AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ-ಪುಣೆ ಮಾರ್ಗದ ವಂದೇ ಭಾರತ್ ರೈಲು ಸಂಚಾರಕ್ಕೆ ಸೆ. 16ರಂದು ಪ್ರಧಾನಿ ಮೋದಿ ಚಾಲನೆ

ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕದ 2ನೇ ವಂದೇ ಭಾರತ್ ಎಕ್ಸ್​ಪ್ರೆಸ್ ಹುಬ್ಬಳ್ಳಿ- ಪುಣೆ ಮಾರ್ಗದಲ್ಲಿ ಸಂಚರಿಸಲಿದೆ. ಈ ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ 16ರಂದು ಚಾಲನೆ ನೀಡಲಿದ್ದಾರೆ.

ಹುಬ್ಬಳ್ಳಿ-ಪುಣೆ ಮಾರ್ಗದ ವಂದೇ ಭಾರತ್ ರೈಲು ಸಂಚಾರಕ್ಕೆ ಸೆ. 16ರಂದು ಪ್ರಧಾನಿ ಮೋದಿ ಚಾಲನೆ
ವಂದೇ ಭಾರತ್ ರೈಲು
TV9 Web
| Edited By: |

Updated on: Sep 12, 2024 | 9:56 PM

Share

ಹುಬ್ಬಳ್ಳಿ: ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಸೆಪ್ಟೆಂಬರ್ 16ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಅಂದು ಅಹ್ಮದಾಬಾದ್ ನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.

ಸೆ.16ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಲಿದ್ದು, ಹುಬ್ಬಳ್ಳಿಯಿಂದ ಸೆ.18ರಿಂದ ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಈ ರೈಲು ಕೊಲ್ಹಾಪುರದ ಮೂಲಕ ಸಂಚರಿಸುವುದಿಲ್ಲ. ಇದು ಹುಬ್ಬಳ್ಳಿ- ಪುಣೆ ನೇರ ಮಾರ್ಗದಲ್ಲಿ ಸಂಚರಿಸಲಿದೆ.

ಹುಬ್ಬಳ್ಳಿಯಿಂದ ವಾರದಲ್ಲಿ 3 ದಿನ:

ವಾರದಲ್ಲಿ 3 ಬಾರಿ ಅಂದರೆ ಬುಧವಾರ, ಶುಕ್ರವಾರ, ಭಾನುವಾರ ಹುಬ್ಬಳ್ಳಿಯಿಂದ ಪುಣೆಗೆ ಹಾಗೂ ಗುರುವಾರ, ಶನಿವಾರ, ಸೋಮವಾರದಂದು ಪುಣೆಯಿಂದ ಹುಬ್ಬಳ್ಳಿಗೆ ವಂದೇ ಭಾರತ್ ಎಕ್ಸಪ್ರೆಸ್ ಸಂಚರಿಸಲಿದೆ.

ಇದನ್ನೂ ಓದಿ: ಕರ್ನಾಟಕಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ- ಪುಣೆ ನಡುವೆ 2ನೇ ವಂದೇ ಭಾರತ್ ರೈಲು

ಕೊಲ್ಲಾಪುರ ಮೂಲಕ ಸಂಚರಿಸಲ್ಲ:

ಇದು ಹುಬ್ಬಳ್ಳಿ-ಪುಣೆ ನಡುವೆ ನೇರವಾಗಿ ಸಂಚರಿಸಲಿದ್ದು ಕೊಲ್ಹಾಪುರ ಮೂಲಕ ಸಂಚರಿಸುವುದಿಲ್ಲ ಎಂದೂ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ಪ್ರಯಾಣಿಕರ ಸ್ಪಂದನೆ ಮತ್ತು ಜನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಈ ರೈಲು ಪ್ರತಿ ದಿನ ಸಂಚರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವೆ. ಇದಕ್ಕಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರದಿಂದ ಉತ್ತರ ಕರ್ನಾಟಕ ಭಾಗದ ವಾಣಿಜ್ಯೋದ್ಯಮಕ್ಕೆ, ಕೈಗಾರಿಕಾ ವಸಾಹತುಗಳಿಗೆ ಅನಕೂಲವಾಗಲಿದೆ. ಅಲ್ಲದೆ, ಮುಂಬೈ ಸಂಪರ್ಕಕ್ಕೆ ಈ ಮಾರ್ಗ ಪ್ರಮುಖವಾಗಿ ಉಪಯೋಗವಾಗಲಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು