AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಧಾರವಾಡ – ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಸಂಚಾರದ ಸಮಯ, ಟಿಕೆಟ್​ ದರ ಇಲ್ಲಿದೆ

ಇಂದು (ಜೂ.27) ಧಾರವಾಡ - ಬೆಂಗಳೂರು ವಂದೇಭಾರತ ಎಕ್ಸಪ್ರೆಸ್​​ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪಥಿ ರೈಲ್ವೆ ನಿಲ್ದಾಣದಿಂದ ವರ್ಚುವಲ್​​ ಮೂಲಕ ಹಸಿರು ನಿಶಾನೆ ತೋರಿಸಿದರು. ಈ ರೈಲು ಸಂಚರಿಸುವ ಸಮಯ ಮತ್ತು ಟಿಕೆಟ್​ ದರ ಇಲ್ಲಿದೆ.

Vande Bharat Express: ಧಾರವಾಡ - ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಸಂಚಾರದ ಸಮಯ, ಟಿಕೆಟ್​ ದರ ಇಲ್ಲಿದೆ
ಧಾರವಾಡ - ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲು
ವಿವೇಕ ಬಿರಾದಾರ
|

Updated on:Jun 27, 2023 | 12:06 PM

Share

ಧಾರವಾಡ: ಇಂದು (ಜೂ.27) ಧಾರವಾಡ – ಬೆಂಗಳೂರು (Dharwad-Bengaluru) ಸೇರಿದಂತೆ ದೇಶದ ಐದು ಧಾರವಾಡ – ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲುಗಳಿಗೆ (Vande Bharat Express) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪಥಿ ರೈಲು ನಿಲ್ದಾಣದಿಂದ ವರ್ಚುವಲ್​​ ಮೂಲಕ ಹಸಿರು ನಿಶಾನೆ ತೋರಿಸಿದರು. ಪ್ರಧಾನಿ ಮೋದಿ ಚಾಲನೆ ಬಳಿಕ ಧಾರವಾಡ ರೈಲ್ವೆ ನಿಲ್ದಾಣದಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್​​ ರೈಲು ಸದ್ಯಕ್ಕೆ 530 ಆಸನಗಳನ್ನು ಒಳಗೊಂಡ 8 ಬೋಗಿಗಳನ್ನು ಹೊಂದಿದೆ. ಈ ರೈಲು 489 ಕಿಮಿ ಮಾರ್ಗವನ್ನು ಗಂಟೆಗೆ 110 ಕಿಮಿ ವೇಗದಲ್ಲಿ ಚಲಿಸುತ್ತದೆ.

ಇದನ್ನೂ ಓದಿ: ರೈಲು 180 ಕಿಮೀ ವೇಗದಲ್ಲಿ ಚಲಿಸಿದರೂ ಗ್ಲಾಸಿನಲ್ಲಿದ್ದ ನೀರು ತುಳುಕುವುದಿಲ್ಲ: ಪ್ರಹ್ಲಾದ್​ ಜೋಶಿ

ಈ ರೈಲು ಧಾರವಾಡ-ಬೆಂಗಳೂರು ಮಧ್ಯೆ ವಾರದಲ್ಲಿ ಆರು ದಿನ ಸಂಚರಿಸಲಿದೆ. ಇಂದು ಮಾತ್ರ ಹಲವು ಕಡೆ ನಿಲುಗಡೆಯಾಗಲಿದ್ದು, ನಾಳೆಯಿಂದ (ಜೂ.28) ಅಧಿಕೃತ ಸಂಚಾರ ಆರಂಭವಾಗಲಿದೆ. ಆಗ ನಿಗದಿತ ನಿಲ್ದಾಣಗಳಲ್ಲಿ ಮಾತ್ರ ನಿಲ್ಲುತ್ತದೆ.

ಧಾರವಾಡ-ಬೆಂಗಳೂರು ವಂದೇ ಭಾರತ ಎಕ್ಸಪ್ರೆಸ್​ ರೈಲಿನ ಸಮಯ
ರೈಲು ನಿಲ್ದಾಣ ಸಮಯ (28/06/2023)
​ ಬೆಂಗಳೂರು ಬೆಳಿಗ್ಗೆ 05:45
ಯಶವಂತಪುರ ಬೆಳಿಗ್ಗೆ 05: 57
ದಾವಣಗೆರೆ ಬೆಳಿಗ್ಗೆ 09:17
ಹುಬ್ಬಳ್ಳಿ ಬೆಳಿಗ್ಗೆ 11:35
ಧಾರವಾಡ ಮಧ್ಯಾಹ್ನ 12:10
ಧಾರವಾಡ ಮಧ್ಯಾಹ್ನ 1:35
ಹುಬ್ಬಳ್ಳಿ ಮಧ್ಯಾಹ್ನ 1:40
ದಾವಣಗೆರೆ ಮಧ್ಯಾಹ್ನ 3:40
ಯಶವಂತಪುರ ಸಾಂಯಕಾಲ 7:15
 ಬೆಂಗಳೂರು ಸಾಯಂಕಾಲ 7: 45
ಧಾರವಾಡ-ಬೆಂಗಳೂರು ವಂದೇ ಭಾರತ ಎಕ್ಸಪ್ರೆಸ್​ ರೈಲಿನ ಟಿಕೆಟ್​ ದರ
ರೈಲು ಸಂಖ್ಯೆ 20661
ರೈಲು ನಿಲ್ದಾಣ ಎಸಿ ಚೇರ್​ (ರೂ) ಎಕ್ಸಿಕ್ಯೂಟಿವ್ ಕ್ಲಾಸ್ (ರೂ)
ಬೆಂಗಳೂರು-ಧಾರವಾಡ 1165 2010
ಬೆಂಗಳೂರು-ಹುಬ್ಬಳ್ಳಿ 1135 2180
ಬೆಂಗಳೂರು-ದಾವಣಗೆರೆ 915 1740
ದಾವಣಗೆರೆ-ಧಾರವಾಡ 535 1055
ರೈಲು ಸಂಖ್ಯೆ 20662
ರೈಲು ನಿಲ್ದಾಣ ಎಸಿ ಚೇರ್​ (ರೂ) ಎಕ್ಸಿಕ್ಯೂಟಿವ್ ಕ್ಲಾಸ್ (ರೂ)
ಧಾರವಾಡ-ಬೆಂಗಳೂರು 1330 2440
ಹುಬ್ಬಳ್ಳಿ-ಬೆಂಗಳೂರು 1300 2375
ದಾವಣಗೆರೆ-ಬೆಂಗಳೂರು 860 1690
ಧಾರವಾಡ-ದಾವಣಗೆರೆ 745 1282

ಧಾರವಾಡದಿಂದ ಬೆಂಗಳೂರಿಗೆ ಪ್ರಯಾಣ ದರವು ಊಟ ಮತ್ತು ತಿಂಡಿಗಳನ್ನು ಒಳಗೊಂಡಿರುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Tue, 27 June 23

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ