AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಡ್ ಶೆಡ್ಡಿಂಗ್: ವಾಟ್ಸಪ್ ಗ್ರೂಪ್​ನಲ್ಲಿ ವಿದ್ಯುತ್ ಮಾಹಿತಿ ನೀಡಲು ಮುಂದಾದ ಹೆಸ್ಕಾಂ

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಉದ್ಭವಿಸಿದೆ. ಯಾವಾಗ ಕರೆಂಟ್ ಹೋಗುತ್ತೋ, ಯಾವಾಗ ಬರುತ್ತೋ ತಿಳಿಯುವುದಿಲ್ಲ. ಹೀಗಾಗಿ ಸಮಸ್ಯೆ ಬಗೆಹರಿಸಲು ಹೆಸ್ಕಾಂ ಅಧಿಕಾರಿಗಳ ವಿಭಿನ್ನ ಪ್ಲ್ಯಾನ್ ಮಾಡಿದ್ದಾರೆ. ಸ್ಮಾರ್ಟ್ ಯುಗದಲ್ಲಿ ಸ್ಮಾರ್ಟ್ ಫೋನ್ ಮೂಲಕವೇ ವಿದ್ಯುತ್ ಬಗ್ಗೆ ಮಾಹಿತಿ ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಲೋಡ್ ಶೆಡ್ಡಿಂಗ್: ವಾಟ್ಸಪ್ ಗ್ರೂಪ್​ನಲ್ಲಿ ವಿದ್ಯುತ್ ಮಾಹಿತಿ ನೀಡಲು ಮುಂದಾದ ಹೆಸ್ಕಾಂ
ಸ್ಮಾರ್ಟ್ ಯುಗದಲ್ಲಿ ಸ್ಮಾರ್ಟ್ ಫೋನ್ ಮೂಲಕವೇ ವಿದ್ಯುತ್ ಬಗ್ಗೆ ಮಾಹಿತಿ ನೀಡುತ್ತಿರುವ ಹೆಸ್ಕಾಂ ಅಧಿಕಾರಿಗಳುImage Credit source: missisya/123rf.com
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Rakesh Nayak Manchi

Updated on:Oct 21, 2023 | 3:41 PM

ಹುಬ್ಬಳ್ಳಿ, ಅ.21: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ (Load Shedding) ಸಮಸ್ಯೆ ಉದ್ಭವಿಸಿದೆ. ಯಾವಾಗ ಕರೆಂಟ್ ಹೋಗುತ್ತೋ, ಯಾವಾಗ ಬರುತ್ತೋ ತಿಳಿಯುವುದಿಲ್ಲ. ಹೀಗಾಗಿ ಸಮಸ್ಯೆ ಬಗೆಹರಿಸಲು ಹೆಸ್ಕಾಂ (HESCOM) ಅಧಿಕಾರಿಗಳ ವಿಭಿನ್ನ ಪ್ಲ್ಯಾನ್ ಮಾಡಿದ್ದಾರೆ. ಸ್ಮಾರ್ಟ್ ಯುಗದಲ್ಲಿ ಸ್ಮಾರ್ಟ್ ಫೋನ್ ಮೂಲಕವೇ ವಿದ್ಯುತ್ ಬಗ್ಗೆ ಮಾಹಿತಿ ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಹೆಸ್ಕಾಂ ಅಧಿಕಾರಿಗಳು ವಾಟ್ಸ್​ಆ್ಯಪ್ ಗ್ರೂಪ್ ರಚಿಸಿದ್ದು, ಇದರಲ್ಲಿ ಪಂಪ್ ಸೆಟ್ ಉಪಯೋಗಿಸುವ ರೈತರನ್ನು ಒಳಗೊಂಡು ಗ್ರಾಹಕರನ್ನು ಸೇರಿಸಲಾಗಿದೆ. ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಸರ್ಕಲ್​ನಲ್ಲಿ ಈ ಹೊಸ ಪ್ರಯತ್ನ ಮಾಡಲಾಗಿದೆ.

ಬ್ಯಾಹಟ್ಟಿ ಸರ್ಕಲ್​ನ ಸುಳ್ಳ, ಹೆಬಸೂರ, ಕಿರೇಸೂರ, ಕುಸುಗಲ್ ಗ್ರಾಮದಲ್ಲಿ ಪಂಪ್ ಸೆಟ್ ಹೊಂದಿದ ರೈತರಿಗೆ ಇದು ಅನುಕೂಲವಾಗಲಿದೆ. ಲೋಡ್ ಶೆಡ್ಡಿಂಗ್ ಹಿನ್ನೆಲೆ ರೈತರಿಗೆ ಇದೀಗ ಕೇವಲ ಐದು ಗಂಟೆ ವಿದ್ಯುತ್ ನೀಡಲಾಗುತ್ತಿದೆ. ಕೆಲವೆಡೆ ಐದು ಗಂಟೆಯೂ ವಿದ್ಯುತ್ ನೀಡುತ್ತಿಲ್ಲ ಎಂಬ ಆರೋಪವೂ ಇದೆ.

ಇದನ್ನೂ ಓದಿ: ವಿದ್ಯುತ್ ಕಣ್ಣಾ ಮುಚ್ಚಾಲೆ: ಅನಧಿಕೃತ ಲೋಡ್ ಶೆಡ್ಡಿಂಗ್​ನಿಂದ ಯಾದಗಿರಿ ಜಿಲ್ಲೆಯ ರೈತರು ಕಂಗಾಲು

ಅಷ್ಟು ಮಾತ್ರವಲ್ಲದೆ, ಕರೆಂಟ್ ಯಾವಾಗ ಹೋಗುತ್ತದೆ, ಯಾವಾಗ ಬರತ್ತದೆ ಎಂಬುದರ ಬಗ್ಗೆ ಗ್ರಾಹಕರಿಗೆ ಮಾಹಿತಿ ಇರುವುದಿಲ್ಲ. ಹೀಗಾಗಿ ರೈತರು ರಾತ್ರಿ ಇಡೀ ಜಮೀನಿನಲ್ಲಿ ಕಾಯುತ್ತಿರುತ್ತಾರೆ. ಈ ಸಮದ್ಯೆ ದೂರ ಮಾಡಲು ರೈತರಿಗೆ ವಾಟ್ಸ್​ಆ್ಯಪ್ ಗ್ರೂಪ್ ಮೂಲಕ ಮಾಹಿತಿ ರವಾನೆ ಮಾಡಲಾಗುತ್ತದೆ.

ವಿದ್ಯುತ್ ಎಷ್ಟು ಗಂಟೆಗೆ ಬರತ್ತದೆ, ಎಷ್ಟು ವ್ಯತ್ಯಯ ಆಗಲಿದೆ ಎಂದು ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ನೀಡಲಿದ್ದಾರೆ. ಆರೇಳು ಜಿಲ್ಲಾ ವ್ಯಾಪ್ತಿಯ ಹೆಸ್ಕಾಂನಲ್ಲಿ ಬ್ಯಾಹಟ್ಟಿ ಸರ್ಕಲ್​ನಲ್ಲಿ ಮಾಡಿರುವ ಈ ಪ್ರಯೋಗ ಯಶಸ್ವಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Sat, 21 October 23

ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ