AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab Verdict: ಮೇಲ್ಮನವಿ ಸಲ್ಲಿಸುವುದು ಬಿಟ್ಟು, ಅತಿರೇಕದಿಂದ ನಡೆದುಕೊಳ್ತಿದ್ದಾರೆ; ಕ್ರಮ ಕೈಗೊಳ್ಳಿ -ಪ್ರಮೋದ ಮುತಾಲಿಕ್ ಮನವಿ

ಇವರೆಲ್ಲಾ ಸೇರಿಕೊಂಡು ಕೋರ್ಟ್ ಗೆ ಅವಮಾನ ಮಾಡಿದ್ದಾರೆ. ನ್ಯಾಯಾಲಯ‌ ಇರುವುದೇ ಸಂವಿಧಾನದ ಮೇಲೆ. ಈ ರೀತಿಯ ಹೇಳಿಕೆಗಳು ಸರಿಯಲ್ಲ. ನಾವು ಅತಾವುಲ್ಲಾ ಅವರ ಮೇಲೆ ನ್ಯಾಯಾಂಗ ನಿಂದನೆ ಕೇಸ್ ಹಾಕಲು ಎಜಿ ಅವರಿಗೆ ಅನುಮತಿ ಕೇಳಿದ್ದೇವೆ. ಧಾರವಾಡ ಹೈಕೋರ್ಟ್ ನಲ್ಲಿ ಹೆಚ್ಚುವರಿ ಎಜಿ ವಿದ್ಯಾವತಿ ಅವರಿಗೆ ಮನವಿ ನೀಡಿದ್ದೇವೆ - ಶ್ರೀರಾಮ‌ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್

Hijab Verdict: ಮೇಲ್ಮನವಿ ಸಲ್ಲಿಸುವುದು ಬಿಟ್ಟು, ಅತಿರೇಕದಿಂದ ನಡೆದುಕೊಳ್ತಿದ್ದಾರೆ; ಕ್ರಮ ಕೈಗೊಳ್ಳಿ -ಪ್ರಮೋದ ಮುತಾಲಿಕ್ ಮನವಿ
ಶ್ರೀರಾಮಸೇನೆಯ ನಾಯಕ ಪ್ರಮೋದ್ ಮುತಾಲಿಕ್
TV9 Web
| Updated By: ಸಾಧು ಶ್ರೀನಾಥ್​|

Updated on:Mar 16, 2022 | 2:54 PM

Share

ಧಾರವಾಡ: ಶಾಲಾ ಕಾಲೇಜಿನಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವುದು ಕಡ್ಡಾಯವಲ್ಲ. ಸಮವಸ್ತ್ರವೇ ಕಡ್ಡಾಯ ಎಂದು ನಿನ್ನೆ ಕರ್ನಾಟಕ ಹೈಕೋರ್ಟ್​ ಸ್ಪಷ್ಟ ಆದೇಶ ನೀಡಿದೆ. ಈ ಮಧ್ಯೆ, ಹೈಕೋರ್ಟ್​ ಆದೇಶದ ವಿರುದ್ಧ ಮೇಲ್ಮನವಿ ಹೋಗಲಾಗಿದೆ. ಆದರೆ ಸುಪ್ರೀಂ ಕೋರ್ಟ್ ಪ್ರಕರಣದ ತುರ್ತು ವಿಚಾರಣೆಗೆ ನಕಾರ ಸೂಚಿಸಿದೆ. ಈ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವ ಅಗತ್ಯ ಏನಿದೆ? ನಾಳೆಯಿಂದ ರಜೆ ಆರಂಭವಾಗುತ್ತದೆ ಎಂದು ಸಿಜೆ ಎನ್​.ವಿ. ರಮಣ ತಿಳಿಸಿದ್ದಾರೆ. ಹಾಗಾಗಿ ಹೋಳಿ ಹಬ್ಬ ರಜೆಯ ಬಳಿಕ ಮೇಲ್ಮನವಿ ವಿಚಾರಣೆ ಸಾಧ್ಯತೆ ಎಂದು ಹೇಳಲಾಗಿದೆ.

ಇದು ಹಿಜಾಬ್ (Hijab Verdict) ಕುರಿತಾದ ಕೋರ್ಟ್​ ಬೆಳವಣಿಗೆಗಳಾಗಿದ್ದರೆ ಕೋರ್ಟ್​ ಆಚೆಗೆ, ಮುಖ್ಯವಾಗಿ ಅರ್ಜಿದಾರರ ವತಿಯಿಂದ ರಾಜ್ಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಅನೇಕ ಕಡೆ ಕರ್ನಾಟಕ ಹೈಕೋರ್ಟ್ ತೀರ್ಪು ಧಿಕ್ಕರಿಸಿ, ನಡೆದುಕೊಳ್ಳುತ್ತಿರುವ ಪ್ರಸಂಗಗಳೂ ನಡೆಯುತ್ತಿವೆ. ಹಿಜಾಬ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಹೋಗ್ತೇವೆ ಎಂದು ಸ್ವತಃ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಫಿ ಸಅದಿ ಹೇಳಿದ್ದಾರೆ. ಈ ಬೆಳವಣಿಗೆಗಳನ್ನು ಗಮನಿಸಿ, ಗಂಭೀರವಾಗಿರುವ ಶ್ರೀರಾಮ‌ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಧಾರವಾಡ ಹೈಕೋರ್ಟ್ ಹೆಚ್ಚುವರಿ ಅಡ್ವೊಕೇಟ್​ ಜನರಲ್​ಗೆ (ಎಜಿ) ಮನವಿಯೊಂದನ್ನು ಸಲ್ಲಿಸಿದ್ದಾರೆ.

‘ಹೈ’ ತೀರ್ಪಿಗೆ ಅಗೌರವ? ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸಲು ಡಿಮಾಂಡ್! ಈ ಬಗ್ಗೆ ಧಾರವಾಡದಲ್ಲಿ ಮಾತನಾಡಿರುವ ಪ್ರಮೋದ ಮುತಾಲಿಕ್ ನಿನ್ನೆ ಹಿಜಾಬ್ ಆದೇಶ ಬಂದಿತ್ತು. ಅದಕ್ಕೆ ಮೇಲ್ಮನವಿ ಸಲ್ಲಿಸಬಹುದು. ಆದರೆ‌ ಅದನ್ನು ವಿರೋಧಿಸಿ ಕೆಲವರು ಮಾತನಾಡಿದ್ದಾರೆ. ಅರ್ಜಿದಾರರಾದ ಆ ಆರು ವಿದ್ಯಾರ್ಥಿನಿಯರೂ ಸಹ ಹೈಕೋರ್ಟ್​ ಆದೇಶವನ್ನು ಗೌರವಿಸಿಲ್ಲ. ಅವರು ಅಗೌರವವಾಗಿ ನಡೆದುಕೊಂಡಿದ್ದಾರೆ. ಸಿಎಫ್ಐ ಅಧ್ಯಕ್ಷ ಅತಾವುಲ್ಲಾ ಕೋರ್ಟ್​ ಆದೇಶವನ್ನು ಅಸಂವಿಧಾನಿಕ ಎಂದು ಜರಿದಿದ್ದಾರೆ.

ಇದರಿಂದ ಇವರೆಲ್ಲಾ ಸೇರಿಕೊಂಡು ಕೋರ್ಟ್ ಗೆ ಅವಮಾನ ಮಾಡಿದ್ದಾರೆ. ನ್ಯಾಯಾಲಯ‌ ಇರುವುದೇ ಸಂವಿಧಾನದ ಮೇಲೆ. ಈ ರೀತಿಯ ಹೇಳಿಕೆಗಳು ಸರಿಯಲ್ಲ. ನಾವು ಅತಾವುಲ್ಲಾ ಅವರ ಮೇಲೆ ನ್ಯಾಯಾಂಗ ನಿಂದನೆ ಕೇಸ್ ಹಾಕಲು ಎಜಿ ಅವರಿಗೆ ಅನುಮತಿ ಕೇಳಿದ್ದೇವೆ. ಧಾರವಾಡ ಹೈಕೋರ್ಟ್ ನಲ್ಲಿ ಹೆಚ್ಚುವರಿ ಎಜಿ ವಿದ್ಯಾವತಿ ಅವರಿಗೆ ಮನವಿ ನೀಡಿದ್ದೇವೆ. ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಅವಕಾಶ ಇದೆ. ಅದು ಬಿಟ್ಟು ಈ ರೀತಿ ಮಾತನಾಡಿದ್ದಕ್ಕೆ‌ ಕ್ರಮಕ್ಕೆ ಮುಂದಾಗಬೇಕು ಎಂದು ಮನವಿ ಮಾಡುವುದಾಗಿ ತಿಳಿಸಿದ್ದಾರೆ.

Also Read: ಬೆಳಗಾವಿ ರಾಜಕಾರಣಿಗಳ ಒತ್ತಡಕ್ಕೆ ಮಣಿದರಾ ರಾಜ್ಯ ಪೊಲೀಸರು? ಎಂಇಎಸ್​ ಪುಂಡರ ವಿರುದ್ಧ ದೇಶದ್ರೋಹ ಕೇಸ್ ಕೈಬಿಟ್ಟರಾ?

Published On - 2:46 pm, Wed, 16 March 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!