AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ; ಈಗಾಗಲೇ ಸಿದ್ದವಾದ ವಿನಾಯಕ

ಗಣೇಶೋತ್ಸವಕ್ಕೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಅವಕಾಶ ನಿರಾಕರಿಸುವಂತೆ ಕೋರಿ ಅಂಜುಮನ್ ಸಂಸ್ಥೆ ಮತ್ತೆ ಕೋರ್ಟ್ ಮೊರೆ ಹೋಗಿತ್ತು. ಇಂದು ಮಧ್ಯಾಹ್ನದ ವೇಳೆ ಧಾರವಾಡ ಹೈಕೋರ್ಟ್​ನಲ್ಲಿ ಅಂಜುಮನ್ ಸಲ್ಲಿಸಿದ ಅರ್ಜಿ ತಿರಸ್ಕಾರ ಆಗಿದ್ದು, ಈ ಹಿನ್ನಲೆ ರಾಣಿ ಚೆನ್ನಮ್ಮ ಗಜಾನನ ಉತ್ಸವ ಆಚರಣೆ ಸಮಿತಿ ಕಡೆಯಿಂದ ಗಣಪತಿ ಪ್ರತಿಷ್ಠಾಪನೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ; ಈಗಾಗಲೇ ಸಿದ್ದವಾದ ವಿನಾಯಕ
ಸಿದ್ದವಾದ ಗಣೇಶ
ಶಿವಕುಮಾರ್ ಪತ್ತಾರ್
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 15, 2023 | 6:51 PM

Share

ಹುಬ್ಬಳ್ಳಿ, ಸೆ.15: ಹುಬ್ಬಳ್ಳಿಯ ಈದ್ಗಾ ಮೈದಾನ (Idgah Maidan)ದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ದೊರೆತ ಹಿನ್ನೆಲೆ, ರಾಣಿ ಚೆನ್ನಮ್ಮ ಗಜಾನನ ಉತ್ಸವ ಆಚರಣೆ ಸಮಿತಿ ಕಡೆಯಿಂದ ಗಣಪತಿ ಪ್ರತಿಷ್ಠಾಪನೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಈಗಾಗಲೇ ವಿನಾಯಕ ಕೂಡ ಸಿದ್ದವಾಗಿದ್ದಾನೆ. ಹೌದು, ಧಾರವಾಡದ ಚರಂತಿಮಠ ಗಾರ್ಡನ್‌ನಲ್ಲಿ ಸುರೇಶ್ ಕರಿಗಾರ ಕೈಚಳಕದಲ್ಲಿ ಗಣಪ ಮೂಡಿ ಬಂದಿದ್ದು, ಐದು ಅಡಿ ಎತ್ತರ ಇರುವ ಪರಿಸರ ಸ್ನೇಹಿ ಗಣೇಶ ಇದಾಗಿದೆ.

ಗಣೇಶೋತ್ಸವಕ್ಕೆ ಅವಕಾಶ ಕೊಡದಂತೆ ಹೈಕೋರ್ಟ್ ಮೊರೆ ಹೋಗಿದ್ದ ಅಂಜುಮನ್ ಸಂಸ್ಥೆ

ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಿರುವ ಈದ್ಗಾ ಮೈದಾನದಲ್ಲಿ ಕಳೆದ ವರ್ಷದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈದ್ಗಾ ಮೈದಾನ ಪಾಲಿಕೆಯ ಆಸ್ತಿಯಾಗಿದ್ದು, ಹುಬ್ಬಳ್ಳಿ- ಧಾರವಾಡ‌ ಮಹಾನಗರ ಪಾಲಿಕೆ ಬಿಜೆಪಿ ಆಡಳಿತದಲ್ಲಿದೆ. ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕಳೆದ ವರ್ಷ ಠರಾವು‌ ಪಾಸ್ ಮಾಡಿ ಗಣೇಶೊತ್ಸವಕ್ಕೆ ಅನುಮತಿ ನೀಡಲಾಗಿತ್ತು. ಈ ಹಿನ್ನಲೆ ಅಂಜುಮನ್ ಸಂಸ್ಥೆ ಗಣೇಶೋತ್ಸವಕ್ಕೆ ಅವಕಾಶ ಕೊಡದಂತೆ ಹೈಕೋರ್ಟ್ ಮೊರೆ ಹೋಗಿತ್ತು. ಆದರೆ, ಮೈದಾನ ಪಾಲಿಕೆ ಆಸ್ತಿಯಾಗಿದ್ದು, ಸಾರ್ವಜನಿಕ ಬಳಕೆಗೆ ಕೊಡಬಹುದು ಎಂದು ಕೋರ್ಟ್ ಆದೇಶಿಸಿತ್ತು.

ಇದನ್ನೂ ಓದಿ:ಸರ್ಕಾರದ ಕುಮ್ಮಕ್ಕಿನಿಂದ ಹು-ಧಾ ಪಾಲಿಕೆ ಆಯುಕ್ತರು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿಲ್ಲ: ಮಹೇಶ್​ ಟೆಂಗಿನಕಾಯಿ

ಈ ವರ್ಷ ಕೂಡ ಮಹಾನಗರ ಪಾಲಿಕೆಯಲ್ಲಿ ಠರಾವು ಪಾಸ್

ಈ ವರ್ಷ ಕೂಡ ಮಹಾನಗರ ಪಾಲಿಕೆಯಲ್ಲಿ ಠರಾವು ಪಾಸ್ ಮಾಡಲಾಗಿದೆ. ಗಣೇಶೋತ್ಸವಕ್ಕೆ ಅವಕಾಶ ನೀಡುವಂತೆ ಮೇಯರ್ ಅವರು ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ. ಇನ್ನೊಂದೆಡೆ ಅಂಜುಮನ್ ಸಂಸ್ಥೆ ಮತ್ತೆ ಕೋರ್ಟ್ ಮೊರೆ ಹೋಗಿತ್ತು. ಈ ನಡುವೆ ಪಾಲಿಕೆ ಆಯುಕ್ತರು ಅನುಮತಿ ಕೊಡಲು ವಿಳಂಭ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಪ್ರತಿಭಟನೆ ಮಾಡಿದ್ದಾರೆ. ಶಾಸಕ ಅರವಿಂದ ಬೆಲ್ಲದ್ ಮತ್ತು ಮಹೇಶ್ ಟೆಂಗಿನಕಾಯಿ ನೇತ್ರತ್ವದಲ್ಲಿ ಹೋರಾಟ ನಡೆಸಿದ್ದಾರೆ. ಎರಡು ದಿನಗಳಿಂದ ಬಿಜೆಪಿ ಅಹೋರಾತ್ರಿ ಧರಣಿ ಹಮ್ಮಿಕೊಂಡಿತ್ತು, ಇದಕ್ಕೆ ಮುತಾಲಿಕ್ ಕೂಡಾ ಸಾಥ್ ನೀಡಿದ್ರು. ಮದ್ಯಾಹ್ನದ ವೇಳೆ ಧಾರವಾಡ ಹೈಕೋರ್ಟ್ ನಲ್ಲಿ ಅಂಜುಮನ್ ಸಲ್ಲಿಸಿದ ಅರ್ಜಿ ತಿರಸ್ಕಾರ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!