AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ತಂತ್ರಾಂಶದಲ್ಲಿ ಎಡವಟ್ಟು; ಲಸಿಕೆ ಪಡೆಯದಿದ್ದರೂ ಸಿಗುತ್ತಿದೆ ಲಸಿಕೆ ಪಡೆದ ಸರ್ಟಿಫಿಕೆಟ್

ಹುಬ್ಬಳ್ಳಿಯ ಮಂಟೂರು ರೋಡ್ ನಿವಾಸಿ M.S.ಸುಂದರ್ ಜುಲೈನಲ್ಲಿ ಮೊದಲ ಡೋಸ್ ಪಡೆದಿದ್ದರು. ಹೀಗಾಗಿ 2ನೇ ಡೋಸ್ ಲಸಿಕೆ ಪಡೆಯಲು ಲಸಿಕಾ ಕೇಂದ್ರಕ್ಕೆ ಹೋದಾಗ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ. ಸುಂದರ್ ತಮ್ಮ 2ನೇ ಡೋಸ್ ಅಕ್ಟೋಬರ್‌ನಲ್ಲಿ ಪಡೆಯಬೇಕಾಗಿತ್ತು. ಅನಿವಾರ್ಯ ಕಾರಣಗಳಿಂದಾಗಿ ಹೋಗಲು ಸಾಧ್ಯವಾಗಿಲ್ಲ.

ಸರ್ಕಾರದ ತಂತ್ರಾಂಶದಲ್ಲಿ ಎಡವಟ್ಟು; ಲಸಿಕೆ ಪಡೆಯದಿದ್ದರೂ ಸಿಗುತ್ತಿದೆ ಲಸಿಕೆ ಪಡೆದ ಸರ್ಟಿಫಿಕೆಟ್
ಸಾಂಕೇತಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Dec 04, 2021 | 9:13 AM

Share

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಆತಂಕ ಹೆಚ್ಚಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ತೆರಳಿ ಲಸಿಕೆ ಹಾಕುತ್ತಿದ್ದಾರೆ. ಆದ್ರೆ ಕೆಲವರಿಗೆ ಲಸಿಕೆ ಪಡೆಯದಿದ್ದರೂ ಲಸಿಕೆ ಪಡೆದಿರುವ ಸರ್ಟಿಫಿಕೆಟ್ ಸಿಕ್ಕಿದೆ. ತಾಂತ್ರಿಕ ಸಮಸ್ಯೆಯಿಂದ ಲಸಿಕೆ ಪಡೆದಂತೆ ಸರ್ಟಿಫಿಕೆಟ್ ಸಿಕ್ಕಿದೆ.

ಹುಬ್ಬಳ್ಳಿಯ ಮಂಟೂರು ರೋಡ್ ನಿವಾಸಿ M.S.ಸುಂದರ್ ಜುಲೈನಲ್ಲಿ ಮೊದಲ ಡೋಸ್ ಪಡೆದಿದ್ದರು. ಹೀಗಾಗಿ 2ನೇ ಡೋಸ್ ಲಸಿಕೆ ಪಡೆಯಲು ಲಸಿಕಾ ಕೇಂದ್ರಕ್ಕೆ ಹೋದಾಗ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ. ಸುಂದರ್ ತಮ್ಮ 2ನೇ ಡೋಸ್ ಅಕ್ಟೋಬರ್‌ನಲ್ಲಿ ಪಡೆಯಬೇಕಾಗಿತ್ತು. ಅನಿವಾರ್ಯ ಕಾರಣಗಳಿಂದಾಗಿ ಹೋಗಲು ಸಾಧ್ಯವಾಗಿಲ್ಲ. ಹೀಗಾಗಿ 2 ದಿನದ ಹಿಂದೆ ಲಸಿಕೆ ಪಡೆಯಲು ಹೋಗಿದ್ದರು. ಈ ವೇಳೆ ವೈದ್ಯಕೀಯ ಸಿಬ್ಬಂದಿ ಅವರ ಮೊಬೈಲ್ ನಂಬರ್ ಕೋವಿಡ್ ತಂತ್ರಾಂಶದಲ್ಲಿ ಹಾಕುತ್ತಿದ್ದಂತೆ ನಿಮಗೆ ಈಗಾಗಲೇ ಎರಡನೇ ಡೋಸ್ ಆಗಿದೆ ಎಂದು ಬಂದಿದೆ. ಅವರ ಮೊಬೈಲ್ನಲ್ಲಿಯೇ ಪ್ರಮಾಣ ಪತ್ರ ಡೌನ್‌ಲೋಡ್ ಮಾಡಿ ತೋರಿಸಿದ್ದಾರೆ.

ಇದನ್ನು ಕಂಡ ಸುಂದರ್ ಶಾಕ್ ಆಗಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಲಸಿಕಾ ಕೇಂದ್ರದ ಸಿಬ್ಬಂದಿ ಅದೇಗೆ ಬಂದಿದೆ ನಮಗೆ ಗೊತ್ತಿಲ್ಲ ಎಂದಿದ್ದಾರೆ. ನಿಮಗಂತೂ ಎರಡನೇ ಡೋಸ್ ಹಾಕಲು ಅವಕಾಶ ಇಲ್ಲ ಎಂದು ಹೇಳಿದ್ದಾರೆ. ನಂತರ ಸುಂದರ್, ನಾನು ಎರಡು ಡೋಸ್ ಹಾಕಿಸಿಕೊಂಡಿದ್ದರೇ ನಾನೇಕೆ ಮತ್ತೆ ಲಸಿಕೆ ತೆಗೆದುಕೊಳ್ಳಲು ಬರುತ್ತಿದ್ದೆ. ಸರಕಾರವಾಗಲಿ, ವೈದ್ಯರಾಗಲಿ ಮೂರನೇ ಡೋಸ್‌ಗೆ ಅವಕಾಶ ನೀಡಿದ್ದಾರೆಯೇ? ನಾನೇಕೆ ಹೆಚ್ಚಿನ ಡೋಸ್ ಪಡೆಯಲಿ? ಎಂದು ಪ್ರಶ್ನಿಸಿದ್ದಾರೆ. ಆಗ ಅವರು ಹೇಳುವುದು ಸರಿ ಎಂದು ಆಧಾರ ಕಾರ್ಡ್ ನಂಬರ್ ಹಾಕಿ ಲಸಿಕೆ ನೋಂದಣಿ ಮಾಡಲು ಮುಂದಾಗಿದ್ದಾರೆ. ಆದ್ರೆ, ಅವರ ಆಧಾರ್ ಕಾರ್ಡ್‌ನಿಂದ ಎರಡನೇ ಡೋಸ್ ಲಸಿಕೆ ಪ್ರಮಾಣ ಪತ್ರ ಬಂದಿದ್ದರಿಂದ ನೋಂದಣಿ ಆಗಿಲ್ಲ. ಕೊನೆಗೆ ಪಾನ್‌ಕಾರ್ಡ್ ಗುರುತಿನ ಮೇಲೆ ನೋಂದಣಿ ಮಾಡಿ ಲಸಿಕೆ ಹಾಕಿದ್ದಾರೆ.

ಇದನ್ನೂ ಓದಿ: ಡಿಸೆಂಬರ್​ಗೆ ಕೊರೊನಾ 3ನೆಯ ಅಲೆ; ಜನ ಇನ್ನೂ ‘ನಮಗೆ ಬ್ಯಾಡಾ ಕೊರೊನಾ ಲಸಿಕೆ’ ಅಂತಿದ್ದಾರೆ- ಎಚ್ಚರಿಕೆ ಇರಲಿ

Published On - 9:07 am, Sat, 4 December 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್