AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಸೆಂಟ್ರಲ್ ನಲ್ಲಿ ಬಿಜೆಪಿ ಗೆಲುವಿಗೆ ರಣತಂತ್ರ – ಲಿಂಗಾಯತರ ಮತ ಕೈ ತಪ್ಪದಂತೆ ನೋಡಿಕೊಳ್ಳಲು ಸಂಕೇಶ್ವರ್ ಸಹಕಾರ ಕೋರಿದ ಪ್ರಲ್ಹಾದ್ ಜೋಶಿ

Lingayat: ಸಂಕೇಶ್ವರ್ ಜೊತೆ ಕೈಗಾರಿಕೋದ್ಯಮಿಗಳ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ಬೆಂಬಲಿಸುವಂತೆ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದಾರೆ. ವಿಜಯ್ ಸಂಕೇಶ್ವರ್ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ ಮೋದಿಯವರಿಗೆ ಇನ್ನೂ ಹೆಚ್ಚಿನ ಶಕ್ತಿ ನೀಡುವಲ್ಲಿ ಎಲ್ಲರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು‌.

ಹುಬ್ಬಳ್ಳಿ ಸೆಂಟ್ರಲ್ ನಲ್ಲಿ ಬಿಜೆಪಿ ಗೆಲುವಿಗೆ ರಣತಂತ್ರ - ಲಿಂಗಾಯತರ ಮತ ಕೈ ತಪ್ಪದಂತೆ ನೋಡಿಕೊಳ್ಳಲು ಸಂಕೇಶ್ವರ್ ಸಹಕಾರ ಕೋರಿದ ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ ಸೆಂಟ್ರಲ್ ನಲ್ಲಿ ಬಿಜೆಪಿ ಗೆಲುವಿಗೆ ರಣತಂತ್ರ
ಸಾಧು ಶ್ರೀನಾಥ್​
|

Updated on:May 05, 2023 | 8:52 PM

Share

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಅವರು ಬಿಜೆಪಿ ಬಿಟ್ಟು ಹೋದರೂ, ಬಿಜೆಪಿ ಅಭ್ಯರ್ಥಿಗಳ ಬೆನ್ನಿಗೆ ನಿಂತಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಅಬ್ಬರದ ಪ್ರಚಾರ ನಡೆಸಿ ಬಿಜೆಪಿ ಪರ ಮತಯಾಚನೆಯಲ್ಲಿ ತೊಡಗಿದ್ದಾರೆ. ಎದುರಿಗೆ ತಮ್ಮ ಬಹುಕಾಲದ ಸ್ನೇಹಿತ ಜಗದೀಶ್ ಶೆಟ್ಟರ್ ಕಣದಲ್ಲಿ ನಿಂತಿದ್ದರೂ, ಪಕ್ಷದ ಪರ ಗಟ್ಟಿಯಾಗಿ ನಿಂತಿರುವ ಪ್ರಲ್ಹಾದ್ ಜೋಶಿ, ಹುಬ್ಬಳ್ಳಿ ಸೆಂಟ್ರಲ್ (Hubballi Central)ನಲ್ಲಿ ಬಿಜೆಪಿ ಅಭ್ಯರ್ಥಿ (BJP) ಗೆಲ್ಲಿಸಲು ರಣತಂತ್ರ ರೂಪಿಸಿದ್ದಾರೆ. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಬತ್ತಳಿಕೆಯಿಂದ ಲಿಂಗಾಯತ ಮತಗಳು ಬೀಳದಂತೆ ನೋಡಿಕೊಳ್ಳಲು ಎಚ್ಚರಿಕೆ ವಹಿಸಿರುವ ಜೋಶಿ, ವಿಜಯ್ ಸಂಕೇಶ್ವರ್ ಅವರ (Vijay Sankeshwar) ಸಹಕಾರ ಪಡೆದಿದ್ದಾರೆ. ಹುಬ್ಬಳ್ಳಿ ಸೇರಿದಂತೆ ರಾಜ್ಯದ ಲಿಂಗಾಯತ ಸಮುದಾಯದಲ್ಲಿ (Lingayat) ಪ್ರಮುಖ ಮುಖಂಡರಲ್ಲೊಬ್ಬರಾಗಿ ಪ್ರಭಾವ ಹೊಂದಿರುವ, ಉದ್ಯಮಿಯೂ ಆಗಿರುವ ವಿಜಯ್ ಸಂಕೇಶ್ವರ್ ಬಿಜೆಪಿ ಬೆಂಬಲಿಸುವಂತೆ ಕರೆ ನೀಡಿದ್ದಾರೆ.

ಸಂಕೇಶ್ವರ್ ಜೊತೆ ಹುಬ್ಬಳ್ಳಿಯಲ್ಲಿ ಕೈಗಾರಿಕೋದ್ಯಮಿಗಳು ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ಬೆಂಬಲಿಸುವಂತೆ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದಾರೆ. ಸಭೆಯಲ್ಲಿ ಮಾತನಾಡಿದ ವಿಜಯ್ ಸಂಕೇಶ್ವರ್ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ ಮೋದಿಯವರಿಗೆ ಇನ್ನೂ ಹೆಚ್ಚಿನ ಶಕ್ತಿ ನೀಡುವಲ್ಲಿ ಎಲ್ಲರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು‌. ಹುಬ್ಬಳ್ಳಿ ಮಾತ್ರವಲ್ಲ ರಾಜ್ಯದ ಜನರಲ್ಲಿ ನಾನು ಕೇಳಿಕೊಳ್ಳುತ್ತೇನೆ. ದೇಶ ಕಟ್ಟುವ ಕಾರ್ಯದಲ್ಲಿ ಯಾರೂ ಮನೆಯಲ್ಲಿ ಕುಳಿತುಕೊಳ್ಳಬಾರದು. ಬಂದು ಮತ ಹಾಕಿ. ಬಿಜೆಪಿ ಬೆಂಬಲಿಸಿ, ಮೋದಿ ಅವರ ಕೈ ಇನ್ನಷ್ಟು ಬಲಪಡಿಸಿ ಎಂದು ಸಂಕೇಶ್ವರ್ ಹೇಳಿದರು.‌

Also Read:

ಸಿಎಂ ಬಸವರಾಜ ಬೊಮ್ಮಾಯಿ ಪರ ಅಬ್ಬರದ ಪ್ರಚಾರ ನಡೆಸಿ, ಮತ ಯಾಚಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ ಸೆಂಟ್ರಲ್ ನಲ್ಲಿ ತಮ್ಮ ಸಮುದಾಯದ ಮತಗಳು ನನ್ನ ಜೊತೆ ಬರಲಿದ್ದು, ಈ ನಿಟ್ಟಿನಲ್ಲಿ ಸಮುದಾಯದ ಮುಖಂಡರು ನನ್ನ ಪರ ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸದಲ್ಲಿ ಶೆಟ್ಟರ್ ಇದ್ದಾರೆ. ಆದರೆ, ಸಮುದಾಯದ ಮುಖಂಡರಲ್ಲಿ ಶೆಟ್ಟರ್ ಅವರಷ್ಟೇ ಪ್ರಭಾವ ಹೊಂದಿರುವ ಸಂಕೇಶ್ವರ್ ಬಿಜೆಪಿ ಜೊತೆ ನಿಂತಿದ್ದಾರೆ. ಲಿಂಗಾಯತ ಪ್ರಭಾವಿ ಮಠಗಳ ಸ್ವಾಮೀಜಿಗಳ ಜೊತೆಯೂ ಉತ್ತಮ ಸಂಪರ್ಕ ಹೊಂದಿರುವ ಸಂಕೇಶ್ವರ್, ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿಗೆ ಡ್ಯಾಮೇಜ್ ಕಂಟ್ರೋಲರ್ ಆಗಿ ಕಾಣಿಸ್ತಿದ್ದಾರೆ.

ಇನ್ನು ಇಂದು ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಪರ ಕಾಲ್ನಡಿಗೆ ಮೂಲಕ ಚುನಾವಣಾ ಪ್ರಚಾರ ನಡೆಸಿದ ಪ್ರಲ್ಹಾದ್ ಜೋಶಿ, ಬಿಜೆಪಿಗೆ ಮತ ಚಲಾಯಿಸುವಂತೆ ಜ‌ನರಲ್ಲಿ ಮನವಿ ಮಾಡಿದರು.

ಕರ್ನಾಟಕ ವಿಧಾನಸಭಾ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:47 pm, Fri, 5 May 23

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್