಷ ರೂ. ನೀಡಿ ಶ್ರೀನಗರಕ್ಕೆ ಹೋಗಿದ್ದಾರೆ. ಮುಂಜಾನೆ ಐದು ಮೂವತ್ತಕ್ಕೆ ಶ್ರೀನಗರ ತಲುಪಿದ್ದ ಸಂತೋಷ್ ಲಾಡ್, ನಂತರ ಅಲ್ಲಿಂದ ಪಹಲ್ಗಾಮ್​ಗೆ ಹೋಗಿ ಮೃತರ ಶವಗಳು ಕರ್ನಾಟಕಕ್ಕೆ ಕಳುಹಿಸಲು, ತೊಂದರೆಗೆ ಸಿಲುಕಿದವರನ್ನು ಸುರಕ್ಷಿತವಾಗಿ ಕಳುಹಿಸುವ ಕೆಲಸ ಆರಂಭಿಸಿದ್ದಾರೆ.

ಟ್ವಿಟರ್ ಪೋಸ್ಟ್​

ಇದನ್ನೂ ಓದಿ: ಪಹಲ್​ಗಾಮ್ ಉಗ್ರ ದಾಳಿ: ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದಿಂದ ಸಹಾಯವಾಣಿ ಆರಂಭ, ಇಲ್ಲಿದೆ ವಿವರ

ಸಂತೋಷ ಲಾಡ್​ ಕಾರ್ಯಕ್ಕೆ ಸಿಎಂ ಶ್ಲಾಘನೆ

“ಪಹಲ್ಗಾಮ್‌ನ ಭಯೋತ್ಪಾದಕ ದಾಳಿಯಲ್ಲಿ ಸಂತ್ರಸ್ತರಾದ ಕನ್ನಡಿಗರ ಶವಗಳನ್ನು ನಾಡಿಗೆ ತಲುಪಿಸುವ, ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ಕೊಡಿಸುವ ಹಾಗೂ ಸಂಕಷ್ಟಕ್ಕೆ ಸಿಲುಕಿರುವವರಿಗೆ ನೆರವು ನೀಡುವ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ನಮ್ಮ ಸರ್ಕಾರ ನಿರ್ವಹಿಸುತ್ತಿದೆ. ಸಚಿವರಾದ ಸಂತೋಷ ಲಾಡ್​ ಅವರು ಈ ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದ್ದು, ನೊಂದವರನ್ನು ಸಂತೈಸಿ, ಧೈರ್ಯತುಂಬಿ ಅವರ ಕುಟುಂಬ ಸದಸ್ಯರಲ್ಲಿ ಒಬ್ಬರಾಗಿ ಜೊತೆ ನಿಂತಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ