ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪಾಕಿಸ್ತಾನ ಮಾದರಿ‌ ಆಡಳಿತ: ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ದೇಶವನ್ನು ಮಾವೋವಾದಿ ದೇಶ ಮಾಡಲು ಹೊರಟಿದೆ ಎಂಬುದು ರಾಹುಲ್ ಗಾಂಧಿ ಭಾಷಣದಿಂದ ತಿಳಿಯುತ್ತದೆ. ಜನರ ಬಳಿ ಎರಡು ಬೈಕ್, ಮನೆ ಇದ್ದರೆ ಒಂದನ್ನು ಕಸಿದುಕೊಳ್ಳುತ್ತಾರೆ. ಕಾಂಗ್ರೆಸ್ ಪಕ್ಷ ದೇಶಕ್ಕೆ ಸಂಪತ್ತು ಸೃಷ್ಟಿ ಮಾಡುವವರ ವಿರುದ್ಧ ಹೊರಟಿದೆ ಎಂದು ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಸಿದ್ದಾರೆ.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪಾಕಿಸ್ತಾನ ಮಾದರಿ‌ ಆಡಳಿತ: ಪ್ರಲ್ಹಾದ್ ಜೋಶಿ ವಾಗ್ದಾಳಿ
ಪ್ರಲ್ಹಾದ್ ಜೋಶಿ
Edited By:

Updated on: Apr 24, 2024 | 2:37 PM

ಹುಬ್ಬಳ್ಳಿ, ಏಪ್ರಿಲ್ 24: ಕಾಂಗ್ರೆಸ್ (Congress) ಪಕ್ಷ ಅಧಿಕಾರಕ್ಕೆ ಬಂದಾಗ ಪಾಕಿಸ್ತಾನ ಮಾದರಿ ಆಡಳಿತ ಬರುತ್ತದೆ. ಕಾಂಗ್ರೆಸ್‌ನವರು‌ ತುಷ್ಟೀಕರಣದ ಪರಾಕಾಷ್ಠೆ ತಲುಪುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಟೀಕಾ ಪ್ರಹಾರ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಕನ್ನಡ‌ ಮಾತಾಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ನನ್ನನ್ನು ಭೇಟಿಯಾಗಿ ತಮಗೆ ಸೂಕ್ತ ಭದ್ರತೆ ಇಲ್ಲ ಎಂದು ಹೇಳಲು ಬಂದಿದ್ದರು. ನಟ, ನಟಿಗೇ ರಕ್ಷಣೆ ಇಲ್ಲವೆಂದರೆ ಸಾಮಾನ್ಯ ಜನರ ಪಾಡೇನು ಎಂದು ಪ್ರಶ್ನಿಸಿದರು.

ಹನುಮಾನ್ ಚಾಲಿಸಾ ಕೇಳುವವನ ಮೇಲೆ ಹಲ್ಲೆ ಆಯಿತು. ಹೋರಾಟ ಮಾಡಿದ ಮೇಲೆ ಆರೋಪಿಗಳ‌ನ್ನು ಬಂಧಿಸಿದರು. ಅಪರಾಧಿ ಕೃತ್ಯ ಮಾಡುವವರಿಗೆ ಸರ್ಕಾರದಿಂದ ತಮಗೆ ರಕ್ಷಣೆ ಎಂಬ ಭಾವನೆ ಬರುವಂತಾಗಿದೆ. ಹೀಗೆ ಮಾಡುವವರ ಕೊರಳಲ್ಲಿ ಅಲ್ಪಸಂಖ್ಯಾತರು ಅನ್ನೋ‌ ಟ್ಯಾಗ್ ಇದೆ. ಹುಬ್ಬಳ್ಳಿಯಲ್ಲಿ ಒಬ್ಬ ಹುಡುಗಿಗೆ ಗಿಫ್ಟ್ ಕೊಟ್ಟಿದ್ದ,‌ ನಂತರ ಮನ ಬಂದಂತೆ ಥಳಿಸಿದ. ದಲಿತ ವ್ಯಕ್ತಿಯನ್ನು ಕೊಂದೇ ಹಾಕಿದರು. ಕಾಂಗ್ರೆಸ್​​ನವರಿಗೆ ಕಳಕಳಿಯಿಲ್ಲ. ಈ ಬಗ್ಗೆ ಮನೆಮನೆಗಳಲ್ಲಿ ಜನ ಮಾತಾಡುತ್ತಿದ್ದಾರೆ ಆ ಬಗ್ಗೆ ಇಂಟಲಿಜನ್ಸ್ ರಿಪೋರ್ಟ್ ಹೋಗಿರಬಹುದು. ನಷ್ಟ ಆಗಬಹುದೆಂಬ ಹೆದರಿಕೆಯಿಂದ ಈಗ ಕ್ರಮ ಎನ್ನುತ್ತಿದ್ದಾರೆ ಎಂದು ಜೋಶಿ ಹೇಳಿದರು.

ನೇಹಾ ಕೊಲೆ ಪ್ರಕರಣದ ಬಗ್ಗೆ ಉಲ್ಲೇಖಿಸಿ, ‘ಏನಾಗಿದೆ ನಿರಂಜನ’ ಅಂತಾ ಸಿದ್ದರಾಮಯ್ಯ ಅವರದೇ‌ ಭಾಷೆಯಲ್ಲಿ ಕೇಳಬೇಕಿತ್ತು. ಸಂತೋಷ್ ಲಾಡ್ ಮೊದಲ ದಿನ ಭೇಟಿ‌ ಕೊಟ್ಟಾಗ ಸಿಎಮ್ ಜೊತೆ ಮಾತನಾಡಿಸಬೇಕಿತ್ತು. ನಾವು ಹಿಂದೂ ಮುಸ್ಲಿಮ್ ಎಂದು ಭೇದಭಾವ ಮಾಡಲ್ಲ. ಯಾರ ವಿರುದ್ಧ ಅನ್ಯಾಯವಾದರೂ ನಾವು‌ ವಿರೋಧಿಸುತ್ತೇವೆ ಎಂದು ಜೋಶಿ ಹೇಳಿದರು.

ಇದನ್ನೂ ಓದಿ: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಜನರ ಬಳಿ 2 ಬೈಕ್, 2 ಮನೆ ಇದ್ದರೆ 1 ಕಸಿದುಕೊಳ್ಳುತ್ತಾರೆ: ಜೋಶಿ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ದೇಶವನ್ನು ಮಾವೋವಾದಿ ದೇಶ ಮಾಡಲು ಹೊರಟಿದೆ ಎಂಬುದು ರಾಹುಲ್ ಗಾಂಧಿ ಭಾಷಣದಿಂದ ತಿಳಿಯುತ್ತದೆ. ಜನರ ಬಳಿ ಎರಡು ಬೈಕ್, ಮನೆ ಇದ್ದರೆ ಒಂದನ್ನು ಕಸಿದುಕೊಳ್ಳುತ್ತಾರೆ. ಕಾಂಗ್ರೆಸ್ ಪಕ್ಷ ದೇಶಕ್ಕೆ ಸಂಪತ್ತು ಸೃಷ್ಟಿ ಮಾಡುವವರ ವಿರುದ್ಧ ಹೊರಟಿದೆ. ಮಾವೋವಾದಿ ಮನಸ್ಥಿತಿ ಇಟ್ಟುಕೊಂಡು ಎಲ್ಲರನ್ನೂ ಟಾರ್ಗೆಟ್ ಮಾಡುತ್ತಿದ್ದಾರೆ. ವಿಫಲವಾಗಿರುವ ಮಾವೋವಾದಿ ವಿಚಾರದ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜೋಶಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us