AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಾರಾಯಿ ಮಾರಾಟ; ಮೂವರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ಅಕ್ರಮವಾಗಿ ಗ್ರಾಮದಲ್ಲಿ ಸಾರಾಯಿ ತಂದು ಮಾರಾಟ ಮಾಡುವುದಲ್ಲದೇ ಗ್ರಾಮದ ಮನೆಯೊಂದರಲ್ಲೆ ಸಾರಾಯಿ ಮಾರಲು ಸಿದ್ಧವಾಗಿದ್ದರು. ಆದರೆ ಈ ಸಾರಾಯಿಗಳ್ಳತನ ಲೆಕ್ಕಚಾರವನ್ನು ಗ್ರಾಮಸ್ಥರು ಬುಡಮೇಲು ಮಾಡಿದ್ದಾರೆ.

ಅಕ್ರಮ ಸಾರಾಯಿ ಮಾರಾಟ; ಮೂವರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
ಅಕ್ರಮ ಸಾರಾಯಿ ಮಾರಾಟ
TV9 Web
| Edited By: |

Updated on:Aug 13, 2021 | 1:29 PM

Share

ಧಾರವಾಡ: ಕಳೆದ ಹಲವು ವರ್ಷಗಳಿಂದ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮ ಸಾರಾಯಿ ಮುಕ್ತ ಗ್ರಾಮವಾಗಿತ್ತು. ಖುದ್ದು ಅಲ್ಲಿನ ಮಹಿಳೆಯರು ಗ್ರಾಮಸ್ಥರು ಸೇರಿ ಗ್ರಾಮದಲ್ಲಿ ಸಾರಾಯಿ ಮಾರಾಟ ಮಾಡುವುದನ್ನು ಬಂದ್ ಮಾಡಿದ್ದರು. ಆದರೂ ಕದ್ದು ಮುಚ್ಚಿ ಸಾರಾಯಿ ಮಾರುವುದು ಅಲ್ಲಲ್ಲಿ ಕಂಡುಬರುತ್ತಿತ್ತು. ಇದನ್ನು ಮನಗಂಡ ಗ್ರಾಮಸ್ಥರು ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಗ್ರಾಮದಲ್ಲಿ ಸಾರಾಯಿ ನಿಷೇಧವಿದ್ದರೂ ಕಲಘಟಗಿ ಪಟ್ಟಣದ ಮೂವರ ತಂಡ ತಡರಾತ್ರಿ ಗ್ರಾಮಕ್ಕೆ ಬಂದು ಸಾರಾಯಿ ಮಾರಾಟ ಮಾಡಿ ಹೋಗುತ್ತಿತ್ತು. ಕಳೆದ ಹಲವು ದಿನಗಳಿಂದ ಈ ರೀತಿಯ ಘಟನೆ ನಡೆಯುತ್ತಿದೆ ಎಂದು ಗ್ರಾಮಸ್ಥರಿಗೆ ಗೊತ್ತಾಗಿತ್ತು. ಆದರೆ ಪಟ್ಟಣದ ಈ ಸಾರಾಯಿಗಳ್ಳರು ಗ್ರಾಮಕ್ಕೆ ಯಾವಗ ಬರುತ್ತಾರೆ ಎನ್ನೋದು ಮಾತ್ರ ತಿಳಿದಿರಲಿಲ್ಲ. ಹೀಗಾಗೇ ಉಪಾಯ ಮಾಡಿದ್ದ ಗ್ರಾಮಸ್ಥರು. ಊರ ಕೆಲ ಜನರನ್ನು ಕಾವಲು ಕಾಯಿವಂತೆ ಹೇಳಿದ್ದರು. ಅದೇ ಪ್ರಕಾರ ತಡರಾತ್ರಿ ಅಪರಿಚಿತ ಕಾರ್​ ಒಂದು ಬರುವುದನ್ನು ಗಮನಿಸಿದ ಗ್ರಾಮಸ್ಥರು ಕೂಡಲೆ ಅವರನ್ನು ಹಿಡಿದಿದ್ದಾರೆ.

ಆರೋಪಿಗಳ ಕಾರ್ ಡೋರ್ ತೆಗೆದು ನೋಡಿದರೆ ಲಕ್ಷಾಂತರ ರೂಪಾಯಿ ಮೌಲ್ಯದ ಸಾರಾಯಿ ಪತ್ತೆಯಾಗಿದೆ. ಸದ್ಯ ಮೂವರು ಹಾಗೂ ಒಂದು ಕಾರ್ ಅನ್ನು ಕಲಘಟಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಾರಾಯಿ ಮಾರಲು ಬಂದ ಮೂವರು ಕಲಘಟಗಿ ಪಟ್ಟಣದವರೆಂದು ಹೇಳಲಾಗುತ್ತಿದ್ದು, ಸದ್ಯ ಪೊಲೀಸರು ತನೀಖೆ ನಡೆಸುತ್ತಿದ್ದಾರೆ.

ಅಕ್ರಮವಾಗಿ ಗ್ರಾಮದಲ್ಲಿ ಸಾರಾಯಿ ತಂದು ಮಾರಾಟ ಮಾಡುವುದಲ್ಲದೇ ಗ್ರಾಮದ ಮನೆಯೊಂದರಲ್ಲೆ ಸಾರಾಯಿ ಮಾರಲು ಸಿದ್ಧವಾಗಿದ್ದರು. ಆದರೆ ಈ ಸಾರಾಯಿಗಳ್ಳತನ ಲೆಕ್ಕಚಾರವನ್ನು ಗ್ರಾಮಸ್ಥರು ಬುಡಮೇಲು ಮಾಡಿದ್ದಾರೆ.

ಇದನ್ನೂ ಓದಿ: ಗುಟ್ಕಾ ಜಗಿಯಂಗಿಲ್ಲ, ಸಾರಾಯಿ ಸಿಗಲ್ಲ, ಎಣ್ಣೆ ಮತ್ತಲ್ಲಿ ಊರಿಗೆ ಬಂದ್ರೆ ಬೀಳುತ್ತೆ ದಂಡ

ಬೆಂಗಳೂರಿನಲ್ಲಿ ಅಕ್ರಮ ಮದ್ಯ ಮಾರಾಟ; ಆರೋಪಿ ಬಂಧನ

Published On - 1:27 pm, Fri, 13 August 21

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?