Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad District Consumer Court: ಬಡ್ಡಿ ಮತ್ತು ಠೇವಣಿ ಹಣ ವಾಪಸ್ ನೀಡದ ಅಂಚೆ ಇಲಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಕಿವಿಹಿಂಡಿ, ದಂಡ ವಿಧಿಸಿತು!

Dharwad Postal Department: ದೂರುದಾರರ ಹಣವನ್ನು ಜನರಲ್ ಪಿಪಿಎಫ್ ಯೋಜನೆಯಡಿ ಅಂಚೆ ಇಲಾಖೆಯವರು ಮುಂದುವರೆಸಿ ಆ ಹಣವನ್ನು ಬೇರೆ ಕಡೆ ವಿನಿಯೋಗಿಸಿ ಲಾಭ ಪಡೆದು ಈಗ ದೂರುದಾರನಿಗೆ ಬಡ್ಡಿ ಕೊಡಲು ನಿರಾಕರಿಸುತ್ತಿರುವುದು ಸೇವಾ ನ್ಯೂನ್ಯತೆ ಆಗುತ್ತದೆ- ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

Dharwad District Consumer Court: ಬಡ್ಡಿ ಮತ್ತು ಠೇವಣಿ ಹಣ ವಾಪಸ್ ನೀಡದ ಅಂಚೆ ಇಲಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಕಿವಿಹಿಂಡಿ, ದಂಡ ವಿಧಿಸಿತು!
ಠೇವಣಿ ಮೊತ್ತ ಮರಳಿಸದ ಅಂಚೆ ಇಲಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಕಿವಿಹಿಂಡಿ, ದಂಡ ವಿಧಿಸಿತು!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 20, 2023 | 4:58 PM

ಧಾರವಾಡದ (Dharwad) ಯು.ಬಿ. ಹಿಲ್ ನಿವಾಸಿ ಅಶೋಕ ಹುದ್ದಾರ ಎಂಬುವವರು ಇಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿ 15 ವರ್ಷಗಳ ಅವಧಿಯ ಹೆಚ್.ಯು.ಎಫ್, ಪಿ.ಪಿ.ಎಫ್ ಅಕೌಂಟ್ ತೆರೆದು ಸದರಿ ಯೋಜನೆಯಡಿ ಹಣವನ್ನು (FD) ತೊಡಗಿಸಿದ್ದರು. ಸದರಿ ಯೋಜನೆಯು ದಿ: 31/03/2015 ರಂದು ಮುಕ್ತಾಯವಾಗಿತ್ತು. ತದನಂತರ ದೂರುದಾರ ಸದರಿ ಯೋಜನೆಯನ್ನು ಮತ್ತೆ 5 ವರ್ಷಗಳ ಅವಧಿಗೆ ಅಂದರೆ 01/04/2015 ರಿಂದ 31/03/2020ರವರೆಗೆ ಮುಂದುವರೆಸಿದ್ದರು. ಆ ಯೋಜನೆ ದಿ 31/03/2020 ರಂದು ಮುಕ್ತಾಯವಾಗಿದ್ದರೂ ಅಲ್ಲಿಯವರೆಗಿನ ಅವರ ವಂತಿಗೆ ಹಣ ಮತ್ತು ಅದರ ಮೇಲಿನ ಬಡ್ಡಿ (Interest) ಲೆಕ್ಕ ಹಾಕಿ ಅಂಚೆ ಇಲಾಖೆಯವರು (Postal department) ತನಗೆ ಹಣವನ್ನು ಹಿಂದಿರುಗಿಸದೇ ಸತಾಯಿಸಿ ತೊಂದರೆ ನೀಡಿ, ಸೇವಾ ನ್ಯೂನ್ಯತೆ ಎಸಗಿದ್ದಾರೆ ಅಂತಾ ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ (Dharwad District Consumer Court) ದೂರನ್ನು ಸಲ್ಲಿಸಿದ್ದರು.

ಅಂಚೆ ಇಲಾಖೆಯವರು ಸದರಿ ದೂರಿಗೆ ಆಕ್ಷೇಪಣೆ ಎತ್ತಿ ಕೇಂದ್ರ ಸರ್ಕಾರದ ಸುತ್ತೋಲೆಯಂತೆ ಹೆಚ್.ಯು.ಎಫ್/ಪಿ.ಪಿ.ಎಫ್‍ಯೋಜನೆಯನ್ನು ಮುಂದುವರೆಸಲು ಅವಕಾಶ ಇರುವುದಿಲ್ಲ. ಕಾರಣ 2015ರ ನಂತರ ಅವಧಿ ಮುಕ್ತಾಯವಾಗಿರುವುದರಿಂದ ಆ ನಂತರದ ಅವಧಿಗೆ ಬಡ್ಡಿ ಕೊಡಲು ಬರುವುದಿಲ್ಲ ಅಂದಿದ್ದರು. ದೂರುದಾರನಿಗೆ 2015 ರವರೆಗಿನ ಹಣ ಮತ್ತು ನಂತರದ ಅವಧಿಯ ಅವರ ವಂತಿಗೆ ಹಣವನ್ನು ಮಾತ್ರ ಅವರಿಗೆ ವಾಪಸ್ಸು ಕೊಡಬಹುದು ಅಂತಾ ಅಂಚೆ ಇಲಾಖೆಯವರು ಆಕ್ಷೇಪಿಸಿದ್ದರು.

ಸದರಿ ದೂರಿನ ಬಗ್ಗೆ ಕೂಲಂಕಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ, ಸದಸ್ಯರಾದ ವಿಶಾಲಾಕ್ಷಿ ಅ. ಬೋಳಶೆಟ್ಟಿ ಹಾಗೂ ಪ್ರಭು. ಸಿ ಹಿರೇಮಠ ಅಂಚೆ ಇಲಾಖೆಯ ಎಲ್ಲ ಆಕ್ಷೇಪಣೆಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿದರು. 2015ರ ನಂತರ ದೂರುದಾರರ ಹಣವನ್ನು ಜನರಲ್ ಪಿಪಿಎಫ್ ಯೋಜನೆಯಡಿ ಅಂಚೆ ಇಲಾಖೆಯವರು ಮುಂದುವರೆಸಿ ಆ ಹಣವನ್ನು ಬೇರೆ ಕಡೆ ವಿನಿಯೋಗಿಸಿ ಲಾಭ ಪಡೆದು ಈಗ ದೂರುದಾರನಿಗೆ ಬಡ್ಡಿ ಕೊಡಲು ನಿರಾಕರಿಸುತ್ತಿರುವುದು ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.

ದಿ: 28/03/2000 ರಿಂದ ಇಲ್ಲಿಯವರೆಗೆ ದೂರುದಾರನ ವಂತಿಗೆ ಮೇಲೆ ಬಡ್ಡಿ ಲೆಕ್ಕ ಹಾಕಿ, ಅಂಚೆ ಇಲಾಖೆಯವರು ಅವರಿಗೆ ಒಟ್ಟು ರೂ. 28,34,686 ಮೊತ್ತದ ಹಣವನ್ನು ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಆದೇಶಿಸಿದೆ. ಸೇವಾ ನ್ಯೂನ್ಯತೆಯಿಂದ ದೂರುದಾರನಿಗೆ ಆಗಿರುವ ತೊಂದರೆ ಮತ್ತು ಹಿಂಸೆಗಾಗಿ ರೂ. 50,000 ಪರಿಹಾರ ಮೊತ್ತ ಹಾಗೂ ರೂ. 10,000 ಪ್ರಕರಣದ ಖರ್ಚು ವೆಚ್ಚ ಅಂತಾ ಕೊಡಲು ಅಂಚೆ ಇಲಾಖೆಗೆ ನಿರ್ದೇಶನ ನೀಡಿದೆ.

ವರದಿ: ನರಸಿಂಹಮೂರ್ತಿ ಪ್ಯಾಟಿ, ಟಿವಿ9, ಧಾರವಾಡ 

Published On - 4:55 pm, Fri, 20 January 23

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ