AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆಯಲ್ಲೂ ರಾಜಕೀಯ; ಕಾಂಗ್ರೆಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕಣಕ್ಕೆ

ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸೇರಿ ಲೋಕಸಭಾ ಚುನಾವಣೆ ಮಾಡಿದ್ದು ಎಲ್ಲರಿಗೂ ಗೊತ್ತಿರೋ ವಿಚಾರ. ಹೀಗಾಗಿ ಈ ಪಕ್ಷಗಳ ಮಧ್ಯದಲ್ಲಿ ಒಪ್ಪಂದ ಇದ್ದೇ‌ ಇರುತ್ತೆ. ಆದರೆ, ಇದೀಗ ಜುಲೈ. 21 ಕ್ಕೆ ನಡೆಯಲಿರುವ ಧಾರವಾಡ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ‌ ಚುನಾವಣೆಯಲ್ಲಿ ಇದಕ್ಕಿಂತಲೂ ವಿಚಿತ್ರ ರೀತಿಯ ಮೈತ್ರಿ ಕಂಡು ಬಂದಿದೆ. ಈ‌ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರು ಒಂದಾಗಿ ಜೆಡಿಎಸ್ ಮುಖಂಡನ ವಿರುದ್ಧ ಅಭ್ಯರ್ಥಿಯನ್ನ ಕಣದಲ್ಲಿ ಇಳಿಸಿದ್ದಾರೆ. ಹೀಗಾಗಿ ಈ ಬಾರಿಯ ಮಹಾಸಭಾದ ಚುನಾವಣೆ ಸಾಕಷ್ಟು ರಂಗೇರಿದೆ.

ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆಯಲ್ಲೂ ರಾಜಕೀಯ; ಕಾಂಗ್ರೆಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕಣಕ್ಕೆ
ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆಯಲ್ಲೂ ರಾಜಕೀಯ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jul 19, 2024 | 10:14 PM

Share

ಧಾರವಾಡ, ಜು.19: ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಮಾಡಿದ್ದವು. ಆದರೆ, ಧಾರವಾಡ(Dharwad)ದ ವೀರಶೈವ ಲಿಂಗಾಯತ ಮಹಾಸಭಾ(Veerashaiva Lingayat Mahasabha)ದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ‌ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಶಾಸಕರು ಒಂದಾಗಿ, ಈಗ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದಾರೆ. ಜೆಡಿಎಸ್ ಪಕ್ಷದ ಧಾರವಾಡ‌ ಜಿಲ್ಲಾಧ್ಯಕ್ಷ, ಈ ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರ ಅಭ್ಯರ್ಥಿ ವಿರುದ್ಧ ಕಣದಲ್ಲಿದ್ದಾರೆ.

ಇದೇ ಜುಲೈ 21 ರಂದು ಧಾರವಾಡ ವೀರಶೈವ ಲಿಂಗಾಯತ ಮಹಾಸಭಾದ  ಅಧ್ಯಕ್ಷ ಸ್ಥಾನ, 20 ಸಾಮಾನ್ಯ ಸ್ಥಾನ ಹಾಗೂ 10 ಮಹಿಳಾ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ‌ಹೀಗಾಗಿ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಗುರುರಾಜ್ ಹುಣಶಿಮರದ ಅಧ್ಯಕ್ಷ ಸ್ಥಾನಕ್ಕೆ ಕಣದಲ್ಲಿ ಇಳಿದಿದ್ದಾರೆ. ಮತ್ತೊಂದು ಕಡೆ ಧಾರವಾಡ ಶಾಸಕ ವಿನಯ ಕುಲಕರ್ಣಿ ಹಾಗೂ ಅರವಿಂದ ಬೆಲ್ಲದ ಬೆಂಬಲಿತ ಅಭ್ಯರ್ಥಿ ಪ್ರದೀಪಗೌಡ ಪಾಟೀಲ್ ಕಣದಲ್ಲಿ ಇಳಿದಿದ್ದಾರೆ. ಹೀಗಾಗಿ ಈ ಚುನಾವಣೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ.

ಇದನ್ನೂ ಓದಿ:4 ವರ್ಷದಿಂದ ಉದ್ಘಾಟನೆ ಭಾಗ್ಯ ಸಿಗದೇ ಅನಾಥವಾದ ಬಸವಣ್ಣನ ಪ್ರತಿಮೆ; ವೀರಶೈವ ಲಿಂಗಾಯತ ಮಹಾಸಭಾ ಅಸಮಾಧಾನ

ಈ ಸಂಘಕ್ಕೆ ಒಟ್ಟು 2800 ಸದಸ್ಯರಿದ್ದಾರೆ. ಇವರಲ್ಲಿ ಇಬ್ಬರು ಮಾಜಿ ಸಿಎಂಗಳು, ನಾಲ್ಕು ಶಾಸಕರು ಹಾಗೂ 10 ಕ್ಕೂ ಹೆಚ್ಚು ಮಾಜಿ ಶಾಸಕರಿದ್ದಾರೆ ಎನ್ನೋದು ವಿಶೇಷ. ಹೀಗಾಗಿ ಈ‌ ಬಾರಿ ಈ ಚುನಾವಣೆ ತುರುಸು ಪಡೆದುಕೊಂಡಿದೆ. ಕಳೆದ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದ ಗುರುರಾಜ ಹುಣಸಿಮರದ್, ಈ ಬಾರಿ ಮತ್ತೆ ಆಯ್ಕೆ ಬಯಸಿ ಕಣ್ಣಕ್ಕಿಳಿದಿದ್ದಾರೆ. ತಮ್ಮ ವಿರುದ್ಧ ಕೈ ಮತ್ತು ಕಮಲ ಪಾಳಯದ ಶಾಸಕರು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರೂ, ಇದು ರಾಜಕೀಯವೇ ಅಲ್ಲ ಎಂದು ಗುರುರಾಜ್ ಹುಣಸಿಮರದ್ ಎನ್ನುತ್ತಿದ್ದಾರೆ.

ಇನ್ನು ಈ ಲಿಂಗಾಯತ ಮಹಾಸಭಾದ ಚುನಾವಣೆ ಕಳೆದ 2014 ರಲ್ಲಿ ನಡೆದಿತ್ತು. ಅದಾದ ನಂತರ ಕಳೆದ 2019 ರಲ್ಲಿ ಅವಿರೋಧ ಆಯ್ಕೆ ಮಾಡುವ ಮೂಲಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ನಡೆದಿತ್ತು. ಆಗ ಗುರುರಾಜ್ ಹುಣಶಿಮರದ್​ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಎರಡೂವರೆ ವರ್ಷಗಳ ಬಳಿಕ ಅಧ್ಯಕ್ಷ ಸ್ಥಾನವನ್ನು ಬೇರೆಯವರಿಗೆ ಬಿಟ್ಟುಕೊಡಬೇಕೆಂಬ ನಿರ್ಧಾರವಾಗಿತ್ತು. ಆದರೆ, ಗುರುರಾಜ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಲೇ ಇಲ್ಲ. ಹೀಗಾಗಿ ಈ ಬಾರಿ ಚುನಾವಣೆ ಅನಿವಾರ್ಯವಾಗಿದೆ ಎಂದು ಅವರ ಎದುರಾಳಿ ಪ್ರದೀಪ ಗೌಡ ಪಾಟೀಲ್ ಅವರ ಅಭಿಪ್ರಾಯವಾಗಿದೆ.

ಇಷ್ಟು ದಿನ ಹೊಂದಾಣಿಕೆ ಮೇಲೆಯೇ ನಡೆದುಕೊಂಡು ಬಂದಿದ್ದ ಧಾರವಾಡ ಲಿಂಗಾಯತ ಮಹಾಸಭಾದ ಅಧ್ಯಕ್ಷರ ಆಯ್ಕೆ, ಈ ಬಾರಿ ಬೇರೆ ತಿರುವು ಪಡೆದುಕೊಂಡಿದೆ. ಅಷ್ಟೇ ಅಲ್ಲದೇ ಈ ಬಾರಿಯ ಚುನಾವಣೆ ಭಾರೀ ತುರುಸು ಪಡೆದಿದೆ. ‌ಒಟ್ಟಿನಲ್ಲಿ ಈ ಬಾರಿ ಕೈ-ಕಮಲ ಬೆಂಬಲಿತ ಅಭ್ಯರ್ಥಿ ಗೆಲ್ಲುತ್ತಾರೋ ಅಥವಾ ಜೆಡಿಎಸ್​ನ ಮುಖಂಡ ಗೆಲ್ಲುತ್ತಾರೋ ಎನ್ನೋದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ