AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಿನ ಮಠಾಧೀಶರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆಂದ್ರೆ ಅದನ್ನ ಗಂಭೀರವಾಗಿ ಪರಿಗಣಿಸಬೇಕು; ಹುಬ್ಬಳ್ಳಿಯಲ್ಲಿ ಸರ್ಕಾರಕ್ಕೆ ಸಲಹೆ ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ನಾಡಿನ ಮಠಾಧೀಶರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆಂದ್ರೆ ಅದನ್ನ ಗಂಭೀರವಾಗಿ ಪರಿಗಣಿಸಬೇಕು. ಪಠ್ಯದಲ್ಲಿ ಏನು ಲೋಪದೋಷವಾಗಿದೆ ಅದನ್ನ ಸರಿಪಡಿಸಬೇಕು. ಇಲ್ಲವಾಗಿದ್ರೆ ಅದನ್ನ ತಿಳಿಸಿ. ಸುಮ್ನೆ ವಿವಾದ ಮಾಡೋದು ಸರಿಯಲ್ಲ. -ಜಗದೀಶ್ ಶೆಟ್ಟರ್

ನಾಡಿನ ಮಠಾಧೀಶರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆಂದ್ರೆ ಅದನ್ನ ಗಂಭೀರವಾಗಿ ಪರಿಗಣಿಸಬೇಕು; ಹುಬ್ಬಳ್ಳಿಯಲ್ಲಿ ಸರ್ಕಾರಕ್ಕೆ ಸಲಹೆ ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್
TV9 Web
| Edited By: |

Updated on: Jun 01, 2022 | 4:28 PM

Share

ಹುಬ್ಬಳ್ಳಿ: ಪಠ್ಯಪುಸ್ತಕ ಪರಿಷ್ಕರಣೆ ಕಿತ್ತಾಟ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ರೋಹಿತ್ ಚಕ್ರತೀರ್ಥ ಸಮಿತಿ ಹಲವು ಮಾರ್ಪಾಡುಗಳನ್ನು ಮಾಡಿರುವುದು ವಿವಾದಕ್ಕೆ ಕಾರಣವಾಗುತ್ತಿದೆ. ಇದೀಗ ಬಸವಣ್ಣನವರ ಕುರಿತಾದ ಪಠ್ಯ ಬದಲಾವಣೆ ಸಂಘರ್ಷಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಹಲವು ಹಿರಿಯ ಸಾಹಿತಿಗಳು, ಮಠಾಧೀಶರ ಕೆಂಗಣ್ಣಿಗೆ ಗುರಿಯಾಗಿದೆ. ಬಸವಣ್ಣನವರ ಪಾಠದಲ್ಲಿ ಹಲವು ಅಂಶಗಳನ್ನು ಕೈ ಬಿಡಲಾಗಿದೆ ಅಂತಾ ಸಿಎಂಗೆ ಸಾಣೇಹಳ್ಳಿ ಶ್ರೀಗಳು ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದಾರೆ‌. ಬಸವಣ್ಣನವರ ಜನಮುಖಿ ಅಂಶ ಸೇರಿದಂತೆ ಅನೇಕ ಮಹತ್ವದ ಸಂಗತಿಗಳನ್ನೇ ತೆಗೆದು ತಮಗೆ ಬೇಕಾದಂತೆ ತಿರುಚಿದ್ದಾರೆ ಅಂತ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಪಠ್ಯಪುಸ್ತಕದಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಬೇಕು. ಮಠಾಧೀಶರು ಪತ್ರ ಬರೆಯುತ್ತಿದ್ದಾರಂದ್ರೆ ಗಂಭೀರವಾಗಿ ಪರಿಗಣಿಸಿ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ನಾಡಿನ ಮಠಾಧೀಶರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆಂದ್ರೆ ಅದನ್ನ ಗಂಭೀರವಾಗಿ ಪರಿಗಣಿಸಬೇಕು. ಪಠ್ಯದಲ್ಲಿ ಏನು ಲೋಪದೋಷವಾಗಿದೆ ಅದನ್ನ ಸರಿಪಡಿಸಬೇಕು. ಇಲ್ಲವಾಗಿದ್ರೆ ಅದನ್ನ ತಿಳಿಸಿ. ಸುಮ್ನೆ ವಿವಾದ ಮಾಡೋದು ಸರಿಯಲ್ಲ. ಕೆಲವರು ವಿಷಯ ಗೊತ್ತಿಲ್ಲದೇ ಮಾತನಾಡ್ತಾರೆ. ನಾನೂ ಕೂಡಾ ಬಸವಣ್ಣನವರ ಕುರಿತು ಪಠ್ಯದಲ್ಲಿ ಏನಾಗಿದೆ ಎನ್ನೋದು ನೋಡಿಲ್ಲ. ಇವಾಗ ಆ ಪ್ರತಿ ತರಿಸೋಕೆ ಹೇಳಿದ್ದೇನೆ. ಅದರಲ್ಲಿ ತಪ್ಪಾಗಿದ್ರೆ ಖಂಡಿತ ಅದನ್ನ ಸರಿಪಡಿಸಬೇಕು. ಈ ಬಗ್ಗೆ ನಾನೂ ಕೂಡಾ ಸಿಎಂಗೆ ಹೇಳ್ತೇನೆ. ಮಠಾಧೀಶರ ಪತ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ

ಇನ್ನು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕಾಲಾನುಕ್ರಮೇಣ ಆಗಬೇಕು‌. ಅದು ಸಿಎಂ ಹಾಗೂ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಯಾಕೆ ತಡವಾಗ್ತಿದೆ ನಂಗೆ ಗೊತ್ತಿಲ್ಲ, ಈ ಬಗ್ಗೆ ಸಿಎಂ ಅವರೇ ಹೇಳಬೇಕು ಎಂದು ಹುಬ್ಬಳ್ಳಿಯಲ್ಲಿ ಹೇಳಿದ್ರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಶಿಕ್ಷಣ ಸಚಿವ ಮತ್ತು ರೋಹಿತ್ ವಿರುದ್ಧ ಭುಗಿಲೆದ್ದ ಕಿಚ್ಚು ಸಾಲು ಸಾಲು ವಿವಾದಗಳ ಬೆನ್ನಲ್ಲೇ ಶಿಕ್ಷಣ ಸಚಿವ ಬಿಸಿ ನಾಗೇಶ್ ಮತ್ತು ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ನಿನ್ನೆ ಫ್ರೀಡಂಪಾರ್ಕ್ನಲ್ಲಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ವು. ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣ, ಪ್ರಗತಿಪರರು, ಸಾಹಿತಿಗಳು, ಚಿಂತಕರು, ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ಹಲವರು ತೀವ್ರ ಅಕ್ರೋಶ ವ್ಯಕ್ತಪಡಿಸಿದರು. ಹಾಗೇ ಶಿಕ್ಷಣ ಸಚಿವ ನಾಗೇಶ್ ತಕ್ಷಣ ರಾಜೀನಾಮೆ ನೀಡಬೇಕು. ಪರಿಷ್ಕೃತ ಪಠ್ಯಕ್ರಮ ರದ್ದುಗೊಳಿಸಿ, ಚಕ್ರತೀರ್ಥನನ್ನು ಬಂಧಿಸಿ ಕ್ರಮ ಕೈಗೊಳ್ಳದಿದ್ದರೆ ಕರವೇ ವಿಧಾನಸೌಧ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ರು. ಇದನ್ನೂ ಓದಿ: ಪಠ್ಯಕ್ರಮದ ಬಗ್ಗೆ ಲೇಖನ ಬರೆದಿದ್ದ ಶಿಕ್ಷಣ ತಜ್ಞ ಡಾ.ಸುಧಾಕರ್ ಹೊಸಳ್ಳಿಗೆ ಜೀವ ಬೆದರಿಕೆ

ಪ್ರಗತಿಪರರು, ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ಹಿರಿಯ ಸಾಹಿತಿ ಎಸ್.ಜಿ ರಾಮಕೃಷ್ಣ ಮಾತನಾಡಿ ಪಠ್ಯ ಪುಸ್ತಕ ಪರಿಷ್ಕರಣೆ ನ್ಯಾಯಬದ್ದವಾಗಿ ಆಗಿಲ್ಲ. ನನ್ನ ಲೇಖನ ಪಠ್ಯದಲ್ಲಿ ಸೇರುವುದಕ್ಕೆ ನನ್ನ ಸಂಪೂರ್ಣ ವಿರೋಧ ಇದೆ. ಇದು ಶಿಕ್ಷಣ ಕ್ಷೇತ್ರದ ಅವನತಿಯ ಹಾದಿ ಅಂದ್ರು.

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ