AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಜೂ.26ಕ್ಕೆ ಚಾಲನೆ, ಯಾವ ಕಡೆ ಸಂಚಾರ? ಇಲ್ಲಿದೆ ವಿವರ

Bengaluru-Dharwad Vande Bharat train : ಬಹು ನಿರೀಕ್ಷಿತ ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು ಓಡಾಟಕ್ಕೆ ಮುಹೂರ್ತ ನಿಗದಿಯಾಗಿದೆ.

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಜೂ.26ಕ್ಕೆ ಚಾಲನೆ, ಯಾವ ಕಡೆ ಸಂಚಾರ? ಇಲ್ಲಿದೆ ವಿವರ
ವಂದೇ ಭಾರತ್ ರೈಲು
ರಮೇಶ್ ಬಿ. ಜವಳಗೇರಾ
|

Updated on:Jun 15, 2023 | 2:17 PM

Share

ಬೆಂಗಳೂರು: ಕರ್ನಾಟಕದಲ್ಲಿ ಮತ್ತೊಂದು ವಂದೇ ಭಾರತ್‌ ರೈಲು(Vande Bharat train) ಓಡಾಡಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಹೌದು.. ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಜೂನ್ 26ರಂದು ಒಟ್ಟು 5 ಹೊಸ ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಬೆಂಗಳೂರು- ಹುಬ್ಬಳ್ಳಿ(Bengaluru-Dharwad) ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದರೊಂದಿಗೆ ಕರ್ನಾಟಕದಲ್ಲಿ ವಂದೇ ಭಾರತ್‌ ರೈಲಿನ ಸಂಖ್ಯೆ 2ಕ್ಕೆ ಏರಲಿದೆ. ಈ ಮೊದಲು ಮೈಸೂರು-ಚೆನ್ನೈ ವಂದೇ ಭಾರತ್‌ ಆರಂಭಿಸಲಾಗಿತ್ತು.

ಇದನ್ನೂ ಓದಿ: ಕರ್ನಾಟಕಕ್ಕೆ 2ನೆಯ ವಂದೇ ಭಾರತ್‌ ರೈಲು! ಜುಲೈಗೆ ಧಾರವಾಡ-ಬೆಂಗಳೂರು ವಂದೇ ಭಾರತ್‌ ಸಂಚಾರ ಆರಂಭ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಬೆಂಗಳೂರು- ಹುಬ್ಬಳ್ಳಿ, ಮುಂಬೈ- ಗೋವಾ, ಪಟನಾ- ರಾಂಚಿ, ಭೋಪಾಲ್‌- ಇಂದೋರ್‌ ಮತ್ತು ಭೋಪಾಲ್‌- ಜಬ್ಬಲ್‌ಪುರ ಮಾರ್ಗಗಳಲ್ಲಿ ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡಲಾಗುತ್ತದೆ. ಇದೇ ಮೊದಲ ಬಾರಿಗೆ ಒಂದೇ ದಿನ 5 ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡಲಾಗುತ್ತಿದೆ. 288 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ಬಳಿಕ ಮೊದಲ ಬಾರಿಗೆ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಲಾಗುತ್ತಿದ್ದು, ದುರಂತದ ಬಳಿಕ ಮುಂಬೈ ಮತ್ತು ಗೋವಾ ನಡುವಿನ ರೈಲು ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿತ್ತು. ಈಗ ಜೂನ್ 26ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಒಟ್ಟು 5 ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ದೇಶದಲ್ಲಿ ವಂದೇ ಭಾರತ್‌ ರೈಲುಗಳ ಸಂಖ್ಯೆ 24ಕ್ಕೆ ಏರಿಕೆಯಾಗಲಿದೆ.

ಬೆಂಗಳೂರು ಹುಬ್ಬಳ್ಳಿ ವಂದೇ ಭಾರತ್ ರೈಲು ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ಮಾತ್ರ ನಿಲ್ಲಲಿದೆ ಎಂದು ವರದಿಯಾಗಿದೆ. ಈಗಾಗಲೇ ಬೆಂಗಳೂರು-ಹುಬ್ಬಳ್ಳಿ ಮುಖ್ಯ ಮಾರ್ಗವನ್ನು ವಿದ್ಯುದ್ದೀಕರಿಸಲಾಗಿದೆ. ಇದು ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಆಗಿದೆ.

ಬೆಂಗಳೂರು-ಧಾರವಾಡ ರಾಜ್ಯದ ಜನನಿಬಿಡ ಮಾರ್ಗವಾಗಿದೆ. ಹೀಗಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೂಲಕ ಕಡಿಮೆ ಮಾಡಲು ರೈಲ್ವೆ ಇಲಾಖೆ ಮುಂದಾಗಿದೆ. ರೈಲಿನ ವೇಗ, ಟಿಕೆಟ್ ದರ ಮತ್ತು ರೈಲು ಸಮಯ ಇನ್ನೂ ಅಂತಿಮಗೊಂಡಿಲ್ಲ.

ಕರ್ನಾಟಕ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:06 pm, Thu, 15 June 23

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!