AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ಬಿಜೆಪಿಗಿಲ್ಲ: ಪ್ರಲ್ಹಾದ್​ ಜೋಶಿ ಸ್ಪಷ್ಟನೆ

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ನಾವು ಅಧಿಕಾರಕ್ಕೆ ಬರುವ ಆಲೋಚನೆ ಬಿಜೆಪಿಗೆ ಇಲ್ಲ. ಕಾಂಗ್ರೆಸ್ ಸರ್ಕಾರ 5 ವರ್ಷ ಸಂಪೂರ್ಣ ಆಡಳಿತ ನಡೆಸಲಿ ಎಂಬುದೇ ಬಿಜೆಪಿಯ ನಿಲುವು ಮತ್ತು ಆಶಯವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Aug 17, 2024 | 3:42 PM

Share

ಹುಬ್ಬಳ್ಳಿ, ಆ.17: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಅಥವಾ ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi) ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿ(Hubballi)ಯಲ್ಲಿ ಇಂದು(ಶನಿವಾರ) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮತದಾರರು ಕಾಂಗ್ರೆಸ್ ಪಕ್ಷಕ್ಕೆ 5 ವರ್ಷ ಜನಾದೇಶ ಕೊಟ್ಟಿದ್ದಾರೆ. ಹಾಗಾಗಿ ನಾವು ಬೀಳಿಸುವ ಪ್ರಶ್ನೆಯೇ ಉದ್ಭವಿಸದು ಎಂದು ಪ್ರತಿಕ್ರಿಯಿಸಿದರು.

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ನಾವು ಅಧಿಕಾರಕ್ಕೆ ಬರುವ ಆಲೋಚನೆ ಬಿಜೆಪಿಗೆ ಇಲ್ಲ. ಕಾಂಗ್ರೆಸ್ ಸರ್ಕಾರ 5 ವರ್ಷ ಸಂಪೂರ್ಣ ಆಡಳಿತ ನಡೆಸಲಿ ಎಂಬುದೇ ಬಿಜೆಪಿಯ ನಿಲುವು ಮತ್ತು ಆಶಯವಾಗಿದೆ. ಕಳೆದ ಬಾರಿ ಬಿಜೆಪಿ 104 ಸ್ಥಾನಗಳನ್ನು ಪಡೆದಿತ್ತು. ಕಾಂಗ್ರೆಸ್ 68ಕ್ಕೆ ಇಳಿದಿತ್ತು. ಜನ ಅವರನ್ನು ತಿರಸ್ಕಾರ ಮಾಡಿದ್ದರು. ಆದಾಗ್ಯೂ ಕಾಂಗ್ರೆಸ್ – ಜೆಡಿಎಸ್ ಸೇರಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಯತ್ನಿಸಿದ್ದರು.

ಇದನ್ನೂ ಓದಿ:ಪಿಎಂ ಸೂರ್ಯ ಘರ್ ಯೋಜನೆಯಡಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನ; ಪ್ರಲ್ಹಾದ್ ಜೋಶಿ

ಬಳಿಕ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರಲು ಯತ್ನಿಸಿದರು. ಹಾಗಾಗಿ ಆಗಿನ ಸಂದರ್ಭದಲ್ಲಿ ಬಿಜೆಪಿ ಸಹ ಸರ್ಕಾರ ರಚಿಸಲು ಪ್ರಯತ್ನಿಸಿತ್ತು. ಆದರೆ, ಈ ಬಾರಿ ಬಿಜೆಪಿ ಅಂಥ ಯಾವುದೇ ಪ್ರಯತ್ನ ನಡೆಸುವುದಿಲ್ಲ ಎಂದರು. ಇನ್ನು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅವರು ಶುದ್ಧರು ಎಂದಾದರೆ. ಬೇಕಿದ್ದರೆ ಅವರೇ ಸಿಎಂ ಆಗಿ ಮುಂದುವರಿಯಲಿ. ನಮ್ಮ ಅಭ್ಯಂತರ ಏನಿಲ್ಲ ಎಂದು ಪ್ರಲ್ಹಾದ್​ ಜೋಶಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Sat, 17 August 24

Follow Us
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್