AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಜೂ.26ಕ್ಕೆ ಚಾಲನೆ, ಯಾವ ಕಡೆ ಸಂಚಾರ? ಇಲ್ಲಿದೆ ವಿವರ

Bengaluru-Dharwad Vande Bharat train : ಬಹು ನಿರೀಕ್ಷಿತ ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು ಓಡಾಟಕ್ಕೆ ಮುಹೂರ್ತ ನಿಗದಿಯಾಗಿದೆ.

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಜೂ.26ಕ್ಕೆ ಚಾಲನೆ, ಯಾವ ಕಡೆ ಸಂಚಾರ? ಇಲ್ಲಿದೆ ವಿವರ
ವಂದೇ ಭಾರತ್ ರೈಲು
ರಮೇಶ್ ಬಿ. ಜವಳಗೇರಾ
|

Updated on:Jun 15, 2023 | 2:17 PM

Share

ಬೆಂಗಳೂರು: ಕರ್ನಾಟಕದಲ್ಲಿ ಮತ್ತೊಂದು ವಂದೇ ಭಾರತ್‌ ರೈಲು(Vande Bharat train) ಓಡಾಡಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಹೌದು.. ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಜೂನ್ 26ರಂದು ಒಟ್ಟು 5 ಹೊಸ ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಬೆಂಗಳೂರು- ಹುಬ್ಬಳ್ಳಿ(Bengaluru-Dharwad) ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದರೊಂದಿಗೆ ಕರ್ನಾಟಕದಲ್ಲಿ ವಂದೇ ಭಾರತ್‌ ರೈಲಿನ ಸಂಖ್ಯೆ 2ಕ್ಕೆ ಏರಲಿದೆ. ಈ ಮೊದಲು ಮೈಸೂರು-ಚೆನ್ನೈ ವಂದೇ ಭಾರತ್‌ ಆರಂಭಿಸಲಾಗಿತ್ತು.

ಇದನ್ನೂ ಓದಿ: ಕರ್ನಾಟಕಕ್ಕೆ 2ನೆಯ ವಂದೇ ಭಾರತ್‌ ರೈಲು! ಜುಲೈಗೆ ಧಾರವಾಡ-ಬೆಂಗಳೂರು ವಂದೇ ಭಾರತ್‌ ಸಂಚಾರ ಆರಂಭ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಬೆಂಗಳೂರು- ಹುಬ್ಬಳ್ಳಿ, ಮುಂಬೈ- ಗೋವಾ, ಪಟನಾ- ರಾಂಚಿ, ಭೋಪಾಲ್‌- ಇಂದೋರ್‌ ಮತ್ತು ಭೋಪಾಲ್‌- ಜಬ್ಬಲ್‌ಪುರ ಮಾರ್ಗಗಳಲ್ಲಿ ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡಲಾಗುತ್ತದೆ. ಇದೇ ಮೊದಲ ಬಾರಿಗೆ ಒಂದೇ ದಿನ 5 ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡಲಾಗುತ್ತಿದೆ. 288 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ಬಳಿಕ ಮೊದಲ ಬಾರಿಗೆ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಲಾಗುತ್ತಿದ್ದು, ದುರಂತದ ಬಳಿಕ ಮುಂಬೈ ಮತ್ತು ಗೋವಾ ನಡುವಿನ ರೈಲು ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿತ್ತು. ಈಗ ಜೂನ್ 26ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಒಟ್ಟು 5 ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ದೇಶದಲ್ಲಿ ವಂದೇ ಭಾರತ್‌ ರೈಲುಗಳ ಸಂಖ್ಯೆ 24ಕ್ಕೆ ಏರಿಕೆಯಾಗಲಿದೆ.

ಬೆಂಗಳೂರು ಹುಬ್ಬಳ್ಳಿ ವಂದೇ ಭಾರತ್ ರೈಲು ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ಮಾತ್ರ ನಿಲ್ಲಲಿದೆ ಎಂದು ವರದಿಯಾಗಿದೆ. ಈಗಾಗಲೇ ಬೆಂಗಳೂರು-ಹುಬ್ಬಳ್ಳಿ ಮುಖ್ಯ ಮಾರ್ಗವನ್ನು ವಿದ್ಯುದ್ದೀಕರಿಸಲಾಗಿದೆ. ಇದು ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಆಗಿದೆ.

ಬೆಂಗಳೂರು-ಧಾರವಾಡ ರಾಜ್ಯದ ಜನನಿಬಿಡ ಮಾರ್ಗವಾಗಿದೆ. ಹೀಗಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೂಲಕ ಕಡಿಮೆ ಮಾಡಲು ರೈಲ್ವೆ ಇಲಾಖೆ ಮುಂದಾಗಿದೆ. ರೈಲಿನ ವೇಗ, ಟಿಕೆಟ್ ದರ ಮತ್ತು ರೈಲು ಸಮಯ ಇನ್ನೂ ಅಂತಿಮಗೊಂಡಿಲ್ಲ.

ಕರ್ನಾಟಕ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:06 pm, Thu, 15 June 23

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ