AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಸಂವಿಧಾನ ರಕ್ಷಣೆಗೆ ಪ್ರಮಾಣ ಸ್ವೀಕರಿಸಿ, ಸಂವಿಧಾನದ ಪೀಠಿಕೆ ಓದಲು ಕರೆ ನೀಡಿದ ಸಚಿವ ಪ್ರಲ್ಹಾದ್ ಜೋಶಿ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಭಾರತ ಸಂವಿಧಾನದ ಪೀಠಿಕೆಯನ್ನು ಓದುವುದು ಹಾಗೂ ಅದರಂತೆ ನಡೆಯುವುದು ಪ್ರತಿ ಭಾರತೀಯನ ಕರ್ತವ್ಯವಾಗಿದೆ ಎಂದು ಕರೆ ನೀಡಿದರು.

ಭಾರತ ಸಂವಿಧಾನ ರಕ್ಷಣೆಗೆ ಪ್ರಮಾಣ ಸ್ವೀಕರಿಸಿ, ಸಂವಿಧಾನದ ಪೀಠಿಕೆ ಓದಲು ಕರೆ ನೀಡಿದ ಸಚಿವ ಪ್ರಲ್ಹಾದ್ ಜೋಶಿ
ಸಚಿವ ಪ್ರಲ್ಹಾದ್ ಜೋಶಿ
TV9 Web
| Edited By: ಆಯೇಷಾ ಬಾನು|

Updated on:Nov 27, 2022 | 10:21 AM

Share

ಧಾರವಾಡ: ಧಾರವಾಡದ ಅಣ್ಣಿಗೇರಿಯಲ್ಲಿಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ(Pralhad Joshi) ನೇತೃತ್ವದಲ್ಲಿ ಸಂವಿಧಾನ ಸಮರ್ಪಣಾ ದಿನವನ್ನು(Constitution Day) ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂವಿಧಾನ ದಿನದ ಅಂಗವಾಗಿ ಸಾರ್ವಜನಿಕರು ಹಾಗೂ ಸಿಬ್ಬಂದಿ ವರ್ಗದವರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂವಿಧಾನದ ಪೀಠಿಕೆಯನ್ನು ಓದಿದರು.

ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಭಾರತ ಸಂವಿಧಾನದ ಪೀಠಿಕೆಯನ್ನು ಓದುವುದು ಹಾಗೂ ಅದರಂತೆ ನಡೆಯುವುದು ಪ್ರತಿ ಭಾರತೀಯನ ಕರ್ತವ್ಯವಾಗಿದೆ ಎಂದು ಕರೆ ನೀಡಿದರು. ದೇಶವಾಸಿಗಳಿಗೆ ಪ್ರಜಾಪ್ರಭುತ್ವದ ಉತ್ಸವದಲ್ಲಿ ಭಾಗವಹಿಸುವಂತೆ ಕೋರಿದ ಸಚಿವ ಪ್ರಲ್ಹಾದ್ ಜೋಶಿಯವರು, ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಜೀವಾಳವೇ ಸಂವಿಧಾನ ಎಂದರು. ಅದರ ಕುರಿತು ತಿಳುವಳಿಕೆ‌ ಪಡೆಯುವುದು ಹಾಗೂ ಅದರ ಸರಿಯಾದ ಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ.‌ ಈ ನಿಟ್ಟಿನಲ್ಲಿ ಸಂವಿಧಾನದ ಪ್ರಸ್ತಾವನೆ ಓದುವುದು ನಮ್ಮ ಮೊದಲ ಕರ್ತವ್ಯವಾಗಿದೆ. ಹೀಗಾಗಿ readpreamble.nic.in ಜಾಲತಾಣಕ್ಕೆ ಭೇಟಿ ನೀಡಿ, ಸಂವಿಧಾನದ ಪೀಠಿಕೆಯನ್ನು ಓದಿದ ನಾನು, ಈ ಜಾಲತಾಣದಿಂದಲೇ ನನ್ನ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದೇನೆ.‌ ನೀವು ಕೂಡ ಈ ಜಾಲತಾಣಕ್ಕೆ ಭೇಟಿ ನೀಡಿ ಹಾಗೂ ಸಂವಿಧಾನದ ಪೀಠಿಕೆಯನ್ನು ಓದಿ, ಪ್ರಮಾಣ ಪತ್ರ ಪಡೆಯಿರಿ ಎಂದು ಸಚಿವ ಪ್ರಲ್ಜಾದ್ ಜೋಶಿ ಕರೆ ನೀಡಿದರು.

ಇದನ್ನೂ ಓದಿ: Explainer: ಉತ್ತರಾಖಂಡ್ನಲ್ಲಿ ಸತತ ಎರಡನೇ ಬಾರಿಗೆ ಬಿಜೆಪಿ ಗದ್ದುಗೆ ಏರಿದ್ದು ಹೇಗೆ? ಪ್ರಹ್ಲಾದ್ ಜೋಷಿ ರೂಪಿಸಿದ ಚುನಾವಣಾ ಸ್ಟ್ರಾಟಜಿ ಏನು?

ಕರ್ನಾಟಕ ದಲಿತ ವಿಮೋಚನಾ ಸಮಿತಿ ಹಾಗೂ ಅಣ್ಣಿಗೇರಿ ತಾಲೂಕು ಸಮಿತಿಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಾವಿತ್ರಿ ಶಿವಪ್ಪ ಪೂಜಾರ್ ಹಾಗೂ ರಾಷ್ಟ್ರಪತಿ ಪದಕ ಪುರಸ್ಕೃತರಾದ ಪೊಲೀಸ್ ಇನ್ಸ್‌ಪೆಕ್ಟರ್ ಧ್ರುವರಾಜ್ ಪಾಟೀಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಎಲೆಮರೆಯ ಕಾಯಿಯಂತೆ ಇರುವ ಸಾಧಕರನ್ನು ಗುರುತಿಸಿ ಗೌರವಿಸಿದ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಇದೇ ವೇಳೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸಚಿವರಾದ ಶ್ರೀ ಶಂಕರ್ ಪಾಟೀಲ್ ಮುನೇನಕೊಪ್ಪ ಹಾಗೂ ಸಮಿತಿಯ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Published On - 10:21 am, Sun, 27 November 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ