AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubli-Dharwad: ಯುಜನೋತ್ಸವಕ್ಕೆ ಮೋದಿ, ವೇದಿಕೆಯಲ್ಲಿ 21 ಗಣ್ಯರಿಗೆ ಅವಕಾಶ: ಜ.12ರಂದು ಹುಬ್ಬಳ್ಳಿ ಶಾಲೆಗಳಿಗೆ ರಜೆ

ಅವಳಿನಗರದಲ್ಲಿ ನಡೆಯುವ 26ನೇ ರಾಷ್ಟ್ರೀಯ ಯುಜನೋತ್ಸವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಏರಪೋರ್ಟ್​ನಿಂದ ರೈಲ್ವೆ ಮೈದಾನದವರೆಗೆ 8 ಕಿಲೋ ಮೀಟರ್ ಮಾರ್ಗವನ್ನು ವಾಹನದಲ್ಲಿ ತೆರಳಲಿದ್ದಾರೆ.

Hubli-Dharwad: ಯುಜನೋತ್ಸವಕ್ಕೆ ಮೋದಿ, ವೇದಿಕೆಯಲ್ಲಿ 21 ಗಣ್ಯರಿಗೆ ಅವಕಾಶ: ಜ.12ರಂದು ಹುಬ್ಬಳ್ಳಿ ಶಾಲೆಗಳಿಗೆ ರಜೆ
ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ
TV9 Web
| Updated By: ವಿವೇಕ ಬಿರಾದಾರ|

Updated on:Jan 11, 2023 | 7:13 PM

Share

ಹುಬ್ಬಳ್ಳಿ: ಅವಳಿನಗರ ಹುಬ್ಬಳ್ಳಿ-ಧಾರವಾಡದದಲ್ಲಿ (Hubli-Dharwad) ನಡೆಯುವ 26ನೇ ರಾಷ್ಟ್ರೀಯ ಯುಜನೋತ್ಸವನ್ನು (National Youth Fest) ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ (ಜ.12) ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಎಲ್ಲ ಸಿದ್ದತೆಗಳು ಆಗಿವೆ. ಏರಪೋರ್ಟ್​ನಿಂದ ರೈಲ್ವೆ ಮೈದಾನದವರೆಗೆ 8 ಕಿಲೋ ಮೀಟರ್ ಮಾರ್ಗವನ್ನು ವಾಹನದಲ್ಲಿ ತೆರಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ (Mahesh Tenginkai) ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೈದಾನದಲ್ಲಿ ರಿಜಿಸ್ಟರ್ ಮಾಡಿದ ಯವಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ 40 ರಿಂದ 45 ಸಾವಿರ ಯುವಕರು ರಿಜಿಸ್ಟ್ರೇಶನ್ ಮಾಡಿಸಿದ್ದಾರೆ. ಅವರು 8 ಕಿ.ಮೀ ಎರಡು ಕಡೆ ಜನರು ನಿಲ್ಲೋಕೆ ಅವಕಾಶ ಇದೆ. ಇದು ರೋಡ್ ಶೋ ಅಲ್ಲ, ತೆರೆದ ವಾಹನದಲ್ಲಿ ಮೋದಿ ಬರಲ್ಲ. ಅವರದೇ ಆದ ವಾಹನದಲ್ಲಿ ಬರುತ್ತಾರೆ. 2 ರಿಂದ 3 ಕಡೆ ಮೋದಿ ವಾಹನದಿಂದ ಇಳಿದು ಜನರನ್ನು ಮಾತಾಡಸಬಹುದು. ಇದು ಯಾವದೂ ಅಧಿಕೃತ ಅಲ್ಲ, ಮೋದಿ ಕಾರ್ಯಾಲಯದ ನಿರ್ಧಾರದ ಮೇಲೆ ಅಂತಿಮವಾಗುತ್ತದೆ ಎಂದರು.

ಇದನ್ನೂ ಓದಿ: ಪ್ರಧಾನಿ ಮೋದಿ ಆಗಮನದ ಹಿನ್ನೆಲೆ ಮಾರ್ಗ ಬದಲಾವಣೆ, ಇಲ್ಲಿದೆ ಕಂಪ್ಲಿಟ್ ರೂಟ್ ಡೀಟೇಲ್ಸ್

ಇದು ಬಿಜೆಪಿ ಕಾರ್ಯಕ್ರಮ ಅಲ್ಲ

ಈ ಕಾರ್ಯಕ್ರಮ ಬಿಜೆಪಿಯದ್ದಲ್ಲ, ವೇದಿಕೆ ಮೇಲೆ ಜಗದೀಶ್ ಶೆಟ್ಟರ್ ಇರುತ್ತಾರೆ. ಅಹ್ವಾನ ಪತ್ರಿಕೆಯಲ್ಲಿ ಜಗದೀಶ್ ಶೆಟ್ಟರ್ ಹೆಸರು ಬಿಟ್ಟಿರೋದು ಕೇಂದ್ರ ಸಚಿವರ ಗಮನಕ್ಕೆ ಬಂದಿದೆ. ಅದನ್ನು ಕೇಂದ್ರ ಸಚಿವರು ಸರಿ ಮಾಡುತ್ತಾರೆ. ಅದು ಜಿಲ್ಲಾಡಳಿತ ಮಾಡಿರೋ ಅಹ್ವಾನ ಪತ್ರಿಕೆ, ಸರಿ ಆಗತ್ತೆ. ಜಗದೀಶ್ ಶೆಟ್ಟರ್ ನಮ್ಮ ಸರ್ವೋಚ್ಚ ನಾಯಕರು. ಮೂಲೆಗುಂಪು ಮಾಡಲ್ಲ. ಕಾರ್ಯಕ್ರಮದಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು ಇರುತ್ತಾರೆ. ಇವಾಗ ಆಗಿರೋ ಯಡವಟ್ಟು ನಾವು ಯಾರ ಗಮನಕ್ಕೆ ತರಬೇಕು ತಂದಿದ್ದೇವೆ, ಸರಿ ಮಾಡದ್ದಾರೆ ಎಂದು ಹೇಳಿದ್ದಾರೆ.

ವೇದಿಕೆಯಲ್ಲಿ ಪ್ರಧಾನಿ ಮೋದಿ ಜತೆ 21 ಗಣ್ಯರಿಗೆ ಮಾತ್ರ ಅವಕಾಶ

ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಪ್ರಧಾನಿ ಮೋದಿ ಜತೆ 21 ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಅನುರಾಗ್ ಠಾಕೂರ್​​​, ನಿಶಿತ್ ಪ್ರಮಾಣಿಕ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಸಿ.ನಾರಾಯಣಗೌಡ, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ್, ಸಿ.ಎಂ.‌ನಿಂಬಣ್ಣವರ್, ಅಬ್ಬಯ್ಯ ಪ್ರಸಾದ್​​, ಅಮೃತ್ ದೇಸಾಯಿ, ಕುಸುಮಾ ಶಿವಳ್ಳಿ, MLC ಎಸ್.ವಿ.ಸಂಕನೂರ್, ಪ್ರದೀಪ್ ಶೆಟ್ಟರ್, ಹು-ಧಾ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ, ಜಂಗಲ್ ಲಾಡ್ಜಸ್ ರೆಸಾರ್ಟ್ಸ್ ಅಧ್ಯಕ್ಷ ರಾಜೇಶ್ ಕೋಟೆನ್ನವರ್​ಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ರಾಷ್ಟ್ರೀಯ ಯುವಜನೋತ್ಸದಲ್ಲಿ ಶಿಲಾರೋಹಣ, ವೈಮಾನಿಕ ತರಬೇತಿ, ಸಾಹಸ ಕ್ರೀಡೆ ಪ್ರದರ್ಶನ ; ಸಾರ್ವಜನಿಕರಿಗೂ ಅವಕಾಶ

ನಾಳೆ‌ 1 ದಿನ ಹುಬ್ಬಳ್ಳಿ ನಗರದ ಶಾಲೆಗಳಿಗೆ ರಜೆ

ರಾಷ್ಟ್ರೀಯ ಯುವಜನೋತ್ಸಕ್ಕೆ ಚಾಲನೆ ಹಿನ್ನೆಲೆ ನಾಳೆ‌ ಒಂದು ದಿನ ಹುಬ್ಬಳ್ಳಿ ನಗರದ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಪ್ರಧಾನಮಂತ್ರಿಗಳು ಆಗಮನದ ಹಿನ್ನೆಲೆ, ಸಾರಿಗೆ ಬಸ್​ಗಳ ಓಡಾಟಕ್ಕೆ ಅನಾನುಕೂಲವಾಗುತ್ತದೆ. ಇದರಿಂದ ಗ್ರಾಮೀಣ ಭಾಗದಿಂದ ಬದುವ ಶಾಲಾ‌ ವಿದ್ಯಾರ್ಥಿಗಳಿಗೆ ಅಡಚಣೆಯಾಗಲಿದೆ. ಈ ಕಾರಣಕ್ಕಾಗಿ ಒಂದು ದಿನದ ರಜೆ ಘೋಷಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:24 pm, Wed, 11 January 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ