AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಡ್ ಶೆಡ್ಡಿಂಗ್: ವಾಟ್ಸಪ್ ಗ್ರೂಪ್​ನಲ್ಲಿ ವಿದ್ಯುತ್ ಮಾಹಿತಿ ನೀಡಲು ಮುಂದಾದ ಹೆಸ್ಕಾಂ

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಉದ್ಭವಿಸಿದೆ. ಯಾವಾಗ ಕರೆಂಟ್ ಹೋಗುತ್ತೋ, ಯಾವಾಗ ಬರುತ್ತೋ ತಿಳಿಯುವುದಿಲ್ಲ. ಹೀಗಾಗಿ ಸಮಸ್ಯೆ ಬಗೆಹರಿಸಲು ಹೆಸ್ಕಾಂ ಅಧಿಕಾರಿಗಳ ವಿಭಿನ್ನ ಪ್ಲ್ಯಾನ್ ಮಾಡಿದ್ದಾರೆ. ಸ್ಮಾರ್ಟ್ ಯುಗದಲ್ಲಿ ಸ್ಮಾರ್ಟ್ ಫೋನ್ ಮೂಲಕವೇ ವಿದ್ಯುತ್ ಬಗ್ಗೆ ಮಾಹಿತಿ ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಲೋಡ್ ಶೆಡ್ಡಿಂಗ್: ವಾಟ್ಸಪ್ ಗ್ರೂಪ್​ನಲ್ಲಿ ವಿದ್ಯುತ್ ಮಾಹಿತಿ ನೀಡಲು ಮುಂದಾದ ಹೆಸ್ಕಾಂ
ಸ್ಮಾರ್ಟ್ ಯುಗದಲ್ಲಿ ಸ್ಮಾರ್ಟ್ ಫೋನ್ ಮೂಲಕವೇ ವಿದ್ಯುತ್ ಬಗ್ಗೆ ಮಾಹಿತಿ ನೀಡುತ್ತಿರುವ ಹೆಸ್ಕಾಂ ಅಧಿಕಾರಿಗಳುImage Credit source: missisya/123rf.com
ಶಿವಕುಮಾರ್ ಪತ್ತಾರ್
| Edited By: |

Updated on:Oct 21, 2023 | 3:41 PM

Share

ಹುಬ್ಬಳ್ಳಿ, ಅ.21: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ (Load Shedding) ಸಮಸ್ಯೆ ಉದ್ಭವಿಸಿದೆ. ಯಾವಾಗ ಕರೆಂಟ್ ಹೋಗುತ್ತೋ, ಯಾವಾಗ ಬರುತ್ತೋ ತಿಳಿಯುವುದಿಲ್ಲ. ಹೀಗಾಗಿ ಸಮಸ್ಯೆ ಬಗೆಹರಿಸಲು ಹೆಸ್ಕಾಂ (HESCOM) ಅಧಿಕಾರಿಗಳ ವಿಭಿನ್ನ ಪ್ಲ್ಯಾನ್ ಮಾಡಿದ್ದಾರೆ. ಸ್ಮಾರ್ಟ್ ಯುಗದಲ್ಲಿ ಸ್ಮಾರ್ಟ್ ಫೋನ್ ಮೂಲಕವೇ ವಿದ್ಯುತ್ ಬಗ್ಗೆ ಮಾಹಿತಿ ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಹೆಸ್ಕಾಂ ಅಧಿಕಾರಿಗಳು ವಾಟ್ಸ್​ಆ್ಯಪ್ ಗ್ರೂಪ್ ರಚಿಸಿದ್ದು, ಇದರಲ್ಲಿ ಪಂಪ್ ಸೆಟ್ ಉಪಯೋಗಿಸುವ ರೈತರನ್ನು ಒಳಗೊಂಡು ಗ್ರಾಹಕರನ್ನು ಸೇರಿಸಲಾಗಿದೆ. ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಸರ್ಕಲ್​ನಲ್ಲಿ ಈ ಹೊಸ ಪ್ರಯತ್ನ ಮಾಡಲಾಗಿದೆ.

ಬ್ಯಾಹಟ್ಟಿ ಸರ್ಕಲ್​ನ ಸುಳ್ಳ, ಹೆಬಸೂರ, ಕಿರೇಸೂರ, ಕುಸುಗಲ್ ಗ್ರಾಮದಲ್ಲಿ ಪಂಪ್ ಸೆಟ್ ಹೊಂದಿದ ರೈತರಿಗೆ ಇದು ಅನುಕೂಲವಾಗಲಿದೆ. ಲೋಡ್ ಶೆಡ್ಡಿಂಗ್ ಹಿನ್ನೆಲೆ ರೈತರಿಗೆ ಇದೀಗ ಕೇವಲ ಐದು ಗಂಟೆ ವಿದ್ಯುತ್ ನೀಡಲಾಗುತ್ತಿದೆ. ಕೆಲವೆಡೆ ಐದು ಗಂಟೆಯೂ ವಿದ್ಯುತ್ ನೀಡುತ್ತಿಲ್ಲ ಎಂಬ ಆರೋಪವೂ ಇದೆ.

ಇದನ್ನೂ ಓದಿ: ವಿದ್ಯುತ್ ಕಣ್ಣಾ ಮುಚ್ಚಾಲೆ: ಅನಧಿಕೃತ ಲೋಡ್ ಶೆಡ್ಡಿಂಗ್​ನಿಂದ ಯಾದಗಿರಿ ಜಿಲ್ಲೆಯ ರೈತರು ಕಂಗಾಲು

ಅಷ್ಟು ಮಾತ್ರವಲ್ಲದೆ, ಕರೆಂಟ್ ಯಾವಾಗ ಹೋಗುತ್ತದೆ, ಯಾವಾಗ ಬರತ್ತದೆ ಎಂಬುದರ ಬಗ್ಗೆ ಗ್ರಾಹಕರಿಗೆ ಮಾಹಿತಿ ಇರುವುದಿಲ್ಲ. ಹೀಗಾಗಿ ರೈತರು ರಾತ್ರಿ ಇಡೀ ಜಮೀನಿನಲ್ಲಿ ಕಾಯುತ್ತಿರುತ್ತಾರೆ. ಈ ಸಮದ್ಯೆ ದೂರ ಮಾಡಲು ರೈತರಿಗೆ ವಾಟ್ಸ್​ಆ್ಯಪ್ ಗ್ರೂಪ್ ಮೂಲಕ ಮಾಹಿತಿ ರವಾನೆ ಮಾಡಲಾಗುತ್ತದೆ.

ವಿದ್ಯುತ್ ಎಷ್ಟು ಗಂಟೆಗೆ ಬರತ್ತದೆ, ಎಷ್ಟು ವ್ಯತ್ಯಯ ಆಗಲಿದೆ ಎಂದು ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ನೀಡಲಿದ್ದಾರೆ. ಆರೇಳು ಜಿಲ್ಲಾ ವ್ಯಾಪ್ತಿಯ ಹೆಸ್ಕಾಂನಲ್ಲಿ ಬ್ಯಾಹಟ್ಟಿ ಸರ್ಕಲ್​ನಲ್ಲಿ ಮಾಡಿರುವ ಈ ಪ್ರಯೋಗ ಯಶಸ್ವಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Sat, 21 October 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ