AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಾರಾಯಿ ಮಾರಾಟ; ಮೂವರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ಅಕ್ರಮವಾಗಿ ಗ್ರಾಮದಲ್ಲಿ ಸಾರಾಯಿ ತಂದು ಮಾರಾಟ ಮಾಡುವುದಲ್ಲದೇ ಗ್ರಾಮದ ಮನೆಯೊಂದರಲ್ಲೆ ಸಾರಾಯಿ ಮಾರಲು ಸಿದ್ಧವಾಗಿದ್ದರು. ಆದರೆ ಈ ಸಾರಾಯಿಗಳ್ಳತನ ಲೆಕ್ಕಚಾರವನ್ನು ಗ್ರಾಮಸ್ಥರು ಬುಡಮೇಲು ಮಾಡಿದ್ದಾರೆ.

ಅಕ್ರಮ ಸಾರಾಯಿ ಮಾರಾಟ; ಮೂವರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
ಅಕ್ರಮ ಸಾರಾಯಿ ಮಾರಾಟ
TV9 Web
| Updated By: preethi shettigar|

Updated on:Aug 13, 2021 | 1:29 PM

Share

ಧಾರವಾಡ: ಕಳೆದ ಹಲವು ವರ್ಷಗಳಿಂದ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮ ಸಾರಾಯಿ ಮುಕ್ತ ಗ್ರಾಮವಾಗಿತ್ತು. ಖುದ್ದು ಅಲ್ಲಿನ ಮಹಿಳೆಯರು ಗ್ರಾಮಸ್ಥರು ಸೇರಿ ಗ್ರಾಮದಲ್ಲಿ ಸಾರಾಯಿ ಮಾರಾಟ ಮಾಡುವುದನ್ನು ಬಂದ್ ಮಾಡಿದ್ದರು. ಆದರೂ ಕದ್ದು ಮುಚ್ಚಿ ಸಾರಾಯಿ ಮಾರುವುದು ಅಲ್ಲಲ್ಲಿ ಕಂಡುಬರುತ್ತಿತ್ತು. ಇದನ್ನು ಮನಗಂಡ ಗ್ರಾಮಸ್ಥರು ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಗ್ರಾಮದಲ್ಲಿ ಸಾರಾಯಿ ನಿಷೇಧವಿದ್ದರೂ ಕಲಘಟಗಿ ಪಟ್ಟಣದ ಮೂವರ ತಂಡ ತಡರಾತ್ರಿ ಗ್ರಾಮಕ್ಕೆ ಬಂದು ಸಾರಾಯಿ ಮಾರಾಟ ಮಾಡಿ ಹೋಗುತ್ತಿತ್ತು. ಕಳೆದ ಹಲವು ದಿನಗಳಿಂದ ಈ ರೀತಿಯ ಘಟನೆ ನಡೆಯುತ್ತಿದೆ ಎಂದು ಗ್ರಾಮಸ್ಥರಿಗೆ ಗೊತ್ತಾಗಿತ್ತು. ಆದರೆ ಪಟ್ಟಣದ ಈ ಸಾರಾಯಿಗಳ್ಳರು ಗ್ರಾಮಕ್ಕೆ ಯಾವಗ ಬರುತ್ತಾರೆ ಎನ್ನೋದು ಮಾತ್ರ ತಿಳಿದಿರಲಿಲ್ಲ. ಹೀಗಾಗೇ ಉಪಾಯ ಮಾಡಿದ್ದ ಗ್ರಾಮಸ್ಥರು. ಊರ ಕೆಲ ಜನರನ್ನು ಕಾವಲು ಕಾಯಿವಂತೆ ಹೇಳಿದ್ದರು. ಅದೇ ಪ್ರಕಾರ ತಡರಾತ್ರಿ ಅಪರಿಚಿತ ಕಾರ್​ ಒಂದು ಬರುವುದನ್ನು ಗಮನಿಸಿದ ಗ್ರಾಮಸ್ಥರು ಕೂಡಲೆ ಅವರನ್ನು ಹಿಡಿದಿದ್ದಾರೆ.

ಆರೋಪಿಗಳ ಕಾರ್ ಡೋರ್ ತೆಗೆದು ನೋಡಿದರೆ ಲಕ್ಷಾಂತರ ರೂಪಾಯಿ ಮೌಲ್ಯದ ಸಾರಾಯಿ ಪತ್ತೆಯಾಗಿದೆ. ಸದ್ಯ ಮೂವರು ಹಾಗೂ ಒಂದು ಕಾರ್ ಅನ್ನು ಕಲಘಟಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಾರಾಯಿ ಮಾರಲು ಬಂದ ಮೂವರು ಕಲಘಟಗಿ ಪಟ್ಟಣದವರೆಂದು ಹೇಳಲಾಗುತ್ತಿದ್ದು, ಸದ್ಯ ಪೊಲೀಸರು ತನೀಖೆ ನಡೆಸುತ್ತಿದ್ದಾರೆ.

ಅಕ್ರಮವಾಗಿ ಗ್ರಾಮದಲ್ಲಿ ಸಾರಾಯಿ ತಂದು ಮಾರಾಟ ಮಾಡುವುದಲ್ಲದೇ ಗ್ರಾಮದ ಮನೆಯೊಂದರಲ್ಲೆ ಸಾರಾಯಿ ಮಾರಲು ಸಿದ್ಧವಾಗಿದ್ದರು. ಆದರೆ ಈ ಸಾರಾಯಿಗಳ್ಳತನ ಲೆಕ್ಕಚಾರವನ್ನು ಗ್ರಾಮಸ್ಥರು ಬುಡಮೇಲು ಮಾಡಿದ್ದಾರೆ.

ಇದನ್ನೂ ಓದಿ: ಗುಟ್ಕಾ ಜಗಿಯಂಗಿಲ್ಲ, ಸಾರಾಯಿ ಸಿಗಲ್ಲ, ಎಣ್ಣೆ ಮತ್ತಲ್ಲಿ ಊರಿಗೆ ಬಂದ್ರೆ ಬೀಳುತ್ತೆ ದಂಡ

ಬೆಂಗಳೂರಿನಲ್ಲಿ ಅಕ್ರಮ ಮದ್ಯ ಮಾರಾಟ; ಆರೋಪಿ ಬಂಧನ

Published On - 1:27 pm, Fri, 13 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ