AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಜಿಲ್ಲೆಯ 17 ಗ್ರಾಮ ಪಂಚಾಯಿತಿಗಳಿಗೆ ಪಿಡಿಒಗಳೇ ಇಲ್ಲ ! ಕಣ್ಮುಚ್ಚಿ ಕುಳಿತ ಸರ್ಕಾರ

ಧಾರವಾಡ ಮತ್ತು ನವಲಗುಂದ ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒಗಳೇ ಇಲ್ಲ. ಈ ಕೊರತೆ ನೀಗಿಸಲು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಒಬ್ಬ ಪಿಡಿಒಗೆ ಎರಡರಿಂದ ಮೂರು ಪಂಚಾಯಿತಿಗಳ ಪ್ರಭಾರ ನೀಡಲಾಗಿದೆ. ಖಾಲಿ ಇರುವ ಪಿಡಿಒ ಹುದ್ದೆಗಳನ್ನು ಭರ್ತಿ ಮಾಡುವಂತೆ ಜಿಲ್ಲಾ ಪಂಚಾಯಿತಿ ಸರ್ಕಾರಕ್ಕೆ ಮನವಿ ಮಾಡಿದೆ.

ಧಾರವಾಡ ಜಿಲ್ಲೆಯ 17 ಗ್ರಾಮ ಪಂಚಾಯಿತಿಗಳಿಗೆ ಪಿಡಿಒಗಳೇ ಇಲ್ಲ ! ಕಣ್ಮುಚ್ಚಿ ಕುಳಿತ ಸರ್ಕಾರ
ಧಾರವಾಡ ಜಿಲ್ಲಾ ಪಂಚಾಯತ್​
ವಿವೇಕ ಬಿರಾದಾರ
|

Updated on: Dec 02, 2023 | 11:02 AM

Share

ಹುಬ್ಬಳ್ಳಿ ಡಿ.02: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (PDO) ನೇಮಕಕ್ಕೆ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದರಿಂದ ಧಾರವಾಡ (Dharwad) ಜಿಲ್ಲೆಯ ಗ್ರಾಮಗಳ ಅಭಿವೃದ್ಧಿ ಕುಂಟಿತವಾಗುತ್ತಿದೆ. ಜಿಲ್ಲೆಯ 17 ಗ್ರಾಮ ಪಂಚಾಯಿತಿಗಳಿಗೆ ಪಿಡಿಒಗಳೇ ಇಲ್ಲ. ಪಿಡಿಒ ನೇಮಕಾತಿಗಳನ್ನು ತ್ವರಿತಗೊಳಿಸುವಂತೆ ಗ್ರಾಮ ಪಂಚಾಯಿತಿಗಳಿಂದ ಸರಕಾರಕ್ಕೆ (Karnataka Government) ಒತ್ತಾಯಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಶಿಕ್ಷಣ, ಆರೋಗ್ಯ, ವಿದ್ಯುತ್, ಗ್ರಾಮೀಣ ವಸತಿ, ಕುಡಿಯುವ ನೀರು, ಸ್ವಚ್ಛತೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು, ನೀರಿನ ಸಂರಕ್ಷಣೆ ಮತ್ತು ತ್ಯಾಜ್ಯ ನಿರ್ವಹಣೆಯ ವಿವಿಧ ಸಮಾಜ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಲು, ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒ ಅಗತ್ಯ.

ಧಾರವಾಡ ಜಿಲ್ಲೆಯಲ್ಲಿ 145 ಜಿ.ಪಂ

ಧಾರವಾಡ ತಾಲೂಕಿನ ಮಾರಡಗಿ ಮತ್ತು ತಡಕೋಡ, ಕುಂದಗೋಳ ತಾಲೂಕಿನ ಭಾರದವಾಡ, ದೇವನೂರು, ಗುಡಗೇರಿ, ಗುಡೇನಕಟ್ಟಿ, ಹಿರೇಗುಂಜಲ್ಲ, ಹಿರೇನರ್ತಿ, ಮಳಲಿ, ಕಮಡೊಳ್ಳಿ, ಕುಬಿಹಾಳ, ಮತ್ತಿಗಟ್ಟಿ, ರೊಟ್ಟಿಗವಾಡ, ಯರೇಬೂದಿಲ, ನವಲಗುಂದ ತಾಲೂಕಿನ ಕಳವಾಡ, ತಡಹಾಳ್, ಹೆಬ್ಬಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒ ಇಲ್ಲ. ಈ ಕೊರತೆ ನೀಗಿಸಲು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಒಬ್ಬ ಪಿಡಿಒಗೆ ಎರಡರಿಂದ ಮೂರು ಪಂಚಾಯಿತಿಗಳ ಪ್ರಭಾರ ನೀಡಲಾಗಿದೆ. ಖಾಲಿ ಇರುವ ಪಿಡಿಒ ಹುದ್ದೆಗಳನ್ನು ಭರ್ತಿ ಮಾಡುವಂತೆ ಜಿಲ್ಲಾ ಪಂಚಾಯಿತಿ ಸರ್ಕಾರಕ್ಕೆ ಮನವಿ ಮಾಡಿದೆ.

ಮತ್ತಿಗಟ್ಟಿ ಜಿ.ಪಂ.ಅಧ್ಯಕ್ಷ ಸುಭಾಶ್​ ಅಂಗಡಿ ಮಾತನಾಡಿ, ಎರಡು ಪಂಚಾಯಿತಿಗೆ ಒಬ್ಬ ಪಿಡಿಒ ಕೆಲಸ ಮಾಡುತ್ತಿದ್ದಾರೆ. ನಮ್ಮ ಪಿಡಿಒಗೆ ಮತ್ತೊಂದು ಪಂಚಾಯಿತಿಯ ಹೆಚ್ಚುವರಿ ಪ್ರಭಾರ ನೀಡಲಾಗಿದೆ. ಸರ್ಕಾರ ಶೀಘ್ರವೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಆರ್‌ಟಿಐ ಕಾರ್ಯಕರ್ತನ ಕಿರುಕುಳ: ಬೇಸತ್ತ ಪಿಡಿಒ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನ

ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ ಮಾತನಾಡಿ, ಜಿಲ್ಲೆಗೆ ಪಿಡಿಒಗಳನ್ನು ನೀಡುವಂತೆ ಈಗಾಗಲೇ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದೇವೆ. ಶೀಘ್ರವೇ ಸರಕಾರ ಆದೇಶ ಹೊರಡಿಸಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಜಿಪಂ ಉಪಕಾರ್ಯದರ್ಶಿ ಬಿ.ಎಸ್.ಮುಗನೂರಮಠ ಮಾತನಾಡಿ, ಎರಡು ಗ್ರಾಮ ಪಂಚಾಯಿತಿಗಳಿಗೆ ಒಬ್ಬ ಪಿಡಿಒ ಅನ್ನು ನಿಯೋಜನೆ ಮಾಡಿರುವ ನಿದರ್ಶನಗಳಿವೆ. ರಾಜ್ಯ ಸರಕಾರ ವರ್ಗಾವಣೆ ಆದೇಶ ನೀಡುವ ಪ್ರಕ್ರಿಯೆ ಆರಂಭಿಸಿದೆ. ಶೀಘ್ರವೇ ಖಾಲಿ ಇರುವ ಎಲ್ಲ ಪಿಡಿಒ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ