AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ-ಪುಣೆ ಮಾರ್ಗದ ವಂದೇ ಭಾರತ್ ರೈಲು ಸಂಚಾರಕ್ಕೆ ಸೆ. 16ರಂದು ಪ್ರಧಾನಿ ಮೋದಿ ಚಾಲನೆ

ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕದ 2ನೇ ವಂದೇ ಭಾರತ್ ಎಕ್ಸ್​ಪ್ರೆಸ್ ಹುಬ್ಬಳ್ಳಿ- ಪುಣೆ ಮಾರ್ಗದಲ್ಲಿ ಸಂಚರಿಸಲಿದೆ. ಈ ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ 16ರಂದು ಚಾಲನೆ ನೀಡಲಿದ್ದಾರೆ.

ಹುಬ್ಬಳ್ಳಿ-ಪುಣೆ ಮಾರ್ಗದ ವಂದೇ ಭಾರತ್ ರೈಲು ಸಂಚಾರಕ್ಕೆ ಸೆ. 16ರಂದು ಪ್ರಧಾನಿ ಮೋದಿ ಚಾಲನೆ
ವಂದೇ ಭಾರತ್ ರೈಲು
TV9 Web
| Edited By: |

Updated on: Sep 12, 2024 | 9:56 PM

Share

ಹುಬ್ಬಳ್ಳಿ: ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಸೆಪ್ಟೆಂಬರ್ 16ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಅಂದು ಅಹ್ಮದಾಬಾದ್ ನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.

ಸೆ.16ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಲಿದ್ದು, ಹುಬ್ಬಳ್ಳಿಯಿಂದ ಸೆ.18ರಿಂದ ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಈ ರೈಲು ಕೊಲ್ಹಾಪುರದ ಮೂಲಕ ಸಂಚರಿಸುವುದಿಲ್ಲ. ಇದು ಹುಬ್ಬಳ್ಳಿ- ಪುಣೆ ನೇರ ಮಾರ್ಗದಲ್ಲಿ ಸಂಚರಿಸಲಿದೆ.

ಹುಬ್ಬಳ್ಳಿಯಿಂದ ವಾರದಲ್ಲಿ 3 ದಿನ:

ವಾರದಲ್ಲಿ 3 ಬಾರಿ ಅಂದರೆ ಬುಧವಾರ, ಶುಕ್ರವಾರ, ಭಾನುವಾರ ಹುಬ್ಬಳ್ಳಿಯಿಂದ ಪುಣೆಗೆ ಹಾಗೂ ಗುರುವಾರ, ಶನಿವಾರ, ಸೋಮವಾರದಂದು ಪುಣೆಯಿಂದ ಹುಬ್ಬಳ್ಳಿಗೆ ವಂದೇ ಭಾರತ್ ಎಕ್ಸಪ್ರೆಸ್ ಸಂಚರಿಸಲಿದೆ.

ಇದನ್ನೂ ಓದಿ: ಕರ್ನಾಟಕಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ- ಪುಣೆ ನಡುವೆ 2ನೇ ವಂದೇ ಭಾರತ್ ರೈಲು

ಕೊಲ್ಲಾಪುರ ಮೂಲಕ ಸಂಚರಿಸಲ್ಲ:

ಇದು ಹುಬ್ಬಳ್ಳಿ-ಪುಣೆ ನಡುವೆ ನೇರವಾಗಿ ಸಂಚರಿಸಲಿದ್ದು ಕೊಲ್ಹಾಪುರ ಮೂಲಕ ಸಂಚರಿಸುವುದಿಲ್ಲ ಎಂದೂ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ಪ್ರಯಾಣಿಕರ ಸ್ಪಂದನೆ ಮತ್ತು ಜನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಈ ರೈಲು ಪ್ರತಿ ದಿನ ಸಂಚರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವೆ. ಇದಕ್ಕಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರದಿಂದ ಉತ್ತರ ಕರ್ನಾಟಕ ಭಾಗದ ವಾಣಿಜ್ಯೋದ್ಯಮಕ್ಕೆ, ಕೈಗಾರಿಕಾ ವಸಾಹತುಗಳಿಗೆ ಅನಕೂಲವಾಗಲಿದೆ. ಅಲ್ಲದೆ, ಮುಂಬೈ ಸಂಪರ್ಕಕ್ಕೆ ಈ ಮಾರ್ಗ ಪ್ರಮುಖವಾಗಿ ಉಪಯೋಗವಾಗಲಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ