AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದ ಈ ಪ್ರದೇಶಗಳಲ್ಲಿ ಅ.29 ರಂದು ವಿದ್ಯುತ್ ವ್ಯತ್ಯಯ; ಇಲ್ಲಿದೆ ಮಾಹಿತಿ

ಧಾರವಾಡ(Dharwad) ಉಪವಿಭಾಗ ವ್ಯಾಪಿಯಲ್ಲಿ ಬರುವ 110 ಕೆವಿ. ಲಕ್ಕಮ್ಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಜಾಗುವ 11 ಕೆ ವಿ ನವಲೂರು ಫೀಡರ್ ಮಾರ್ಗದಲ್ಲಿ ಅ.29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ.

ಧಾರವಾಡದ ಈ ಪ್ರದೇಶಗಳಲ್ಲಿ ಅ.29 ರಂದು ವಿದ್ಯುತ್ ವ್ಯತ್ಯಯ; ಇಲ್ಲಿದೆ ಮಾಹಿತಿ
ಧಾರವಾಡದಲ್ಲಿ ಅ.29 ರಂದು ವಿದ್ಯುತ್ ವ್ಯತ್ಯಯ
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 27, 2023 | 7:53 PM

Share

ಧಾರವಾಡ, ಅ.27: ಧಾರವಾಡ(Dharwad) ಉಪವಿಭಾಗ ವ್ಯಾಪಿಯಲ್ಲಿ ಬರುವ 110 ಕೆವಿ. ಲಕ್ಕಮ್ಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಜಾಗುವ 11 ಕೆ ವಿ ನವಲೂರು ಫೀಡರ್ ಮಾರ್ಗದಲ್ಲಿ ಅ.29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ. ಈ ಹಿನ್ನಲೆ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲ 11 ಕೆ.ವಿ. ಮಾರ್ಗಗಳಲ್ಲಿ ಅ.29 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್​ ವ್ಯತ್ಯಯ (Power Cut)ವಾಗಲಿದೆ.

ಎಲ್ಲೆಲ್ಲಿ ಪವರ್​​ ಕಟ್?​

ಹೌದು, ವಿದ್ಯುತ್ ಪ್ರಸರಣ ನಿಗಮ ನಿಯಮಿತ ಅವರು ತುರ್ತುಪಾಲನಾ ಕಾಮಗಾರಿಯನ್ನು ಕೈಗೊಂಡಿರುವುದರಿಂದ ಓಂ ನಗರ, ಸಂಪೂರ್ಣ ನವಲೂರು ಗ್ರಾಮದ ಕೃಷಿ ಪ್ರದೇಶ ಹಾಗೂ ನವಲೂರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ:ವಿದ್ಯುತ್ ಕಣ್ಣಾ ಮುಚ್ಚಾಲೆ: ಅನಧಿಕೃತ ಲೋಡ್ ಶೆಡ್ಡಿಂಗ್​ನಿಂದ ಯಾದಗಿರಿ ಜಿಲ್ಲೆಯ ರೈತರು ಕಂಗಾಲು

ವಾಟ್ಸಪ್ ಮೂಲಕ ವಿದ್ಯುತ್ ಮಾಹಿತಿ ನೀಡಲು ಮುಂದಾಗಿದ್ದ ಹೆಸ್ಕಾಂ

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಉದ್ಭವಿಸಿದ್ದು, ಕರೆಂಟ್  ಯಾವಾಗ ಹೋಗುತ್ತೋ, ಬರುತ್ತೋ ತಿಳಿಯುತ್ತಿರಲಿಲ್ಲ. ಇದರಿಂದ ರೈತರನ್ನು ಸೇರಿದಂತೆ ಎಲ್ಲರಿಗೂ ಸಮಸ್ಯೆ ಆಗುತ್ತಿತ್ತು. ಇದನ್ನು ಬಗೆಹರಿಸಲು ಹೆಸ್ಕಾಂ  ಅಧಿಕಾರಿಗಳ ವಿಭಿನ್ನ ಪ್ಲ್ಯಾನ್ ಮಾಡಿ, ಸ್ಮಾರ್ಟ್ ಫೋನ್ ಮೂಲಕವೇ ವಿದ್ಯುತ್ ಬಗ್ಗೆ ಮಾಹಿತಿ ನೀಡಲು ಅಧಿಕಾರಿಗಳು ಮುಂದಾಗಿದ್ದರು. ಹೌದು, ಹೆಸ್ಕಾಂ ಅಧಿಕಾರಿಗಳು ವಾಟ್ಸ್​ಆ್ಯಪ್ ಗ್ರೂಫ್​ನ್ನು ರಚಿಸಿ, ಇದರಲ್ಲಿ ಪಂಪ್ ಸೆಟ್ ಉಪಯೋಗಿಸುವ ರೈತರನ್ನು ಒಳಗೊಂಡು ಎಲ್ಲಾ ಗ್ರಾಹಕರನ್ನು ಸೇರಿಸಲಾಗಿದೆ.

ಕರೆಂಟ್ ಯಾವಾಗ ಹೋಗುತ್ತದೆ, ಬರತ್ತದೆ ಎಂಬುದರ ಬಗ್ಗೆ ಗ್ರಾಹಕರಿಗೆ ಮಾಹಿತಿ ಇರುವುದಿಲ್ಲ. ಹೀಗಾಗಿ ರೈತರು ರಾತ್ರಿ ಇಡೀ ಜಮೀನಿನಲ್ಲಿ ಕಾಯುತ್ತಿರುತ್ತಾರೆ. ಈ ಸಮಸ್ಯೆಯನ್ನು ದೂರ ಮಾಡಲು ರೈತರಿಗೆ ವಾಟ್ಸ್​ಆ್ಯಪ್ ಗ್ರೂಪ್ ಮೂಲಕ ಮಾಹಿತಿ ರವಾನೆ ಮಾಡಲಾಗುತ್ತಿದೆ. ವಿದ್ಯುತ್ ಎಷ್ಟು ಗಂಟೆಗೆ ಬರತ್ತದೆ, ಎಷ್ಟು ವ್ಯತ್ಯಯ ಆಗಲಿದೆ ಎಂದು ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಬ್ಯಾಹಟ್ಟಿ ಸರ್ಕಲ್​ನಲ್ಲಿ ಮಾಡಿರುವ ಈ ಪ್ರಯೋಗ ಯಶಸ್ವಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ