ಕತರ್ನಾಕ್ ವಂಚಕನ ಬಂಧನ: 20 ಲಕ್ಷ ಮೌಲ್ಯದ ಚಿನ್ನಾಭರಣ, 3.56 ಲಕ್ಷ ನಗದು ಜಪ್ತಿ

ನಿಮ್ಮ ಬಂಗಾರಕ್ಕೆ ಹಾಲ್ ಮಾರ್ಕ್ ಹಾಕಿ ಕೊಡುತ್ತೀನಿ ಹಾಗೆ ಕಲರ್ ಪಾಲೀಷ್ ಮಾಡುತ್ತೀನಿ ಎಂದು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಸುನಿಲ್ ಪತ್ತಾರ್ ಎಂಬ ವಂಚಕನನ್ನು ಪೊಲೀಸರು ವಶಪಡಸಿಕೊಂಡಿದ್ದಾರೆ.

ಕತರ್ನಾಕ್ ವಂಚಕನ ಬಂಧನ: 20 ಲಕ್ಷ ಮೌಲ್ಯದ ಚಿನ್ನಾಭರಣ, 3.56 ಲಕ್ಷ ನಗದು ಜಪ್ತಿ
ಆರೋಪಿ ಸುನಿಲ್ ಪತ್ತಾರ್
sandhya thejappa Edited By: ಸಾಧು ಶ್ರೀನಾಥ್​

Updated on: Dec 18, 2020 | 5:57 PM

ಹುಬ್ಬಳ್ಳಿ: ನಂಬಿಸಿ ವಂಚನೆ ಮಾಡುತ್ತಿದ್ದ ಖತರ್ನಾಕ್ ಆಸಾಮಿಯ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದ ಹಿನ್ನೆಲೆ ಪೊಲೀಸರು ಅವನನ್ನು ಬಂಧಿಸಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಿಮ್ಮ ಬಂಗಾರಕ್ಕೆ ಹಾಲ್ ಮಾರ್ಕ್ ಹಾಕಿ ಕೊಡುತ್ತೀನಿ ಜೊತೆಗೆ, ಕಲರ್ ಪಾಲೀಷ್ ಮಾಡುತ್ತೀನಿ ಎಂದು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಸುನಿಲ್ ಪತ್ತಾರ್ ಎಂಬ ವಂಚಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಬಂಧಿತನಿಂದ 20 ಲಕ್ಷ ಮೌಲ್ಯದ 330 ಗ್ರಾಂ ಚಿನ್ನಾಭರಣ ಹಾಗೂ 3.56 ಲಕ್ಷ ನಗದು ಜಪ್ತಿ ಮಾಡಿದ್ದಾರೆ.

20 ಲಕ್ಷ ಮೌಲ್ಯದ 330 ಗ್ರಾಂ ಚಿನ್ನಾಭರಣ ಹಾಗೂ 3.56 ಲಕ್ಷ ನಗದು

ಫ್ರೆಂಡ್ಸ್ ಜೊತೆ ಎಣ್ಣೆ ಪಾರ್ಟಿ ಮಾಡಿ ಮನೆಗೆ ಹೋಗುತ್ತಿದ್ದವ ನಡು ರಸ್ತೆಯಲ್ಲಿ ಭೀಕರವಾಗಿ ಕೊಲೆಯಾದ..

sandhya thejappa
Follow Us