AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಧ್ವನಿವರ್ಧಕ ಬಳಕೆ ಕುರಿತು ವಿವಾದ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡದಲ್ಲಿ 268 ಧಾರ್ಮಿಕ ಕೇಂದ್ರಗಳಿಗೆ ನೋಟಿಸ್

ರಾಜ್ಯದಲ್ಲಿ ಧ್ವನಿವರ್ಧಕ ಬಳಕೆ ಕುರಿತು ವಿವಾದ ಬೆನ್ನಲ್ಲೇ ಪೊಲೀಸರು ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ. ನಿಗದಿಪಡಿಸಿದ ಡೆಸಿಬಲ್ಕ್ಕಿಂತ ಹೆಚ್ಚಿನ ಶಬ್ದ ಬರದಂತೆ ಸೂಚನೆ ನೀಡಿದ್ದಾರೆ. ಧ್ವನಿವರ್ಧಕದ ಮೂಲಕ ಶಬ್ದ ಹೊರಸೂಸುವ ಧಾರ್ಮಿಕ ಮಂದಿರಗಳಿಗೆ ನೋಟಿಸ್ ನೀಡಲಾಗಿದೆ.

ರಾಜ್ಯದಲ್ಲಿ ಧ್ವನಿವರ್ಧಕ ಬಳಕೆ ಕುರಿತು ವಿವಾದ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡದಲ್ಲಿ 268 ಧಾರ್ಮಿಕ ಕೇಂದ್ರಗಳಿಗೆ ನೋಟಿಸ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 08, 2022 | 1:13 PM

Share

ಹುಬ್ಬಳ್ಳಿ: ರಾಜ್ಯದಲ್ಲಿ ಮಸೀದಿಗಳ ಮೇಲೆ ಹಾಕಿರಲಾಗಿರುವ ಮೈಕ್‌ಗಳನ್ನ ತೆರವು ಮಾಡುವ ಕಾರ್ಯ ಶುರುವಾಗಿದೆ. ರಾಜ್ಯದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ವಿಚಾರಕ್ಕೆ ಸಂಬಂಧಿಸಿ ಹುಬ್ಬಳ್ಳಿ-ಧಾರವಾಡದ ಧಾರ್ಮಿಕ ಮಂದಿರಗಳಿಗೆ ನೋಟಿಸ್ ನೀಡಲಾಗಿದೆ. ಪೊಲೀಸ್ ಕಮಿಷನರ್ 268 ಕೇಂದ್ರಗಳಿಗೆ ನೋಟಿಸ್ ನೀಡಿದ್ದಾರೆ.

ರಾಜ್ಯದಲ್ಲಿ ಧ್ವನಿವರ್ಧಕ ಬಳಕೆ ಕುರಿತು ವಿವಾದ ಬೆನ್ನಲ್ಲೇ ಪೊಲೀಸರು ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ. ನಿಗದಿಪಡಿಸಿದ ಡೆಸಿಬಲ್ಕ್ಕಿಂತ ಹೆಚ್ಚಿನ ಶಬ್ದ ಬರದಂತೆ ಸೂಚನೆ ನೀಡಿದ್ದಾರೆ. ಧ್ವನಿವರ್ಧಕದ ಮೂಲಕ ಶಬ್ದ ಹೊರಸೂಸುವ ಧಾರ್ಮಿಕ ಮಂದಿರಗಳಿಗೆ ನೋಟಿಸ್ ನೀಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರದ ಮಂದಿರ, ಮಸೀದಿ ಸೇರಿ 268 ಕೇಂದ್ರಗಳಿಗೆ ಪೊಲೀಸ್ ಕಮಿಷನರ್ ನೋಟಿಸ್ ನೀಡಿದ್ದು ಈ ಪೈಕಿ 150 ಮಸೀದಿಗಳಿವೆ. ನೋಟಿಸ್ನಲ್ಲಿ ನಿಗದಿತ ಡೆಸಿಬಲ್‌ಗಿಂತ ಹೆಚ್ಚಿನ ಶಬ್ದ ಮಾಡದಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಧ್ವನಿವರ್ಧಕ ಬಳಕೆ ಕುರಿತು ವಿವಾದ ಉಂಟಾಗಿರುವ ಬೆನ್ನಲ್ಲೆ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಇಂತಹದೊಂದು ಕ್ರಮಕ್ಕೆ ಮುಂದಾಗಿದೆ.

ಆಯಾ ಪೊಲೀಸ್ ಠಾಣಾಧಿಕಾರಿಗಳಿಗೆ ಅವರ ವ್ಯಾಪ್ತಿಯಲ್ಲಿನ ಮಸೀದಿ, ಮಂದಿರ, ಚರ್ಚ್ ಸೇರಿ ಧ್ವನಿವರ್ಧಕ ಬಳಸುವ ಇತರೆ ಕೇಂದ್ರಗಳಿಗೆ ನೋಟಿಸ್ ನೀಡಲು ಕಮೀಷನರ್ ಆದೇಶ ನೀಡಿದ್ದಾರೆ. ಆದೇಶದ ಪ್ರಕಾರ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕಗಳನ್ನು ಬಳಸಬಾರದು. ಧ್ವನಿವರ್ಧಕವನ್ನು ಆಜಾನ್, ಸಾವು, ಸಮಾಧಿಯ ಸಮಯ ಮತ್ತು ಚಂದ್ರನನ್ನು ನೋಡುವುದು ಸೇರಿದಂತೆ ಇನ್ನಿತರ ಪ್ರಮುಖ ಘೋಷಣೆಗಳಿಗೆ ಮಾತ್ರ ಬಳಸಬೇಕೆಂದು ಆದೇಶ ನೀಡಿದ್ದಾರೆ.

ನೊಟೀಸ್‌ನಲ್ಲಿ ಏನಿದೆ? 2010ರ ಶಬ್ದ ಮಾಲಿನ್ಯ ಕಾನೂನಿನ ಪ್ರಕಾರ ನಿಗದಿಪಡಿಸಿದ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು ಉಪಯೋಗಿಸಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಶಬ್ದ ಮಾಲಿನ್ಯ ಕಾನೂನಿನಡಿ ಜವಾಬ್ದಾರರಾಗಿರುತ್ತೀರಿ ಎಂದು ನೊಟೀಸ್ ನೀಡಲಾಗಿದೆ.

ಇದನ್ನೂ ಓದಿ: ಕಾಡಿನಲ್ಲಿ ಬಳ್ಳಿಗೆ ಸಿಲುಕಿದ್ದ ಕರಡಿಯನ್ನು ರಕ್ಷಿಸಿದ್ದು ಹೇಗೆ? ನೋಡಿ</span

ಕೋಡಿ ಮಠದ ಸ್ವಾಮೀಜಿ ಮಾತಿಗೆ ನಿಖರತೆ, ಸ್ಪಷ್ಟತೆ ಇಲ್ಲ : ಪ್ರತಾಪ್ ಸಿಂಹ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?