AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IIT Dharwad: ಮಾರ್ಚ್ 12ರಂದು ಧಾರವಾಡದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆಗೆ ಪ್ರಧಾನಿ ಮೋದಿ ಚಾಲನೆ

PM Modi Dharwad Visit: ಮಾರ್ಚ್ 12ರಂದು ಪ್ರಧಾನಿ ಮೋದಿ ಮಂಡ್ಯ ಜಿಲ್ಲೆಯ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಬಳಿಕ ಹುಬ್ಬಳ್ಳಿ ಏರ್ ಪೋರ್ಟ್​​ನಿಂದ ಹೆಲಿಕಾಪ್ಟರ್ ಮೂಲಕ ಐಐಟಿ ಸ್ಥಳಕ್ಕೆ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ, ಧಾರವಾಡ ಐಐಟಿ ನೂತನ ಕಟ್ಟಡ, ಏಷ್ಯಾದ ಅತಿ ಉದ್ದದ ಹುಬ್ಬಳ್ಳಿಯ ರೈಲ್ವೆ ಪ್ಲಾಟ್ ಫಾರ್ಮ್ ಸೇರಿದಂತೆ ವಿವಿಧ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

IIT Dharwad: ಮಾರ್ಚ್ 12ರಂದು ಧಾರವಾಡದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆಗೆ ಪ್ರಧಾನಿ ಮೋದಿ ಚಾಲನೆ
ಧಾರವಾಡ-ಐಐಟಿ (ಎಡಚಿತ್ರ) ಮತ್ತು ಪ್ರಧಾನಿ ನರೇಂದ್ರ ಮೋದಿ (ಬಲಚಿತ್ರ)
Rakesh Nayak Manchi
| Updated By: Digi Tech Desk|

Updated on:Mar 09, 2023 | 10:11 AM

Share

ಧಾರವಾಡ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ದಿನಗಳು ಬಾಕಿ ಇರುವಾಗಲೇ ಮಾರ್ಚ್ 12 ರಂದು ಮತ್ತೆ ಕರ್ನಾಟಕಕ್ಕೆ ಕಾಲಿಡುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಧಾರವಾಡಕ್ಕೆ ಭೇಟಿ ನೀಡಿ 5 ಸಾವಿರ ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಂದು ಮಂಡ್ಯ ಜಿಲ್ಲೆಯ ಕಾರ್ಯಕ್ರಮ ಮುಗಿಸಿಕೊಂಡು ಪ್ರಧಾನಿ ಮೋದಿ ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಬಳಿಕ ಹುಬ್ಬಳ್ಳಿ ಏರ್ ಪೋರ್ಟ್​​ನಿಂದ ಹೆಲಿಕಾಪ್ಟರ್ ಮೂಲಕ ಐಐಟಿ ಸ್ಥಳಕ್ಕೆ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ, ಧಾರವಾಡ ಐಐಟಿ (Dharwad IIT) ನೂತನ ಕಟ್ಟಡ, ಏಷ್ಯಾದ ಅತಿ ಉದ್ದದ ಹುಬ್ಬಳ್ಳಿಯ ರೈಲ್ವೆ ಪ್ಲಾಟ್ ಫಾರ್ಮ್ ಸೇರಿದಂತೆ ವಿವಿಧ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಐಐಟಿ-ಧಾರವಾಡ ಕ್ಯಾಂಪಸ್ ಹೊರಗೆ ಮೈದಾನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಮೋದಿ ಅವರು ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿರ್ಮಿಸಲಾದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಅನ್ನು ಉದ್ಘಾಟಿಸಲಿದ್ದಾರೆ. ನಂತರ ತುಪ್ಪರಿಹಳ್ಳ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗೆ 312 ಕೋಟಿ ರೂ ವೆಚ್ಚವಾಗಿದೆ ಮತ್ತು 150 ಕೋಟಿ ರೂ.ಗಳ ವರ್ಕ್ ಆರ್ಡರ್ ನೀಡಲಾಗಿದೆ.

250 ಕೋಟಿ ರೂ.ಗಳ ಜಯದೇವ ಹೃದ್ರೋಗ ಸಂಸ್ಥೆ ಮತ್ತು 144 ಗ್ರಾಮ ಪಂಚಾಯಿತಿಗಳಿಗೆ ನಲ್ಲಿ ನೀರು ಒದಗಿಸುವ 1,200 ಕೋಟಿ ರೂ.ಗಳ ಜಲ ಜೀವನ್ ಮಿಷನ್​ಗೆ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 42 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾದ 295 ವಿವೇಕ್ ತರಗತಿ ಕೊಠಡಿಗಳನ್ನು ಉದ್ಘಾಟಿಸಲಿದ್ದಾರೆ. ನಂತರ ಸ್ಮಾರ್ಟ್ ಸಿಟಿ ಯೋಜನೆಯಡಿ 353 ಕೋಟಿ ರೂ. ವೆಚ್ಚದ 15 ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: ದೇಶದ ಜನ ರಾಹುಲ್ ಪಕ್ಷಕ್ಕೆ ಏನು ತೀರ್ಪು ಕೊಟ್ಟಿದ್ದಾರೋ ಅದರ ಪ್ರಕಾರವೇ ಸಮಯ ನೀಡಿದ್ದೇವೆ, ಅದಕ್ಕೆ ನಮ್ಮ ಸರ್ಕಾರ ಹೊಣೆಯಲ್ಲ -ಪ್ರಲ್ಹಾದ್ ಜೋಶಿ ತಿರುಗೇಟು

ಹುಬ್ಬಳ್ಳಿಯಲ್ಲಿ 166 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೈಟೆಕ್ ಕ್ರೀಡಾ ಸಂಕೀರ್ಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿರುವ ಮೋದಿ, ಹುಬ್ಬಳ್ಳಿ-ಹೊಸಪೇಟೆ ರೈಲು ಮಾರ್ಗ ವಿದ್ಯುದೀಕರಣ ಯೋಜನೆಯನ್ನು ಕೂಡ ಉದ್ಘಾಟಿಸಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಸಮಾವೇಶಕ್ಕೆ ಧಾರವಾಡ ಜಿಲ್ಲೆಯಿಂದಲೇ ಎರಡು ಲಕ್ಷಕ್ಕೂ ಅಧಿಕ ಜನರು ಜಮಾಯಿಸುವ ನಿರೀಕ್ಷೆ ಇದೆ.

ಈ ಎಲ್ಲ ಕಾರ್ಯಕ್ರಮಗಳಿಗೆ ಸಚಿವರು, ಉಸ್ತುವಾರಿಗಳು, ಶಾಸಕರು, ನಾಯಕರು ಭರ್ಜರಿ ತಯಾರಿ ನಡೆಸಿದ್ದಾರೆ. ಇನ್ನು, ಈ ವರ್ಷ ವಿಶ್ವ ಸಿರಿ ಧಾನ್ಯ ವರ್ಷಾಚರಣೆ ಎಂದು ಘೋಷಿಸಿರುವ ಹಿನ್ನಲೆ ರಿಧಾನ್ಯಗಳ ಮೂಲಕವೇ ಪ್ರಧಾನಿಯವರನ್ನು ಸ್ವಾಗತಿಸಲು ತಯಾರಿ ನಡೆಸಲಾಗುತ್ತಿದೆ. ಸ್ಥಳೀಯ ಕಲಾವಿದರು ವಿವಿಧ ವೇಷಭೂಷಣ ಮೂಲಕ ಸ್ವಾಗತ ಮಾಡಲಿದ್ದಾರೆ.

ಇದಕ್ಕೂ ಮುನ್ನ ಮಂಡ್ಯಕ್ಕೆ ಭೇಟಿ ನೀಡಲಿರುವ ಮೋದಿಗೆ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಕಬ್ಬು ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಕಬ್ಬು ಬೆಳೆಗಾರರು ಹಲವು ಬಾರಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ತಟ್ಟಿಸಿದ್ದರು. ಆದರೆ ಇದಕ್ಕೆಲ್ಲಾ ಸರ್ಕಾರ ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ ಪ್ರಧಾನಿ ಮೋದಿ ಆಗಮನದಂದು ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಲು ನಿರ್ಧಾರಿಸಿದೆ. ಮಾರ್ಚ್ 12ರಂದು ಬೃಹತ್ ಸಮಾವೇಶದಲ್ಲಿ ಭಾಗಿಯಾಗಲು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಗೆ ಆಗಮಿಸುತ್ತಿರುವ ಮೋದಿಗೆ ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟಿಸಲು ಕರ್ನಾಟಕ ರಾಜ್ಯ ರೈತ ಸಂಘ ನಿರ್ಧರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:17 am, Thu, 9 March 23

ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ