AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ 8 ಮನೆಗಳ ಬಾಗಿಲಿಗೆ ಹೊರಗಡೆಯಿಂದ ಬೀಗ ಹಾಕಿದ ದುಷ್ಕರ್ಮಿಗಳು! ವಿಚಿತ್ರ ಘಟನೆಗೆ ಬೆಚ್ಚಿಬಿದ್ದ ಸ್ಥಳೀಯರು

ಧಾರವಾಡ ನಗರದ ಕೆಸಿಡಿ ವೃತ್ತದ ಬಳಿ ಇರುವ ಆಕಾಶವಾಣಿ ವಸತಿ ಸಮುಚ್ಛಯದಲ್ಲಿ ಒಟ್ಟು 46 ಮನೆಗಳಿವೆ. ಈ ಪೈಕಿ 8 ಮನೆಗಳ ಜನರು ಇಂದು (ಜ.31) ಬೆಳಿಗ್ಗೆ ಮನೆಯಿಂದ ಹೊರಗೆ ಹೋಗಲು ಹೊರಟಾಗ ಮನೆ ಬಾಗಿಲು ಬಂದ್ ಆಗಿರುವುದು ತಿಳಿದುಬಂದಿದೆ.

ಧಾರವಾಡದಲ್ಲಿ 8 ಮನೆಗಳ ಬಾಗಿಲಿಗೆ ಹೊರಗಡೆಯಿಂದ ಬೀಗ ಹಾಕಿದ ದುಷ್ಕರ್ಮಿಗಳು! ವಿಚಿತ್ರ ಘಟನೆಗೆ ಬೆಚ್ಚಿಬಿದ್ದ ಸ್ಥಳೀಯರು
ಬಾಗಿಲಿಗೆ ಕೀಲಿ ಹಾಕಿದ್ದಾರೆ ಮತ್ತು ಗಾಡಿ ಟೈಯರ್​ನಿಂದ ಗಾಳಿ ತೆಗೆದಿದ್ದಾರೆ
TV9 Web
| Updated By: sandhya thejappa|

Updated on:Jan 31, 2022 | 10:55 AM

Share

ಧಾರವಾಡ: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಕಳ್ಳರ ಹಾವಳಿ ಹೆಚ್ಚಾಗಿದೆ. ಮನೆ ಕಳ್ಳತನ, ಬೈಕ್ ಕಳ್ಳತನ ನಡೆಯುತ್ತಲೇ ಇವೆ. ಇದೇ ವೇಳೆ ನಗರದ ವಸತಿ ಗೃಹದಲ್ಲಿ ನಡೆದ ಘಟನೆಯೊಂದು ಜನರನ್ನು ಮತ್ತಷ್ಟು ಬೆಚ್ಚಿ ಬೀಳಿಸಿದೆ. ಎಂದಿನಂತೆ ಬೆಳಿಗ್ಗೆ ಎದ್ದು ಮನೆಯಿಂದ ಹೊರ ಬರಬೇಕು ಅಂದುಕೊಂಡ ಜನರಿಗೆ ಶಾಕ್ ಆಗಿದೆ. ಸುಮಾರು ಎಂಟು ಮನೆಗಳಿಗೆ (Homes) ದುಷ್ಕರ್ಮಿಗಳು (Perpetrators) ಹೊರಗಡೆಯಿಂದ ಕೀಲಿ (Key) ಹಾಕಿದ್ದು, ಜನರು ಮನೆಯಿಂದ ಹೊರಬರದಂತೆ ಮಾಡಿದ್ದರು.

ಆಕಾಶವಾಣಿ ವಸತಿಗೃಹದ ಜನರಿಗೆ ಆತಂಕ: ಧಾರವಾಡ ನಗರದ ಕೆಸಿಡಿ ವೃತ್ತದ ಬಳಿ ಇರುವ ಆಕಾಶವಾಣಿ ವಸತಿ ಸಮುಚ್ಛಯದಲ್ಲಿ ಒಟ್ಟು 46 ಮನೆಗಳಿವೆ. ಈ ಪೈಕಿ 8 ಮನೆಗಳ ಜನರು ಇಂದು (ಜ.31) ಬೆಳಿಗ್ಗೆ ಮನೆಯಿಂದ ಹೊರಗೆ ಹೋಗಲು ಹೊರಟಾಗ ಮನೆ ಬಾಗಿಲು ಬಂದ್ ಆಗಿರುವುದು ತಿಳಿದುಬಂದಿದೆ. ಪೇಪರ್, ಹಾಲು ಹಾಕುವ ಹುಡುಗರನ್ನು ಕರೆದು ಕೇಳಿದಾಗ ಹೊರಗಡೆಯಿಂದ ಕೀಲಿಯನ್ನು ಹಾಕಲಾಗಿದೆ ಎಂದು ತಿಳಿದುಬಂತು.

ಬೆಳ್ಳಂಬೆಳಗ್ಗೆ ತಮ್ಮ ಮನೆಯ ಬಾಗಿಲಿಗೆ ಹೊರಗಿಂದ ಕೀಲಿ ಹಾಕಿರುವುದನ್ನು ಕಂಡ ಜನರು ಆತಂಕಗೊಂಡಿದ್ದಾರೆ. ಕೆಲವರು ಫೋನ್ ಮಾಡಿ ಕೀಲಿ ಒಡೆಸಿಕೊಂಡು ಹೊರಗೆ ಬಂದರೆ, ಮತ್ತೆ ಕೆಲವರು ಆತಂಕದಿಂದ ಮನೆಯಲ್ಲಿಯೇ ಉಳಿದುಕೊಳ್ಳಬೇಕಾಯಿತು. ಈ ವಸತಿಗೃಹ ನಿರ್ಮಿಸಿ 36 ವರ್ಷಗಳೇ ಆಗಿವೆ. ಅವತ್ತಿನಿಂದ ಇವತ್ತಿನವರೆಗೆ ಇಂತಹ ಘಟನೆಗಳು ನಡೆದಿರಲಿಲ್ಲ. ಈಗ ನಡೆದಿರುವ ಘಟನೆಯ ಹಿಂದೆ ಏನಾದರೂ ದುಷ್ಕೃತ್ಯದ ಸಂಚಿದೆಯಾ ಎಂಬ ಅನುಮಾನ ಸ್ಥಳೀಯರಲ್ಲಿ ಮೂಡಿದೆ.

ವಿದ್ಯುತ್ ಸಂಪರ್ಕ ಕಟ್: ವಸತಿಗೃಹಗಳಲ್ಲಿ ಸುಮಾರು 250 ಜನರು ವಾಸಿಸುತ್ತಿದ್ದಾರೆ. ಬೆಳಗಿನ ಜಾವ ಸುಮಾರು ಜನರು ಕೆಲಸಕ್ಕೆ, ವಾಕಿಂಗ್ ಹೋಗುತ್ತಾರೆ. ಆದರೆ ಇಂದು ಬೆಳಗಿನ ಜಾವ ಸುಮಾರು 3:30 ಕ್ಕೆ ವಿದ್ಯುತ್ ಸಂಪರ್ಕ ಬಂದ್ ಆಗಿತ್ತಂತೆ. ಇದೇ ವೇಳೆ ದುಷ್ಕರ್ಮಿಗಳು ಈ ಕೃತ್ಯವೆಸಗಿರಬಹುದಾ ಅನ್ನೋ ಅನುಮಾನ ಮೂಡಿದೆ. ಆವರಣದಲ್ಲಿ ನಿಲ್ಲಿಸಿರುವ ಪಲ್ಸರ್ ಬೈಕ್ ಹಾಗೂ ಕ್ರೂಸರ್ ವಾಹನಗಳ ಟೈಯರ್​ ಗಾಳಿಯನ್ನು ಕೂಡ ದುಷ್ಕರ್ಮಿಗಳು ತೆಗೆದಿದ್ದಾರೆ. ಸದ್ಯ ಘಟನೆ ಬಗ್ಗೆ ಮಾಹಿತಿ ಪಡೆದ ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮಾಹಿತಿಯನ್ನು ಕಲೆ ಹಾಕಿದರು.

36 ವರ್ಷಗಳಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ರಾತ್ರಿ 12 ರವರೆಗೆ ಜನರು ಮನೆಗೆ ಬರುತ್ತಲೇ ಇರುತ್ತಾರೆ. ಬೆಳಿಗ್ಗೆ 4 ಗಂಟೆಗೆ ಕೆಲಸಕ್ಕೆ ಹೋಗುವವರು ಸಾಕಷ್ಟು ಜನರಿದ್ದಾರೆ. ಆದರೆ ಈ ಅವಧಿಯ ನಡುವೆ ದುಷ್ಕರ್ಮಿಗಳು ಇಂಥ ಕೃತ್ಯ ಎಸಗಿದ್ದು ಅಚ್ಚರಿ ಜತೆಗೆ ಆತಂಕವನ್ನೂ ಸೃಷ್ಟಿಸಿದೆ. ಮುಖ್ಯ ರಸ್ತೆಯಲ್ಲಿಯೇ ಈ ಕಟ್ಟಡವಿದ್ದರೂ ಇಂಥದ್ದೊಂದು ಘಟನೆ ನಡೆದಿದೆ. ಪೊಲೀಸರು ಕೂಡ ಒಳಗಡೆ ಬಂದು, ನಿತ್ಯವೂ ರೌಂಡ್ಸ್ ಮಾಡಿದರೆ ನಮಗೆ ನೆಮ್ಮದಿ ಸಿಗುತ್ತದೆ ಅಂತ ನಿವಾಸಿ ಡಾ.ಚೇತನ್ ನಾಯಕ್ ಹೇಳಿದರು.

ಟಿವಿ9 ಡಿಜಿಟಲ್ ಜತೆಗೆ ಮಾತನಾಡಿದ ಸ್ಥಳೀಯ ನಿವಾಸಿ ರಜಿನಿ ಕುಲಕರ್ಣಿ, ನಾನು ಎಂದಿನಂತೆ ಬೆಳಿಗ್ಗೆ ಬಾಗಿಲು ತೆರೆಯಲು ಹೋದೆ. ಆದರೆ ಅದು ಓಪನ್ ಆಗಲಿಲ್ಲ. ಕೂಡಲೇ ನನ್ನ ಮಗಳಿಗೆ ಹಿಂದಿನ ಬಾಗಿಲಿನಿಂದ ಹೋಗಿ ನೋಡಿಕೊಂಡು ಬರುವಂತೆ ಹೇಳಿದಾಗ, ಹೊರಗಡೆಯಿಂದ ಹೊಸದೊಂದು ಕೀಲಿ ಹಾಕಲಾಗಿತ್ತು. ಇದೇ ರೀತಿ ಅನೇಕರ ಮನೆಗಳಿಗೆ ಕೀಲಿ ಹಾಕಲಾಗಿತ್ತು. ಕೀಲಿ ಹಾಕಿದವರ ಮನೆಗಳಲ್ಲಿನ ಜನರು ಹೊರಗೆ ಬಾರದೇ ಪರದಾಡುವಂತಾಯಿತು. ನಾವು ಇಲ್ಲಿ 25 ವರ್ಷಗಳಿಂದ ನೆಲೆಸಿದ್ದೇವೆ. ಆದರೆ ಇದೇ ಮೊದಲ ಬಾರಿಗೆ ಇಂಥದ್ದೊಂದು ಘಟನೆ ನಡೆದಿದೆ. ನಮಗೆಲ್ಲಾ ಇದರಿಂದಾಗಿ ಭಾರೀ ಆತಂಕವುಂಟಾಗಿದೆ. ಪೊಲೀಸರು ಈ ಘಟನೆ ಬಗ್ಗೆ ತನಿಖೆ ನಡೆಸಬೇಕು ಅಂತಾ ಒತ್ತಾಯಿಸಿದರು..

ವರದಿ: ನರಸಿಂಹಮೂರ್ತಿ ಪ್ಯಾಟಿ

ಇದನ್ನೂ ಓದಿ

ಹಿಂದೂ ಧರ್ಮದ ಬಗ್ಗೆ ಸ್ನಾತಕೋತ್ತರ ಕೋರ್ಸ್ ಆರಂಭಿಸಿದ ಬನಾರಸ್ ಹಿಂದೂ ವಿವಿ; ಮೊದಲ ಬ್ಯಾಚ್​ಗೆ 45 ವಿದೇಶಿ ವಿದ್ಯಾರ್ಥಿಗಳ ಸೇರ್ಪಡೆ

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಕ್ರೂಸರ್ ಮೇಲೆ ಕುಳಿತು ಬೆಂಕಿ ಹಚ್ಚಿಕೊಂಡ ಮಾಲಿಕ; ಓನರ್ ಬಚಾವ್, ವಾಹನ ಸುಟ್ಟುಕರಕಲು

Published On - 10:48 am, Mon, 31 January 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?