AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಡ್ ಶೆಡ್ಡಿಂಗ್: ವಾಟ್ಸಪ್ ಗ್ರೂಪ್​ನಲ್ಲಿ ವಿದ್ಯುತ್ ಮಾಹಿತಿ ನೀಡಲು ಮುಂದಾದ ಹೆಸ್ಕಾಂ

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಉದ್ಭವಿಸಿದೆ. ಯಾವಾಗ ಕರೆಂಟ್ ಹೋಗುತ್ತೋ, ಯಾವಾಗ ಬರುತ್ತೋ ತಿಳಿಯುವುದಿಲ್ಲ. ಹೀಗಾಗಿ ಸಮಸ್ಯೆ ಬಗೆಹರಿಸಲು ಹೆಸ್ಕಾಂ ಅಧಿಕಾರಿಗಳ ವಿಭಿನ್ನ ಪ್ಲ್ಯಾನ್ ಮಾಡಿದ್ದಾರೆ. ಸ್ಮಾರ್ಟ್ ಯುಗದಲ್ಲಿ ಸ್ಮಾರ್ಟ್ ಫೋನ್ ಮೂಲಕವೇ ವಿದ್ಯುತ್ ಬಗ್ಗೆ ಮಾಹಿತಿ ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಲೋಡ್ ಶೆಡ್ಡಿಂಗ್: ವಾಟ್ಸಪ್ ಗ್ರೂಪ್​ನಲ್ಲಿ ವಿದ್ಯುತ್ ಮಾಹಿತಿ ನೀಡಲು ಮುಂದಾದ ಹೆಸ್ಕಾಂ
ಸ್ಮಾರ್ಟ್ ಯುಗದಲ್ಲಿ ಸ್ಮಾರ್ಟ್ ಫೋನ್ ಮೂಲಕವೇ ವಿದ್ಯುತ್ ಬಗ್ಗೆ ಮಾಹಿತಿ ನೀಡುತ್ತಿರುವ ಹೆಸ್ಕಾಂ ಅಧಿಕಾರಿಗಳುImage Credit source: missisya/123rf.com
ಶಿವಕುಮಾರ್ ಪತ್ತಾರ್
| Edited By: |

Updated on:Oct 21, 2023 | 3:41 PM

Share

ಹುಬ್ಬಳ್ಳಿ, ಅ.21: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ (Load Shedding) ಸಮಸ್ಯೆ ಉದ್ಭವಿಸಿದೆ. ಯಾವಾಗ ಕರೆಂಟ್ ಹೋಗುತ್ತೋ, ಯಾವಾಗ ಬರುತ್ತೋ ತಿಳಿಯುವುದಿಲ್ಲ. ಹೀಗಾಗಿ ಸಮಸ್ಯೆ ಬಗೆಹರಿಸಲು ಹೆಸ್ಕಾಂ (HESCOM) ಅಧಿಕಾರಿಗಳ ವಿಭಿನ್ನ ಪ್ಲ್ಯಾನ್ ಮಾಡಿದ್ದಾರೆ. ಸ್ಮಾರ್ಟ್ ಯುಗದಲ್ಲಿ ಸ್ಮಾರ್ಟ್ ಫೋನ್ ಮೂಲಕವೇ ವಿದ್ಯುತ್ ಬಗ್ಗೆ ಮಾಹಿತಿ ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಹೆಸ್ಕಾಂ ಅಧಿಕಾರಿಗಳು ವಾಟ್ಸ್​ಆ್ಯಪ್ ಗ್ರೂಪ್ ರಚಿಸಿದ್ದು, ಇದರಲ್ಲಿ ಪಂಪ್ ಸೆಟ್ ಉಪಯೋಗಿಸುವ ರೈತರನ್ನು ಒಳಗೊಂಡು ಗ್ರಾಹಕರನ್ನು ಸೇರಿಸಲಾಗಿದೆ. ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಸರ್ಕಲ್​ನಲ್ಲಿ ಈ ಹೊಸ ಪ್ರಯತ್ನ ಮಾಡಲಾಗಿದೆ.

ಬ್ಯಾಹಟ್ಟಿ ಸರ್ಕಲ್​ನ ಸುಳ್ಳ, ಹೆಬಸೂರ, ಕಿರೇಸೂರ, ಕುಸುಗಲ್ ಗ್ರಾಮದಲ್ಲಿ ಪಂಪ್ ಸೆಟ್ ಹೊಂದಿದ ರೈತರಿಗೆ ಇದು ಅನುಕೂಲವಾಗಲಿದೆ. ಲೋಡ್ ಶೆಡ್ಡಿಂಗ್ ಹಿನ್ನೆಲೆ ರೈತರಿಗೆ ಇದೀಗ ಕೇವಲ ಐದು ಗಂಟೆ ವಿದ್ಯುತ್ ನೀಡಲಾಗುತ್ತಿದೆ. ಕೆಲವೆಡೆ ಐದು ಗಂಟೆಯೂ ವಿದ್ಯುತ್ ನೀಡುತ್ತಿಲ್ಲ ಎಂಬ ಆರೋಪವೂ ಇದೆ.

ಇದನ್ನೂ ಓದಿ: ವಿದ್ಯುತ್ ಕಣ್ಣಾ ಮುಚ್ಚಾಲೆ: ಅನಧಿಕೃತ ಲೋಡ್ ಶೆಡ್ಡಿಂಗ್​ನಿಂದ ಯಾದಗಿರಿ ಜಿಲ್ಲೆಯ ರೈತರು ಕಂಗಾಲು

ಅಷ್ಟು ಮಾತ್ರವಲ್ಲದೆ, ಕರೆಂಟ್ ಯಾವಾಗ ಹೋಗುತ್ತದೆ, ಯಾವಾಗ ಬರತ್ತದೆ ಎಂಬುದರ ಬಗ್ಗೆ ಗ್ರಾಹಕರಿಗೆ ಮಾಹಿತಿ ಇರುವುದಿಲ್ಲ. ಹೀಗಾಗಿ ರೈತರು ರಾತ್ರಿ ಇಡೀ ಜಮೀನಿನಲ್ಲಿ ಕಾಯುತ್ತಿರುತ್ತಾರೆ. ಈ ಸಮದ್ಯೆ ದೂರ ಮಾಡಲು ರೈತರಿಗೆ ವಾಟ್ಸ್​ಆ್ಯಪ್ ಗ್ರೂಪ್ ಮೂಲಕ ಮಾಹಿತಿ ರವಾನೆ ಮಾಡಲಾಗುತ್ತದೆ.

ವಿದ್ಯುತ್ ಎಷ್ಟು ಗಂಟೆಗೆ ಬರತ್ತದೆ, ಎಷ್ಟು ವ್ಯತ್ಯಯ ಆಗಲಿದೆ ಎಂದು ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ನೀಡಲಿದ್ದಾರೆ. ಆರೇಳು ಜಿಲ್ಲಾ ವ್ಯಾಪ್ತಿಯ ಹೆಸ್ಕಾಂನಲ್ಲಿ ಬ್ಯಾಹಟ್ಟಿ ಸರ್ಕಲ್​ನಲ್ಲಿ ಮಾಡಿರುವ ಈ ಪ್ರಯೋಗ ಯಶಸ್ವಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Sat, 21 October 23

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!