AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಮನೆಯೊಂದರಲ್ಲಿ ಮಹಿಳೆಯೊಂದಿಗೆ ಪೊಲೀಸ್​ ಕಾನ್ಸ್​ಟೇಬಲ್​ ನೇಣಿಗೆ ಶರಣು

ಪೊಲೀಸ್ ಕಾನ್ಸ್​​ಟೇಬಲ್ ಒಬ್ಬರು ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಹಿಳೆ ಮತ್ತು ಪೊಲೀಸ್ ಪೇದೆ ಒಟ್ಟಿಗೆ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿ: ಮನೆಯೊಂದರಲ್ಲಿ ಮಹಿಳೆಯೊಂದಿಗೆ ಪೊಲೀಸ್​ ಕಾನ್ಸ್​ಟೇಬಲ್​ ನೇಣಿಗೆ ಶರಣು
ಶಿವಕುಮಾರ್ ಪತ್ತಾರ್
| Updated By: ರಮೇಶ್ ಬಿ. ಜವಳಗೇರಾ|

Updated on:May 21, 2024 | 8:11 PM

Share

ಹುಬ್ಬಳ್ಳಿ, (ಮೇ 21): ಪೊಲೀಸ್ ಕಾನ್ಸ್​​ಟೇಬಲ್ (Police Constable) ಒಬ್ಬರು ಮಹಿಳೆಯೊಂದಿಗೆ(Woman)  ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ(Hubballi) ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿದೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್​​ಟೇಬಲ್ ಆಗಿದ್ದ ಮಹೇಶ ಹೆಸರೂರು, ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ವಿಜಯಲಕ್ಷ್ಮೀ ವಾಲಿ(30)  ಎನ್ನುವ ಮಹಿಳೆಯೊಂದಿಗೆ ನೇಣಿಗೆ ಶರಣಾಗಿದ್ದಾರೆ.

ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದಾಗ ನೋಡಿದಾಗ ಮಹಿಳೆ ಮತ್ತು ಕಾನ್ಸ್​ಟೇಬಲ್​ ಮಹೇಶ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಎರಡು ಮೂರು ದಿನಗಳ ಹಿಂದೆ ಗಾಮನಗಟ್ಟಿಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ. ಮಹೇಶ ಜೊತೆ ಆತ್ಮಹತ್ಯೆ ಮಾಡಿಕೊಂಡ  ಮಹಿಳೆ ಹೆಸರು ವಿಜಯಲಕ್ಷ್ಮೀ ವಾಲಿ ಎಂದು ತಿಳಿದುಬಂದಿದೆ.

ಮಹೇಶ್​ಗೆ ಈಗಾಗಲೇ ಮದುವೆಯಾಗಿದ್ದರೂ ಬೇರೆ ವಿಜಯಲಕ್ಷ್ಮೀ ಜತೆ ​ ಅನೈತಿಕ ಸಂಬಂಧ ಹೊಂದಿದ್ದ. 15 ದಿನದ ಹಿಂದೆ ವಿಜಯಲಕ್ಷ್ಮೀ ಜತೆ ಮನೆ ಮಾಡಿಕೊಂಡಿದ್ದ. ಆದರೆ, ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.ಆದ್ರೆ ಇವರಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ಸಹ ತಿಳಿದು ಬಂದಿಲ್ಲ.ಇವರಿಬ್ಬರ ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ಪೊಲೀಸರು ಮಾಹಿತಿ ಕಲೆಹಾಕಿತ್ತಿದ್ದಾರೆ.

ಇದನ್ನೂ ಓದಿ: ಸವದಿ ಸಹಭಾಗಿತ್ವದ ಕಾರ್ಖಾನೆಯಲ್ಲಿ ಸ್ಫೋಟ: ಮಹಿಳೆ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ

ಬೆಳಗಾವಿಯಲ್ಲಿ ರೈತ ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ರೈತನೋರ್ವ (Farmer) ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭೀಕರ ಬರಕ್ಕೆ ಬೆಳೆ ಕೈಕೊಟ್ಟಿದ್ದು ಜೀವನ ನಡೆಸಲು ಸಾಲ ಮಾಡಿದ್ದರು. ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ಸಾಲ ನೀಡಿದ್ದ ಮಹಿಳೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನ ಮಾಡಿದ್ದಾಳೆ. ಪತ್ನಿ-ಪುತ್ರನನ್ನು ಗೃಹಬಂಧನದಲ್ಲಿ ಇಟ್ಟಿದ್ದಕ್ಕೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಸಾಲದ ಹೊರೆಗೆ ರೈತ ಮೃತಪಟ್ಟಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:06 pm, Tue, 21 May 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ